ಕಲಬುರಗಿ: ಸರ್ಕಾರಿ ಶಾಲೆ ವಿದ್ಯಾರ್ಥಿನಿ ಮೇಲೆ ಅತಿಥಿ ಶಿಕ್ಷಕನಿಂದ ಅತ್ಯಾಚಾರ!

Published : Apr 07, 2025, 11:47 AM ISTUpdated : Apr 07, 2025, 12:30 PM IST
ಕಲಬುರಗಿ: ಸರ್ಕಾರಿ ಶಾಲೆ ವಿದ್ಯಾರ್ಥಿನಿ ಮೇಲೆ ಅತಿಥಿ ಶಿಕ್ಷಕನಿಂದ ಅತ್ಯಾಚಾರ!

ಸಾರಾಂಶ

ಕಲಬುರಗಿ ಜಿಲ್ಲೆಯಲ್ಲಿ, ಸರ್ಕಾರಿ ಶಾಲೆಯ ಅತಿಥಿ ಶಿಕ್ಷಕ ಶಿವರಾಜ್, ಅಪ್ರಾಪ್ತ ವಿದ್ಯಾರ್ಥಿನಿಯ ಮನೆಯಲ್ಲಿ ಅತ್ಯಾಚಾರ ಎಸಗಿದ್ದಾನೆ. ಪೋಕ್ಸೋ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಶಿಕ್ಷಕನು ವಿದ್ಯಾರ್ಥಿನಿಯ ತಂದೆ-ತಾಯಿ ಕೆಲಸಕ್ಕೆ ಹೋದಾಗ ಈ ಕೃತ್ಯ ಎಸಗಿದ್ದಾನೆ. ಗ್ರಾಮಸ್ಥರು ಆರೋಪಿಗೆ ಕಠಿಣ ಶಿಕ್ಷೆ ನೀಡುವಂತೆ ಒತ್ತಾಯಿಸಿದ್ದಾರೆ.

ಕಲಬುರಗಿ (ಏ.07): ಸರ್ಕಾರಿ ಶಾಲೆಯಲ್ಲಿ ಅತಿಥಿ ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದ ಕಾಮುಕ ಶಿಕ್ಷನೊಬ್ಬ ಅಪ್ರಾಪ್ತ ವಿದ್ಯಾರ್ಥಿನಿಯ ಮನೆಯಲ್ಲಿ ಯಾರೂ ಇಲ್ಲದೇ ಇದ್ದಾಗ ಮನೆಯೊಳಗೆ ನುಗ್ಗಿ ಅತ್ಯಾಚಾರ ಮಾಡಿದ್ದಾನೆ.

ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಮಾದನಹಿಪ್ಪರಗಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪೋಕ್ಸೋ ಕೆಸ್ ದಾಖಲು ಮಾಡಲಾಗಿದೆ. ಇದೀಗ ಅತ್ಯಾಚಾರ ಆರೋಪಿ ಅತಿಥಿ ಶಿಕ್ಷಕ ಶಿವರಾಜ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಗ್ರಾಮಸ್ಥರು ಈತನಿಗೆ ಸರಿಯಾದ ಶಿಕ್ಷೆ ಆಗಬೇಕು ಎಂದು ಒತ್ತಾಯಿಸಿದ್ದಾರೆ.

ಸರ್ಕಾರಿ ಶಾಲೆಯಲ್ಲಿ ಕಳೆದ ನಾಲ್ಕೈದು ವರ್ಷಗಳಿಂದ ಅತಿಥಿ ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದ ಶಿವರಾಜ್ ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಮಾಡಿದ ಆರೋಪಿ ಆಗಿದ್ದಾನೆ. ಸ್ವ ಗ್ರಾಮದಲ್ಲಿ ತಾನು ವಿದ್ಯಾಭ್ಯಾಸ ಮಾಡಿ ಓದಿ, ಬೆಳೆದ ಶಾಲೆಗೆ ಶಾಲೆಯಲ್ಲಿಯೇ ಅತಿಥಿ ಶಿಕ್ಷಕನಾಗಿ ಸೇವೆ ಸಲ್ಲಿಸುತ್ತಿದ್ದನು. ಆದರೆ, ಇಡೀ ಗ್ರಾಮದ ಜನರು ಈತನಿಗೆ ಪರಿಚಿತವಿರುವ ಹಿನ್ನೆಲೆಯಲ್ಲಿ ಎಲ್ಲ ವಿದ್ಯಾರ್ಥಿಗಳ ಪೂರ್ವಾಪರ ಮತ್ತು ಹಿನ್ನೆಲೆಯನ್ನೂ ತಿಳಿದುಕೊಂಡಿದ್ದಾನೆ. ಈತನ ಕೆಲವು ಸಂಬಂಧಿಕರ ಮಕ್ಕಳೂ ಈ ಸರ್ಕಾರಿ ಶಾಲೆಗೆ ಬರುತ್ತಿದ್ದಾರೆ.

ಆದರೆ, ಪಾಠ ಮಾಡುತ್ತಲೇ ಆತನ ಕಾಮುಕ ದೃಷ್ಟಿ ಅಪ್ರಾಪ್ತ 8ನೇ ತರಗತಿ ವಿದ್ಯಾರ್ಥಿನಿಯ ಮೇಲೆ ಬಿದ್ದಿದೆ. ಅದೂ ಕೂಡ ತಮ್ಮ ಗ್ರಾಮದಲ್ಲಿ ಕೂಲಿ ಕೆಲಸ ಮಾಡಿಕೊಂಡು ಜೀವನ ಮಾಡುತ್ತಿದ್ದ ಬಡ ಕಾರ್ಮಿಕನ ಮಗಳಾಗಿದ್ದ ವಿದ್ಯಾರ್ಥಿನಿಯ ಮೇಲೆ ಕಣ್ಣು ಹಾಕಿದ್ದಾನೆ. ವಿದ್ಯಾರ್ಥಿನಿಯ ಚಲನವಲನ ಗಮನಿಸುತ್ತಿದ್ದ ಈ ಕಾಮುಕ ಶಿಕ್ಷಕ ವಿದ್ಯಾರ್ಥಿನಿಯ ತಂದೆ-ತಾಯಿ ಕೂಲಿ ಕೆಲಸಕ್ಕೆ ಹೋದ ವೇಳೆ ವಿದ್ಯಾರ್ಥಿನಿ ಮನೆಯಲ್ಲಿ ಒಬ್ಬಳೇ ಇರುವುದನ್ನು ಗಮನಿಸಿದ್ದಾನೆ. ಆಗ ಏಕಾಏಕಿ ಮನೆಯೊಳಗೆ ನುಗ್ಗಿದ ಶಿಕ್ಷಕ ಶಿವರಾಜ್ ತಾನೇ ಪಾಠ ಕಲಿಸಿದ ವಿದ್ಯಾರ್ಥಿನಿ, ಅದರಲ್ಲಿಯೂ ಅಪ್ರಾಪ್ತೆ ಎಂಬುದನ್ನೂ ಅರಿಯದೇ ಆಕೆಯ ಮೇಲೆ ಮೃಗದಂತೆ ಎರಗಿದ್ದಾನೆ.

ಇದನ್ನೂ ಓದಿ: ಬೆಂಗಳೂರಲ್ಲಿ ಮಧ್ಯರಾತ್ರಿ ಬಿಹಾರ ಯುವತಿ ಎಳೆದೊಯ್ದು ಅತ್ಯಾಚಾರ ಮಾಡಿದ ಆಶಿಫ್ ಅಂಡ್ ಬ್ರದರ್!

ಕಾಮುಕ ಶಿಕ್ಷಕನ ಮೃಗೀಯ ವರ್ತನೆಯಿಂದ ಅಪ್ರಾಪ್ತ ವಿದ್ಯಾರ್ಥಿನಿ ಚೀರಾಡುತ್ತಾ ತಪ್ಪಸಿಕೊಳ್ಳಲು ಸಾಧ್ಯವಾಗದೇ ನರಳಿದ್ದಾಳೆ. ಇತ್ತ ತನ್ನ ಕಾಮತೃಷೆಗೆ ವಿದ್ಯಾರ್ಥಿನಿ ಬಲಿ ಪಡೆದ ಶಿಕ್ಷಕನ ಕ್ರೂರ ಕೃತ್ಯದ ಬಗ್ಗೆ ವಿದ್ಯಾರ್ಥಿನಿ ಪೋಷಕರ ಬಳಿ ಹೇಳಿಕೊಂಡಿದ್ದು, ಅವರ ಪೋಷಕರು ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದಾರೆ. ಎರಡು ದಿನಗಳ ಕಾಲ ನಾಪತ್ತೆ ಆಗಿದ್ದ ಕಾಮುಕ ಶಿಕ್ಷಕ ಶಿವರಾಜ್‌ನಲ್ಲಿ ಇದೀಗ ಪೊಲೀಸರು ಬಂಧಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬೆಂಗಳೂರು ಅಪಾರ್ಟ್‌ಮೆಂಟ್‌ನ 16 ಕುಟುಂಬಗಳಿಗೆ ರೌಡಿಸಂ ದರ್ಶನ; ಮಾಟ-ಮಂತ್ರ ಮಾಡಿಸಿ ಕಿರುಕುಳ!
ಕೆಲಸ ಇಲ್ಲದ ಗಂಡನಿಗೆ ಪತ್ನಿ ಶೀಲದ ಮೇಲೆ ಶಂಕೆ: ನಿದ್ರೆಯಲ್ಲಿದ್ದ ಮಗಳ ಕತ್ತು ಸೀಳಿದ ಪತಿ