ರಿಪಬ್ಲಿಕ್‌ ಟಿವಿ ಸಿಒಒ ಪ್ರಿಯಾ ಮುಖರ್ಜಿಗೆ ಬೆಂಗಳೂರಿನಲ್ಲಿ ಬಿಗ್‌ ರಿಲೀಫ್

Published : Nov 25, 2020, 04:40 PM IST
ರಿಪಬ್ಲಿಕ್‌ ಟಿವಿ ಸಿಒಒ ಪ್ರಿಯಾ ಮುಖರ್ಜಿಗೆ ಬೆಂಗಳೂರಿನಲ್ಲಿ ಬಿಗ್‌ ರಿಲೀಫ್

ಸಾರಾಂಶ

ಬೆಂಗಳೂರಿನಲ್ಲಿಯೂ ಟಿಆರ್ ಪಿ ಗೋಲ್ ಮಾಲ್ ಪ್ರಕರಣದ ಸದ್ದು/ ರಿಪಬ್ಲಿಕ್ ಟಿವಿ ಸಿಒಒ ಪ್ರಿಯಾ ಮುಖರ್ಜಿಗೆ 20 ದಿನದ ಟ್ರಾನ್ಸಿಟ್ ಜಾಮೀನು / ಕರ್ನಾಟಕ ಹೈ ಕೋರ್ಟ್ ಆದೇಶ/ ಮುಂಬೈ ಪೊಲೀಸರು ನನ್ನನ್ನು ಇಲ್ಲಿ ಬಂಧಿಸುವ ಸಾಧ್ಯತೆ ಇದೆ ಎಂದು  ನ್ಯಾಯಾಲಯದ ಮೆಟ್ಟಿಲು ಏರಿದ್ದರು.

ಬೆಂಗಳೂರು/ ಮುಂಬೈ (ನ. 25) ಕರ್ನಾಟಕ ಹೈ ಕೋರ್ಟ್ ರಿಪಬ್ಲಿಕ್ ಟಿವಿ ಸಿಒಒ ಪ್ರಿಯಾ ಮುಖರ್ಜಿಗೆ 20 ದಿನದ ಟ್ರಾನ್ಸಿಟ್ ಜಾಮೀನು ನೀಡಿದೆ. ಟಿಆರ್‌ಪಿ ಹಗರಣದ ಸಂಬಂಧ ವಿಚಾರಣೆ ನಡೆಸಿದ ಕೋರ್ಟ್ ಜಾಮೀನು ನೀಡಿದೆ.

ಎಆರ್‌ಜಿ ಮೀಡಿಯಾ ಲಿಮಿಡೆಟ್ ಮುನ್ನಡೆಸುತ್ತಿರುವ ಮುಖರ್ಜಿ ಅವರ ನೇತೃತ್ವದಲ್ಲಿಯೇ ರಿಪಬ್ಲಿಕ್ ಟಿವಿ ಮತ್ತು ಆರ್ ಭಾರತ್ ವಾಹಿನಿಗಳು ಬರುತ್ತವೆ. ಮುಂಬೈ ಪೊಲೀಸರು  ಟಿಆರ್‌ಪಿ(ಟೆಲಿವಿಷನ್ ರೇಟಿಂಗ್) ನಲ್ಲಿ ಗೋಲ್ ಮಾಲ್ ಆಗಿದೆ ಎಂದು ಎಫ್‌ಐಆರ್ ದಾಖಲಿಸಿಕೊಂಡಿದ್ದರು.

ಏನಿದು ಟಿಆರ್‌ ಪಿ ಹಗರಣ? ಸಂಪೂರ್ಣ ಮಾಹಿತಿ

ಇಪ್ಪತ್ತು ದಿನಗಳ ನಂತ ಮುಖರ್ಜಿ ಕಾನೂನು ಸಲಹೆ ಪಡೆದುಕೊಂಡು ಮುಂದಿನ ಹೆಜ್ಜೆ ಇಡಬಹುದು.  ಒಂದು ವೇಳೆ ಅದಕ್ಕೂ ಮುನ್ನ ಅವರನ್ನು ಬಂಧನ ಮಾಡಲು ಮುಂದಾದರೆ ಎರಡು ಲಕ್ಷ ರೂ. ಶ್ಯೂರಿಟಿಯೊಂದಿಗೆ ಬಿಡುಗಡೆ ಮಾಡಬೇಲಾಗುತ್ತದೆ.

ವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ ಬರುವಂತೆ ಕಾಣುತ್ತಿದೆ.  ಹಾಗಾಗಿ ನಿಗದಿತ ಅವಧಿಗೆ ಟ್ರಾನ್ಸಿಟ್ ಜಾಮೀನು ನೀಡಲಾಗುತ್ತಿದೆ ಎಂದು ನ್ಯಾಯಮೂರ್ತಿ ಎಚ್‌ಪಿ ಸಂದೇಶ್ ತಮ್ಮ ಆದೇಶದಲ್ಲಿ ಹೇಳಿದ್ದಾರೆ. ಮುಂಬೈ ಪೊಲೀಸರು ತಮ್ಮನ್ನು ಬೆಂಗಳೂರಿನಲ್ಲಿ ಬಂಧನ ಮಾಡಬಹುದು ಎಂದು ಮುಖರ್ಜಿ ನ್ಯಾಯಾಲಯದ ಮೊರೆ ಹೋಗಿದ್ದರು . 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಬಾಲಿವುಡ್ ನಿರ್ದೇಶಕ ವಿಕ್ರಂ ಭಟ್, ಪತ್ನಿ ಶ್ವೇತಾಂಬರಿ ಭಟ್ ಬಂಧನ; ಅಂತಿಂಥ ವಂಚನೆ ಕೇಸಲ್ಲ ಇದು ಅಂತೀರಾ?!
ಕೊಪ್ಪಳ: ಹಸೆಮಣೆ ಏರಬೇಕಿದ್ದ ಜೋಡಿ ಮಸಣಕ್ಕೆ - ಪ್ರಿ-ವೆಡ್ಡಿಂಗ್ ಶೂಟಿಂಗ್ ಮುಗಿಸಿ ವಾಪಸಾಗುವಾಗ ಭೀಕರ ದುರಂತ!