ಒಂಟಿ ಮಹಿಳೆ ಕೊಲೆ ಪ್ರಕರಣ: ಪ್ರಮುಖ ಆರೋಪಿಯ ತಾಯಿ ಮನನೊಂದು ಆತ್ಮಹತ್ಯೆಗೆ ಯತ್ನ

Published : Jun 22, 2023, 02:46 PM IST
ಒಂಟಿ ಮಹಿಳೆ ಕೊಲೆ ಪ್ರಕರಣ: ಪ್ರಮುಖ ಆರೋಪಿಯ ತಾಯಿ ಮನನೊಂದು ಆತ್ಮಹತ್ಯೆಗೆ ಯತ್ನ

ಸಾರಾಂಶ

ನಗರದ ಒಂಟಿ ಮಹಿಳೆ ಕೊಲೆ ಪ್ರಕರಣದ ಪ್ರಮುಖ ಆರೋಪಿಯ ತಾಯಿ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಅಬ್ಬಲಗೆರೆ ಗ್ರಾಮದಲ್ಲಿ ನಡೆದಿದೆ.

ಶಿವಮೊಗ್ಗ (ಜೂ.22) : ನಗರದ ಒಂಟಿ ಮಹಿಳೆ ಕೊಲೆ ಪ್ರಕರಣದ ಪ್ರಮುಖ ಆರೋಪಿಯ ತಾಯಿ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಅಬ್ಬಲಗೆರೆ ಗ್ರಾಮದಲ್ಲಿ ನಡೆದಿದೆ.

ಶಿವಮೊಗ್ಗ ತಾಲೂಕಿನ ಹುಣಸೋಡು ಗ್ರಾಮದ ಸೀತಾ ಬಾಯಿ (50) ಆತ್ಮಹತ್ಯೆಗೆ ಮುಂದಾದವರು. ಇದೇ ಜೂನ್ 17ರಂದು ಶಿವಮೊಗ್ಗದ ವಿಜಯನಗರದಲ್ಲಿ ಕಮಲಮ್ಮ (55) ಎಂಬುವರನ್ನು ಕೊಲೆ ಮಾಡಲಾಗಿತ್ತು. ಈ ಪ್ರಕರಣದ ಪ್ರಮುಖ ಆರೋಪಿ ಕಾರು ಚಾಲಕ ಹನುಮಂತ ನಾಯ್ಕ ನಾಪತ್ತೆಯಾಗಿದ್ದ. ಕಮಲಮ್ಮ ನವರನ್ನು ಕೊಲೆಗೈದು ಸುಮಾರು 35 ಲಕ್ಷ ರೂ. ಹಣವನ್ನು ದೋಚಲಾಗಿತ್ತು ಈ ಹಿನ್ನೆಲೆಯಲ್ಲಿ ಕೊಲೆಗಾರನ ಸುಳಿವು ಪಡೆದ ಶಿವಮೊಗ್ಗದ ತುಂಗಾನಗರ ಪೊಲೀಸರು ಆರೋಪಿ ಹನುಮಂತ ನಾಯ್ಕ ನ ಬೆನ್ನು ಬಿದ್ದಿದ್ದರು.

ಅಪ್ರಾಪ್ತನಿಗೆ ಬೈಕ್ ಕೊಟ್ಟಿದ್ದಕ್ಕೆ ಮಾಲೀಕನಿಗೆ ₹20 ಸಾವಿರ ದಂಡ ವಿಧಿಸಿದ ಕೋರ್ಟ್!

ಕೊಲೆ ಪ್ರಕರಣದ ಹಿನ್ನೆಲೆಯಲ್ಲಿ ಮಗ  ಹನುಮಂತ ನಾಯ್ಕ , ಪತಿ  ರೂಪ್ಲಾ ನಾಯ್ಕ  ಇಬ್ಬರು ಮನೆ ಬಿಟ್ಟು ಪರಾರಿಯಾಗಿದ್ದರು, ಇದರಿಂದ ಮನನೊಂದ ಸೀತಾಬಾಯಿ ಸಂಬಂಧಿಕರ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ,

ಇಂದು ಬೆಳಗ್ಗೆ 10ಕ್ಕೆ ಆತ್ಮಹತ್ಯೆಗೆ ಯತ್ನಿಸಿದ ಸೀತಾಬಾಯಿಯನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲು ಮಾಡಿರುವ ಸಂಬಂಧಿಕರು.  ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ(Meggan hospital shivamogga)ಯಲ್ಲಿ ಸೀತಾ ಬಾಯಿ ಚಿಕಿತ್ಸೆಗೆ ದಾಖಲು ಮಾಡಲಾಗಿದೆ. ಸದ್ಯ ಐಸಿಯು ನಲ್ಲಿ ಚಿಕಿತ್ಸೆ ನೀಡುತ್ತಿರುವ ವೈದ್ಯರು. ಪ್ರಾಣಪಾಯದಿಂದ ಸೀತಾಬಾಯಿ ಪಾರಾಗಿದ್ದಾರೆ. 

ಕಾರು ಚಾಲಕನ ಕೆಲಸ ಕೊಟ್ಟ ಮಾಲೀಕನ ಪತ್ನಿಯನ್ನು ತನ್ನ ಮಗ  ಕೊಲೆ ಮಾಡಿದ್ದಕ್ಕೆ ಬೇಸರಗೊಂಡಿದ್ದ ಸೀತಾಬಾಯಿ. ಅನ್ನ ಕೊಟ್ಟ ಮನೆಗೆ ಕನ್ನ ಹಾಕಿದ್ದಲ್ಲದೆ ಮಾಲೀಕನ ಪತ್ನಿಯನ್ನು ಕೊಲೆ ಮಾಡಿದ್ದಕ್ಕೆ ನೊಂದುಕೊಂಡಿದ್ದ ಸೀತಾಬಾಯಿ. ಪೊಲೀಸರು ಬೆನ್ನು ಬೀಳುತ್ತಿದ್ದಂತೆ ಮಗ, ಪತಿ ಎಲ್ಲರೂ ಪರಾರಿಯಾಗಿ ಸೀತಾಬಾಯಿಯನ್ನು ಒಬ್ಬಂಟಿಯಾಗಿ ಬಿಟ್ಟು ಹೋಗಿದ್ದರು. ಇಂಥ ಮಕ್ಕಳಿಂದ ಹೆತ್ತವರು ತಲೆತಗ್ಗಿಸುವಂತಾಗಿದೆ.

ಮಹಿಳೆ ಬಾಯಿಗೆ ಬಟ್ಟೆ ತುರುಕಿ ಉಸಿರುಗಟ್ಟಿಸಿ ಕೊಲೆ; ನಗದು ಹಣ ದೋಚಿದ ದುಷ್ಕರ್ಮಿಗಳು

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಚಿಕ್ಕಮಗಳೂರು ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹಂತಕರನ್ನು ಸುಮ್ಮನೆ ಬಿಡಲ್ಲ: ಸಿಎಂ ಡಿಸಿಎಂ
ಮಧುಗಿರಿ: ಕದ್ದ ಎಟಿಎಂ ಭಾರ ಇದೆ ಎಂದು ರಸ್ತೆಯಲ್ಲೇ ಬಿಟ್ಟು ಹೋದರು