ರಾಜ್ಯದಲ್ಲಿ ಜ್ಯುವೆಲ್ಲರಿ ಶಾಪ್ ರಾಬರಿ ಪ್ರಕರಣಗಳು ಹೆಚ್ಚಳ, ಆತಂಕದಲ್ಲಿ ಮಾಲೀಕರು!

Kannadaprabha News   | Kannada Prabha
Published : Aug 18, 2025, 07:30 AM IST
Jewellery Shop Robbery Mandya

ಸಾರಾಂಶ

ಮಳವಳ್ಳಿ ತಾಲೂಕಿನ ಕಿರುಗಾವಲು ಗ್ರಾಮದಲ್ಲಿ ಚಿನ್ನಾಭರಣ ಅಂಗಡಿಯ ದರೋಡೆ ವೇಳೆ ಸಾಕ್ಷಿಯನ್ನು ನಾಶಮಾಡಲು ಹೋಟೆಲ್ ಮಾಲೀಕ ಮಾದಪ್ಪನವರನ್ನು ಉಸಿರುಗಟ್ಟಿಸಿ ಕೊಲೆ ಮಾಡಲಾಗಿದೆ. 

ಮಳವಳ್ಳಿ (ಆ.18): ಚಿನ್ನಾಭರಣ ಅಂಗಡಿಯ ದರೋಡೆಯನ್ನು ನೋಡಿದವನನ್ನು ಉಸಿರುಗಟ್ಟಿಸಿ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಕಿರುಗಾವಲು ಗ್ರಾಮದಲ್ಲಿ ಭಾನುವಾರ ಮುಂಜಾನೆ ಸಂಭವಿಸಿದೆ. 

ಹೋಟೆಲ್‌ ಮಾಲೀಕ ಮಾದಪ್ಪ (೭೨) ಕೊಲೆಯಾದವರು. ಮಹಾಲಕ್ಷ್ಮೀ ಜುವೆಲ್ಲರ್ಸ್ ಆ್ಯಂಡ್ ಬ್ಯಾಂಕರ್ಸ್‌ಗೆ ಭಾನುವಾರ ನಸುಕಿನ ಜಾವ ೨ರ ಸಮಯಕ್ಕೆ ದರೋಡೆಕೋರರು 12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ದೋಚಿ ಪರಾರಿಯಾಗುವಾಗ ಶಬ್ಧವಾಗಿದೆ. ಆಗ ಹೋಟೆಲ್‌ನಿಂದ ಹೊರಬಂದು ಮಾದಪ್ಪ, ದರೋಡೆಕೋರರನ್ನು ನೋಡಿದ್ದಾರೆ. ಹೀಗಾಗಿ, ಅವರನ್ನು ಕೊಲೆ ಮಾಡಿ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ಹೇಗೆ ನಡೆಯಿತು?

ದುಷ್ಕರ್ಮಿಗಳು ಬಂದಿದ್ದಾರೆ. ಅಂಗಡಿ ಬಾಗಿಲನ್ನು ಗ್ಯಾಸ್ ಕಟ್ಟರ್‌ನಿಂದ ಕತ್ತರಿಸಿ ಒಳನುಗ್ಗಿದ ದರೋಡೆಕೋರರು ₹12 ಲಕ್ಷ ಮೌಲ್ಯದ 100 ಗ್ರಾಂ ಚಿನ್ನ, 2 ಕೆ.ಜಿ. ಬೆಳ್ಳಿ ದೋಚಿ ಪರಾರಿಯಾಗುವ ವೇಳೆ ಶಬ್ಧವಾಗಿದೆ. ಇದೇ ಸಮಯಕ್ಕೆ ಮಹದೇಶ್ವರ ಹೋಟೆಲ್ ಮಾಲೀಕ ಮಾದಪ್ಪ ನಸುಕಿನ ಜಾವ ಎದ್ದಿದ್ದಾರೆ. ಶಬ್ಧ ಕೇಳಿ ಮಾದಪ್ಪ ಹೊರಗೆ ಬಂದಾಗ ದರೋಡೆಕೋರರನ್ನು ನೋಡಿದ್ದಾರೆ. ಇದರಿಂದ ಗಾಬರಿಗೊಂಡ ದರೋಡೆಕೋರರು ಮಾದಪ್ಪ ಅವರ ಮೇಲೆ ಹಲ್ಲೆ ನಡೆಸಿ, ಸ್ಥಳದಲ್ಲೇ ಕತ್ತು ಹಿಸುಕಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬೆಂಗಳೂರಿನ ಬಾಡಿಗೆ ಮನೆಯಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ
ಬೆಂಗಳೂರು ಅಪಾರ್ಟ್‌ಮೆಂಟ್‌ನ 16 ಕುಟುಂಬಗಳಿಗೆ ರೌಡಿಸಂ ದರ್ಶನ; ಮಾಟ-ಮಂತ್ರ ಮಾಡಿಸಿ ಕಿರುಕುಳ!