ಜಾರಕಿಹೊಳಿ ರಾಸಲೀಲೆ ಸಿ.ಡಿ.ಕೇಸ್: ಮಹತ್ವದ ತೀರ್ಮಾನ ತೆಗೆದುಕೊಂಡ ರಾಜ್ಯ ಸರ್ಕಾರ

Published : Mar 10, 2021, 09:23 PM ISTUpdated : Mar 10, 2021, 09:32 PM IST
ಜಾರಕಿಹೊಳಿ ರಾಸಲೀಲೆ ಸಿ.ಡಿ.ಕೇಸ್: ಮಹತ್ವದ ತೀರ್ಮಾನ ತೆಗೆದುಕೊಂಡ ರಾಜ್ಯ ಸರ್ಕಾರ

ಸಾರಾಂಶ

ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿ.ಡಿ. ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಕೊನೆಗೂ ಮಹತ್ವದ ತೀರ್ಮಾನ ತೆಗೆದುಕೊಂಡಿದೆ.

ಬೆಂಗಳೂರು, (ಮಾ.10): ರಾಜ್ಯ ರಾಜಕಾರಣದಲ್ಲಿ ಭಾರೀ ಸುದ್ದು ಮಾಡುತ್ತಿರುವ ರಮೇಶ್​ ಜಾರಕಿಹೊಳಿ ರಾಸಲೀಲೆ ಸಿ.ಡಿ. ಪ್ರಕರಣದ ತನಿಖೆನ್ನು ರಾಜ್ಯ ಸರ್ಕಾರ ವಿಶೇಷ ಕಾರ್ಯಪಡೆಗೆ (ಎಸ್​ಐಟಿ) ವಹಿಸಿದೆ. 

ಹೆಚ್ಚುವರಿ ಪೊಲೀಸ್ ಆಯುಕ್ತ ಸೌಮೇಂದು ಮುಖರ್ಜಿ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮುಖ್ಯಮಂತ್ರಿ ಮತ್ತು ಹಿರಿಯ ಅಧಿಕಾರಿಗಳ ಜೊತೆಗೆ ಚರ್ಚೆ ನಡೆಸಿ ಆದೇಶ ಹೊರಡಿಸಲಾಗಿದೆ ಎಂದು ಗೃಹ ಸಚಿವರು ತಿಳಿಸಿದ್ದಾರೆ.

ತಿರುವುಗಳ ಮಧ್ಯೆ ಸಿಡಿ ಕೇಸ್; ದೂರೇ ಇಲ್ಲದೆ ಮೇಲೆ ತನಿಖೆ ಎಲ್ಲಿಂದ?

ರಮೇಶ್‌ ಜಾರಕಿಹೊಳಿ ಸೆಕ್ಸ್‌ ಸಿ.ಡಿ ಎಲ್ಲಿ ತಯಾರಾಗಿದೆ, ವೆಬ್​ಸೈಟ್​ಗಳಿಗೆ ಎಲ್ಲಿಂದ ಅಪ್​ಲೋಡ್ ಆಯಿತು ಎಂಬ ಬಗ್ಗೆ ಸಮಗ್ರ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಪೊಲೀಸರಿಗೆ ಸೂಚನೆ ನೀಡಿದ್ದೇನೆ ಎಂದು ಸಚಿವರು ತಿಳಿಸಿದರು.

ಮಾರ್ಚ್ 2 ರಂದು ದಿನೇಶ್ ಕಲ್ಲಹಳ್ಳಿ ಎನ್ನುವರು, 'ಸಚಿವ ರಮೇಶ್ ಜಾರಕಿಹೊಳಿ ಯುವತಿಯೊಬ್ಬಳಿಗೆ ನೌಕರಿ ಕೊಡಿಸುವುದಾಗಿ ಹೇಳಿ, ಅವಳನ್ನು ಲೈಂಗಿಕವಾಗಿ ದುರ್ಬಳಕೆ ಮಾಡಿಕೊಂಡಿದ್ದಾರೆ ಹಾಗೂ ಅವಳಿಗೆ ಮತ್ತು ಅವಳ ಕುಟುಂಬದವರಿಗೆ ಬೆದರಿಕೆ ಹಾಕಲಾಗುತ್ತಿದೆ' ಎಂದು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. 

ಬಳಿಕ ರಮೇಶ್ ಜಾರಕಿಹೊಳಿ ವಿರುದ್ಧ ದೂರು ಕೊಟ್ಟಿದ್ದ ಸಾಮಾಜಿಕ ಹೋರಾಟಗಾರ ದಿನೇಶ್  ದೂರನ್ನು ಹಿಂದಕ್ಕೆ ಪಡೆದುಕೊಂಡಿದ್ದನ್ನು ಇಲ್ಲಿ ಸ್ಮರಿಸಬಹುದು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ವಿಜಯಪುರದಲ್ಲಿ ವಿಕೃತ ಘಟನೆ, ಹಾಲು ತರಲು ಹೋದ ಮಹಿಳೆಯ ಕಿವಿ ಕತ್ತರಿಸಿ ಚಿನ್ನ ಕದ್ದ ಕಳ್ಳರು!
ಶಿಡ್ಲಘಟ್ಟದ 'ಹನಿ' ಹಿಂದೆ ಹೋದ ಚಿಕ್ಕಬಳ್ಳಾಪುರದ ಬಾಲಾಜಿ, ಟ್ರ್ಯಾಪ್‌ ಆಗಿದ್ದಕ್ಕೆ ಜೀವನವನ್ನೇ ಮುಗಿಸಿದ!