8 ಪೊಲೀಸರ ಹತ್ಯೆಗೈದಿದ್ದ ವಿಕಾಸ್ ದುಬೆ ಎನ್‌ಕೌಂಟರ್‌ಗೆ ಬಲಿ!

By Suvarna NewsFirst Published Jul 10, 2020, 8:50 AM IST
Highlights

ಉತ್ತರ ಪ್ರದೇಶದ ಕಾನ್ಪುರದಲ್ಲಿ ಡಿವೈ ಎಸ್​ಪಿ ಸೇರಿದಂತೆ 8 ಮಂದಿ ಪೊಲೀಸರ ಹತ್ಯೆಗೈದು ತಲೆ ಮರೆಸಿಕೊಂಡಿದ್ದ ಗ್ಯಾಂಗ್‌ಸ್ಟರ್  ವಿಕಾಸ್ ದುಬೆ| ಕಾರು ಪಲ್ಟಿಯಾಗಿ ವಿಕಾಸ್‌ ದುಬೆ ಮತ್ತೆ ಪರಾರಿಯಾಗಲು ಯತ್ನ| ವಿಕಾಸ್‌ ದುಬೆ ಎನ್​ಕೌಂಟರ್‌ಗೆ ಬಲಿ

ಕಾನ್ಪುರ(ಜು.10): ಉತ್ತರ ಪ್ರದೇಶದ ಕಾನ್ಪುರದಲ್ಲಿ ಡಿವೈ ಎಸ್​ಪಿ ಸೇರಿದಂತೆ 8 ಮಂದಿ ಪೊಲೀಸರ ಹತ್ಯೆಗೈದು ತಲೆ ಮರೆಸಿಕೊಂಡಿದ್ದ ಗ್ಯಾಂಗ್‌ಸ್ಟರ್  ವಿಕಾಸ್ ದುಬೆಯನ್ನು ಬಂಧಿಸುವಲ್‌ಲಿ ಪೊಲೀಸರು ಯಶಸ್ವಿಯಾಗಿದ್ದರು. ಆದರೆ ಆತನನ್ನು ಕರೆದೊಯ್ಯುತ್ತಿದ್ದಾಗ ಕಾರು ಪಲ್ಟಿಯಾಗಿ ವಿಕಾಸ್‌ ದುಬೆ ಮತ್ತೆ ಪರಾರಿಯಾಗಲು ಯತ್ನಿಸಿದ್ದ. ಈ ವೇಳೆ ಅವನನ್ನು ಎನ್​ಕೌಂಟರ್ ಮಾಡಲಾಗಿದೆ.

ಉತ್ತರ ಪ್ರದೇಶದ ವಿಶೇಷ ಕಾರ್ಯಪಡೆ ಗ್ಯಾಂಗ್‌ಸ್ಟರ್ ವಿಕಾಸ್ ದುಬೆಯನ್ನು ಮಧ್ಯ ಪ್ರದೇಶದ ಉಜ್ಜಯಿನಿಯಿಂದ ಉತ್ತರ ಪ್ರದೇಶದ ಶಿವ್ಲಿಗೆ ಕರೆದೊಯ್ಯುತ್ತಿತ್ತು. ಆದರೆ ಕಾನ್ಪುರದ ಸಮೀಪ ಟೋಲ್​ ಪ್ಲಾಜಾ ಕ್ರಾಸ್​ ಮಾಡಿದ ಬಳಿಕ ಬೆಂಗಾವಲಿನ ವಾಹನಗಳಲ್ಲಿ ಒಂದು ಪಲ್ಟಿಯಾಗಿದೆ. ಈ ವೇಳೆ ವಿಕಾಸ್ ದುಬೆ ಪೊಲೀಸರ ಬಳಿ ಗನ್ ಕಸಿದು ಪರಾರಿಯಾಗಲು ಯತ್ನಿಸಿದ್ದಾನೆ. ಆಗ ಪೊಲೀಸರಿಂದ ಗುಂಡಿನ ದಾಳಿ ನಡೆಸಿದ್ದು, ದುಬೆ ಹತನಾಗಿದ್ದಾನೆ. 

Kanpur: One of the vehicles of the convoy of Uttar Pradesh Special Task Force (STF) that was bringing back from Madhya Pradesh to Kanpur overturns. Police at the spot. More details awaited. pic.twitter.com/ui58XBbd82

— ANI UP (@ANINewsUP)

ಕಾನ್ಪುರ ಬಳಿ ವಿಕಾಸ್ ದುಬೆ ಕರೆದೊಯ್ಯುತ್ತಿದ್ದ ಕಾರು ಪಲ್ಟಿಯಾಗಿತ್ತು. ಈ ವೇಳೆ ವಿಕಾಸ್ ದುಬೆಗೆ ಯತ್ನಿಸಿದ್ದಾನೆ. ಆಗ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ಪೊಲೀಸರ ಗುಂಡಿನ ದಾಳಿಯಲ್ಲಿ ಗ್ಯಾಂಗ್‌ಸ್ಟರ್ ವಿಕಾಸ್ ದುಬೆ ಹತನಾಗಿದ್ದಾನೆ.
 

click me!