RCB Bengaluru Stampede: ಹೈಕೋರ್ಟ್​ನಿಂದ ದೂರು ದಾಖಲು- ಸರ್ಕಾರಕ್ಕೆ ಹಲವು ಪ್ರಶ್ನೆ

Published : Jun 05, 2025, 04:28 PM ISTUpdated : Jun 05, 2025, 04:33 PM IST
HC takes suo motu cognisance of Bengaluru stampede

ಸಾರಾಂಶ

ಸರ್ಕಾರ ಆಯೋಜಿಸಿದ್ದ ಆರ್​ಸಿಬಿ ಗೆಲುವಿನ ಸಂಭ್ರಮಾಚರಣೆ ವೇಳೆ ಕಾಲ್ತುಳಿತ ಉಂಟಾಗಿ 11 ಮಂದಿ ಪ್ರಾಣ ಹೋದ ಘಟನೆಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್​ ಸ್ವಯಂ ಪ್ರೇರಿತ ದೂರು ದಾಖಲಿಸಿದೆ.  

ಸರ್ಕಾರ ಆಯೋಜಿಸಿದ್ದ ಆರ್​ಸಿಬಿ ಗೆಲುವಿನ ಸಂಭ್ರಮಾಚರಣೆ ವೇಳೆ ಅತ್ತ ವೇದಿಕೆಯ ಮೇಲೆ ಗಣ್ಯಾತಿಗಣ್ಯರು ಫೋಟೋಶೂಟ್​ ಮಾಡಿಸಿಕೊಳ್ಳುತ್ತಿದ್ದರೆ, ಇತ್ತ 11 ಮಂದಿ ಅಭಿಮಾನಿಗಳು ಪ್ರಾಣ ಕಳೆದುಕೊಂಡಿರುವ ಘಟನೆ ಇಡೀ ದೇಶವನ್ನೇ ತಲ್ಲಣಗೊಳಿಸಿದೆ. ಸರ್ಕಾರ ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ಗೊಂದಲ ಉಂಟಾಗಿರುವ ಹಿನ್ನೆಲೆಯಲ್ಲಿ ಹೀಗೆಲ್ಲಾ ಅವಾಂತರವಾಗಿದೆ ಎಂದು ಭಾರಿ ಆರೋಪಗಳು ಕೇಳಿಬರುತ್ತಿರುವ ನಡುವೆಯೇ, ಸರ್ಕಾರಿ ಮೃತ ಕುಟುಂಬಕ್ಕೆ 10 ಲಕ್ಷ ರೂಪಾಯಿಗಳ ಪರಿಹಾರವನ್ನು ಘೋಷಿಸಿದೆ. ಈ ಗಲಾಟೆ, ಗಲಭೆ, ಸಾವಿನ ಪ್ರಕರಣಗಳ ಬಗ್ಗೆ ಅವರ ಮೇಲೆ ಇವರು, ಇವರ ಮೇಲೆ ಅವರು ಆರೋಪ ಹೊರಿಸುತ್ತಿರುವುದು ಮುಂದುವರೆಯುತ್ತಿದೆ. ಆದರೆ ಇದರ ನಡುವೆಯೇ, ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಹೈಕೋರ್ಟ್​, ಘಟನೆಯ ಬಗ್ಗೆ ಸ್ವಯಂ ಪ್ರೇರಿತವಾಗಿ ದೂರು (Suo Moto case) ದಾಖಲು ಮಾಡಿಕೊಂಡು ಅದರ ವಿಚಾರಣೆಯನ್ನು ಕೈಗೆತ್ತಿಕೊಂಡಿದೆ.

 

ಇಂದು ಹಂಗಾಮಿ ಮುಖ್ಯನ್ಯಾಯಮೂರ್ತಿ ವಿ.ಕಾಮೇಶ್ವರ ರಾವ್ ಅವರ ನೇತೃತ್ವದ ವಿಭಾಗೀಯ ಪೀಠದ ಮುಂದೆ ಈ ಘಟನೆಗೆ ಸಂಬಂಧಿಸಿದಂತೆ ವಿಚಾರಣೆ ನಡೆಸಲಾಯಿತು. ವಿಚಾರಣೆ ವೇಳೆ ಪೀಠವು ಸರ್ಕಾರಕ್ಕೆ ಹಲವು ಪ್ರಶ್ನೆಗಳನ್ನು ಕೇಳಿದ್ದಾರೆ. ಸರ್ಕಾರದ ಪರ ವಾದ ಮಂಡಿಸಿದ ಅಡ್ವೊಕೇಟ್​ ಜನರಲ್​ ಶಶಿಕಿರಣ್ ಶೆಟ್ಟಿ ಅವರಿಗೆ ನ್ಯಾಯಮೂರ್ತಿಗಳು ಕೆಲವೊಂದು ಪ್ರಶ್ನೆಗಳನ್ನು ಕೇಳಿದ್ದಾರೆ. ಇಂಥ ಬೃಹತ್​ ಸಂಭ್ರಮ ನಡೆದ ಸಂದರ್ಭದಲ್ಲಿ ಸೂಕ್ತ ವ್ಯವಸ್ಥೆ ಮಾಡಲಾಗಿತ್ತೆ? ವೈದ್ಯಕೀಯ ಸಿಬ್ಬಂದಿ ಸ್ಥಳದಲ್ಲಿ ಇದ್ದರೆ? ಆ್ಯಂಬುಲೆನ್ಸ್ ವ್ಯವಸ್ಥೆ ಇರಬೇಕಲ್ಲವೇ, ಇವೆಲ್ಲಾ ಅಲ್ಲಿ ಇತ್ತೆ ಎಂಬಿತ್ಯಾದಿ ಪ್ರಶ್ನೆಗಳನ್ನು ನ್ಯಾಯಮೂರ್ತಿಗಳು ಕೇಳಿದ್ದಾರೆ. ಈ ಎಲ್ಲಾ ಮಾಹಿತಿಗಳನ್ನು ನೀಡುವಂತೆ ಸರ್ಕಾರಕ್ಕೆ ನಿರ್ದೇಶಿಸಿರುವ ಕೋರ್ಟ್​ ವಿಚಾರಣೆಯನ್ನು ಮುಂದೂಡಿದೆ.

ಇದೇ ಸಂದರ್ಭದಲ್ಲಿ ಸರ್ಕಾರ ತೆಗೆದುಕೊಂಡಿದ್ದ ಕ್ರಮಗಳ ಬಗ್ಗೆ ಶಶಿಕಿರಣ್ ಶೆಟ್ಟಿ ಮಾಹಿತಿ ನೀಡಿದರು. ರ RCB ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಭದ್ರತೆಗಾಗಿ ಬೆಂಗಳೂರು ಪೊಲೀಸರು ಸಿದ್ಧತೆ ನಡೆಸಿದ್ದರು. ರಾಜ್ಯದ ವಿವಿಧದ ಭಾಗಗಳಿಂದ 2.5 ಲಕ್ಷ ಜನರು ಬಂದಿದ್ದರು. ಬಂದೋಬಸ್ತ್​ ಗಾಗಿ 1,643 ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿತ್ತು. KSRP ತುಕಡಿ, ವಾಟರ್ ಟ್ಯಾಂಕರ್ ಸೇರಿದಂತೆ ಹಲವು ವ್ಯವಸ್ಥೆಗಲನ್ನು ಮಾಡಲಾಗಿತ್ತು. ಆದರೆ ಅಭಿಮಾನಿಗಳ ಸಂಖ್ಯೆ ಹೆಚ್ಚಾದ ಕಾರಣ, ಕಾಲ್ತುಳಿತ ಸಂಭವಿಸಿ 56 ಜನರು ಗಾಯಗೊಂಡು. ಐವರು ಮಹಿಳೆಯರು ಹಾಗೂ 6 ಪುರುಷರು ಮೃತಪಟ್ಟಿದ್ದಾರೆ ಎಂದು ತಿಳಿಸಿದರು.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ವಿಜಯೋತ್ಸವ ವೀಕ್ಷಿಸಲು ಉಚಿತ ಪ್ರವೇಶ ಎಂಬ ವದಂತಿ ಹಬ್ಬಿದ್ದ ಕಾರಣ ನೂಕುನುಗ್ಗಲು ಉಂಟಾಯಿತು. ಕಿರಿದಾದ ಪ್ರವೇಶ ದ್ವಾರಗಳಲ್ಲಿ ಜನಸಂದಣಿ ಹೆಚ್ಚಾಯಿತು. ಸಾವಿರಾರು ಜನರು ಒಳಗೆ ನುಗ್ಗಲು ಪ್ರಯತ್ನಿಸಿದಾಗ ಕಾಲ್ತುಳಿತ ಸಂಭವಿಸಿತು. ಸಂಜೆ 5 ಗಂಟೆಯ ವೇಳೆಗೆ ಕಾಲ್ತುಳಿತ ಹೆಚ್ಚಾಯಿತು. ಅನೇಕರು ಗಾಯಗೊಂಡರು ಮತ್ತು ಕೆಲವರು ಪ್ರಜ್ಞಾಹೀನರಾದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕ್ರಿಸ್‌ಮಸ್ ಹಬ್ಬದ ದಿನವೇ ಭೀಕರ ಅಪಘಾತ: ಎತ್ತಿನ ಬಂಡಿಗೆ ಬೈಕ್ ಡಿಕ್ಕಿ, ಸವಾರರಿಬ್ಬರು ಸ್ಥಳದಲ್ಲೇ ದುರ್ಮರಣ!
Rapido Bike ಬುಕ್ ಮಾಡುವ ಮುನ್ನ ಎಚ್ಚರ! ರೈಡರ್ ಎಡವಟ್ಟಿಗೆ ಹಿಂಬದಿ ಕುಳಿತ ಗ್ರಾಹಕನ ಮಂಡಿ ಚಿಪ್ಪು ಪುಡಿ ಪುಡಿ!