
ಕಲಬುರಗಿ(ಸೆ. 19) ಮರಕ್ಕೆ ಕಾರು ಡಿಕ್ಕಿಯಾಗಿ ಕಲಬುಎಗಿ ವಿವಿ ಕುಲಸಚಿವ ಸಾವನ್ನಪ್ಪಿದ್ದಾರೆ. ಕಲಬುರಗಿಯ ಶರಣಬಸವ ಖಾಸಗಿ ವಿವಿಯ ಮೌಲ್ಯಮಾಪನ ವಿಭಾಗದ ಕುಲಸಚಿವ ಲಿಂಗರಾಜ್ ಶಾಸ್ತ್ರಿ ದುರ್ಮರಣಕ್ಕೆ ಈಡಾಗಿದ್ದಾರೆ.
ಬೀದರ್ ಜಿಲ್ಲೆ ಬಸವಕಲ್ಯಾಣ ತಾಲೂಕಿನ ಹಣಮಂತವಾಡಿ ಬಳಿ ಘಟನೆ ನಡೆದಿದೆ. ಲಿಂಗರಾಜ್ ಶಾಸ್ತ್ರಿ ಅವರ ಕಾರು ರಸ್ತೆ ಬದಿಯ ಮರಕ್ಕೆ ಡಿಕ್ಕಿಯಾದ ಪರಿಣಾಮ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
1989ರಲ್ಲಿ ಖಾಲಿ ಕೈಯಲ್ಲಿ ಬಂದಿದ್ದ ಶಂಕರ್ ಇಷ್ಟೊಂದು ಆಸ್ತಿ ಸಂಪಾದಿಸಿದ್ದು ಹೇಗೆ?
ಶರಣಬಸವ ವಿವಿಯ ಪ್ರಾಧ್ಯಾಕರು, ಸಿಬ್ಬಂದಿ ವರ್ಗ ಸ್ಥಳಕ್ಕೆ ತೆರಳಿದ್ದಾರೆ ಮುಡಬಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಬೆಂಗಳೂರಿನ ಎರಡು ಘೋರ ಅಪಘಾತಗಳ ಕರಾಳ ನೆನಪು ಮಾಸಿಲ್ಲ. ಕೋರಮಂಗಲದ ಆಡಿ ಅಪಘಾತ ಮತ್ತು ಎಲೆಕ್ಟ್ರಾನಿಕ್ ಸಿಟಿ ಮೇತ್ಸೇತುವೆ ಅಪಘಾತದಲ್ಲಿಯೂ ಪ್ರಾಣ ಹಾನಿಯಾಗಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ