
ಕಾನ್ಪುರ(ಜು.10): ಉತ್ತರ ಪ್ರದೇಶದ ಕಾನ್ಪುರದಲ್ಲಿ ಡಿವೈ ಎಸ್ಪಿ ಸೇರಿದಂತೆ 8 ಮಂದಿ ಪೊಲೀಸರ ಹತ್ಯೆಗೈದು ತಲೆ ಮರೆಸಿಕೊಂಡಿದ್ದ ಗ್ಯಾಂಗ್ಸ್ಟರ್ ವಿಕಾಸ್ ದುಬೆಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದರು. ಆದರೆ ಆತನನ್ನು ಕರೆದೊಯ್ಯುತ್ತಿದ್ದಾಗ ಕಾರು ಪಲ್ಟಿಯಾಗಿ ವಿಕಾಸ್ ದುಬೆ ಮತ್ತೆ ಪರಾರಿಯಾಗಲು ಯತ್ನಿಸಿದ್ದ. ಈ ವೇಳೆ ಅವನನ್ನು ಎನ್ಕೌಂಟರ್ ಮಾಡಲಾಗಿದೆ.
ಉತ್ತರ ಪ್ರದೇಶದ ವಿಶೇಷ ಕಾರ್ಯಪಡೆ ಗ್ಯಾಂಗ್ಸ್ಟರ್ ವಿಕಾಸ್ ದುಬೆಯನ್ನು ಮಧ್ಯ ಪ್ರದೇಶದ ಉಜ್ಜಯಿನಿಯಿಂದ ಉತ್ತರ ಪ್ರದೇಶದ ಶಿವ್ಲಿಗೆ ಕರೆದೊಯ್ಯುತ್ತಿತ್ತು. ಆದರೆ ಕಾನ್ಪುರದ ಸಮೀಪ ಟೋಲ್ ಪ್ಲಾಜಾ ಕ್ರಾಸ್ ಮಾಡಿದ ಬಳಿಕ ಬೆಂಗಾವಲಿನ ವಾಹನಗಳಲ್ಲಿ ಒಂದು ಪಲ್ಟಿಯಾಗಿದೆ. ಈ ವೇಳೆ ವಿಕಾಸ್ ದುಬೆ ಪೊಲೀಸರ ಬಳಿ ಗನ್ ಕಸಿದು ಪರಾರಿಯಾಗಲು ಯತ್ನಿಸಿದ್ದಾನೆ. ಆಗ ಪೊಲೀಸರಿಂದ ಗುಂಡಿನ ದಾಳಿ ನಡೆಸಿದ್ದು, ದುಬೆ ಹತನಾಗಿದ್ದಾನೆ.
ಕಾನ್ಪುರ ಬಳಿ ವಿಕಾಸ್ ದುಬೆ ಕರೆದೊಯ್ಯುತ್ತಿದ್ದ ಕಾರು ಪಲ್ಟಿಯಾಗಿತ್ತು. ಈ ವೇಳೆ ವಿಕಾಸ್ ದುಬೆಗೆ ಯತ್ನಿಸಿದ್ದಾನೆ. ಆಗ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ಪೊಲೀಸರ ಗುಂಡಿನ ದಾಳಿಯಲ್ಲಿ ಗ್ಯಾಂಗ್ಸ್ಟರ್ ವಿಕಾಸ್ ದುಬೆ ಹತನಾಗಿದ್ದಾನೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ