
ಬೆಂಗಳೂರು, (ಏ.05): ರಮೇಶ್ ಜಾರಕಿಹೊಳಿ ರಾಸಲೀಲೆ ಸಿ.ಡಿ. ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಎಸ್ಐಟಿ ಹಾಗೂ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ನೀಡಿ, ವರದಿಯನ್ನ ಕೇಳಿದೆ.
ಮಾಜಿ ಸಚಿವರ ಖಾಸಗಿ ವಿಡಿಯೋ ಸಿ.ಡಿ ಬಹಿರಂಗ ಪ್ರಕರಣದ ತನಿಖೆಯನ್ನ ಎಸ್ಐಟಿಗೆ ನೀಡಿದ್ದು ಮತ್ತು ಪ್ರಕರಣವನ್ನ ಸಿಬಿಐಗೆ ನೀಡಬೇಕು ಎಂದು ಅರ್ಜಿ ಸಲ್ಲಿಕೆಯಾಗಿತ್ತು.
ಈ ಅರ್ಜಿಯ ವಿಚಾರಣೆಯು ಇಂದು (ಸೋಮವಾರ) ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ನಡೆದಿದ್ದು, ಪ್ರಕರಣದ ತನಿಖೆಯ ವರದಿಯನ್ನ ನೀಡುವಂತೆ ಎಸ್ಐಟಿ ಹಾಗೂ ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿದೆ.
'ವಿಚಾರಣೆಯಿಂದ ತಪ್ಪಿಸಿಕೊಳ್ಳಲು ರಮೇಶ್ 'ಜಾರಿಕೊಳ್ಳಲು' ಕೊರೋನಾ ನೆಪವೇ'?
ವಕೀಲ ಉಮೇಶ್ ಎಂಬುವವರು ಎಸ್ಐಟಿ ರಚನೆಯನ್ನ ಪ್ರಶ್ನಿಸಿ ಪಿಐಎಲ್ ಹಾಕಿದ್ರು. ಇನ್ನು ವಕೀಲ ಜಿ.ಆರ್ ಮೋಹನ್ ಪ್ರಕರಣ ಸಿಬಿಐಗೆ ನೀಡಲು ಕೋರಿದ್ದರು. ಎಸ್ಐಟಿಯಿಂದ ಮಾಧ್ಯಮಗಳಿಗೆ ಮಾಹಿತಿ ಸೋರಿಕೆ ಆರೋಪವನ್ನೂ ಜಿ.ಆರ್ ಮೋಹನ್ ಮಾಡಿದ್ದರು.
2 ಅರ್ಜಿಗೆ ಸಂಬಂಧಿಸಿದಂತೆ ಕೋರ್ಟ್ ನೋಟಿಸ್ ಜಾರಿಗೊಳಿಸಿದೆ. ಪ್ರಕರಣದ ತನಿಖೆ ಎಲ್ಲಿ ತನಕ ಬಂದಿದೆ? ಎಸ್ಐಟಿ ತನಿಖೆ ಎಲ್ಲಿಯವರೆಗೆ ಬಂದಿದೆ? ಕೇಸ್ ಯಾವ ಹಂತದಲ್ಲಿ ನಡೆಯುತ್ತಿದೆ? ಎಂದು ಮುಚ್ಚಿದ ಲಕೋಟೆಯಲ್ಲಿ ವರದಿಯನ್ನ ನೀಡಬೇಕು ಎಂದು ಸೂಚಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ