
ಶಿವಮೊಗ್ಗ, (ಮೇ.27): ಕ್ಷುಲ್ಲಕ ಕಾರಣಕ್ಕೆ ಕೂಲಿ ಕಾರ್ಮಿಕನ ಮೇಲೆ ಕುಣಜೆ ಮಂಜುನಾಥ್ ಗೌಡ ಎಂಬುವವರು ನಾಡ ಬಂದೂಕಿನಿಂದ ಗುಂಡು ಹಾರಿಸಿರುವ ಘಟನೆ ಮಂಗಳವಾರ ರಾತ್ರಿ ತೀರ್ಥಹಳ್ಳಿ ತಾಲೂಕು ಹಣಗೆರೆ ಕಟ್ಟೆಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಹಣಗೆರೆ ಕಟ್ಟೆ ನಿವಾಸಿ ಹಬೀಬ್ ಎಂಬುವವರ ತೋಟದಲ್ಲಿ ಕೆಲಸ ಮಾಡಿಕೊಂಡಿದ್ದ ರಾಮಚಂದ್ರ ಎಂಬುವವರ ಮೇಲೆ ಕುಣಜೆ ಮಂಜುನಾಥ್ ಗೌಡ ಎಂಬುವವರು ಗುಂಡು ಹಾರಿಸಿ ಪರಾರಿಯಾಗಿದ್ದಾರೆ.
ಮದುವೆಗೆ ನಿರಾಕರಣೆ: ಯುವತಿಯ ಮೇಲೆ ಪಾಗಲ್ ಪ್ರೇಮಿಯಿಂದ ಮಚ್ಚಿನಿಂದ ಹಲ್ಲೆ
ತೋಟದಿಂದ ತನ್ನ ಮನೆಗೆ ಬೈಕ್ ನಲ್ಲಿ ಹೋಗುತ್ತಿದ್ದಾಗ ಕುಣಜೆ ಮಂಜುನಾಥ್ ಗೌಡ ಹತ್ತಿರದ ಕಟ್ಟೆಯಲ್ಲಿ ಬಂದೂಕು ಹಿಡಿದುಕೊಂಡು ಕುಳಿತಿದ್ದ ಎನ್ನಲಾಗಿದೆ. ಬೈಕ್ ಶಬ್ದವೆಂದರೆ ನನಗೆ ಆಗುವುದಿಲ್ಲವೆಂದು ಏಕಾಏಕಿ ಗುಂಡು ಹಾರಿಸಿದ್ದಾನೆ ಎನ್ನಲಾಗಿದೆ.
ಕುಣಜೆ ಹಾರಿಸಿದ ಗುಂಡು ರಾಮಚಂದ್ರರವರ ತೊಡೆಗೆ ತಗುಲಿ ಕೆಳಗೆ ಬಿದ್ದಿದ್ದಾರೆ. ಈ ಸಂಬಂಧ ಪ್ರಕರಣ ಮಾಳೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಗಾಯಾಳು ರಾಮಚಂದ್ರರವನ್ನ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಕುಣಜೆ ಮಂಜುನಾಥ್ ಗೌಡ ಕನ್ನಡಪರ ಸಂಘಟನೆಯೊಂದರಲ್ಲಿ ಗುರುತಿಸಿಕೊಂಡಿದ್ದು 2013 ರಲ್ಲಿ 1062 ಮತಗಳನ್ನ ಪಡೆದು ತೀರ್ಥಹಳ್ಳಿ ವಿಧಾನ ಸಭಾ ಚುನಾವಣೆಯನ್ನ ಸ್ಪರ್ಧಿಸಿ ಸೋತಿದ್ದರು. ಮತ್ತೆ 2014 ರಲ್ಲಿ ನಡೆದ ಸಂಸದರ ಚುನಾವಣೆಯಲ್ಲಿ ಸ್ಪರ್ಧಿಸಿ ಕೇವಲ 5053 ಮತಗಳನ್ನ ಪಡೆದು ಸೋಲುಕಂಡಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ