
ಬೆಂಗಳೂರು (ಮೇ.31): ಬೆಂಗಳೂರಿನಲ್ಲಿ ಸ್ಕೂಲ್ ಪ್ರಿನ್ಸಿಪಾಲ್ ಲೋಕಾಯುಕ್ತ ಬಲೆ ಬಿದ್ದಿದ್ದಾನೆ. ಲೋಕಾಯುಕ್ತ ಅಧಿಕಾರಿಗಳಿಂದ ಪ್ರಿನ್ಸಿಪಾಲ್ ನಾರಾಯಾಣ್ ಟ್ರ್ಯಾಪ್ ಆಗಿದ್ದು, ದಿವ್ಯಾ ಎಂಬುವವರಿಂದ 5 ಸಾವಿರ ಹಣ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ. ರಾಜಾಜಿನಗರದಲ್ಲಿರುವ ಬಸವೇಶ್ವರ ಬಾಲಕರ ಪೌಢಶಾಲೆಯಲ್ಲಿ ಈ ಘಟನೆ ನಡೆದಿದ್ದು, ಪ್ರಿನ್ಸಿಪಾಲ್ 9 ನೇ ತರಗತಿ ಫಲಿತಾಂಶ ತಡೆ ಹಿಡಿದಿದ್ದ ಹೀಗಾಗಿ ಪಾಸ್ ಮಾಡಿ ಟಿ.ಸಿ.ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ. ಈ ಹಿನ್ನೆಲೆಯಲ್ಲಿ ಐದು ಸಾವಿರ ಹಣ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾ ಬಲೆಗೆ ಬಿದ್ದಿದ್ದಾನೆ. ಡಿವೈಎಸ್ಪಿ ಬಸವರಾಜ್ ನೇತೃತ್ವದಲ್ಲಿ ಟ್ರ್ಯಾಪ್ ಕಾರ್ಯಾಚರಣೆ ನಡೆದಿದೆ.
ಲೋಕಾಯುಕ್ತ ಬಲೆಗೆ ಪಿಡಿಒ
ಹುಬ್ಬಳ್ಳಿ: ಗ್ರಾಮಸ್ಥರೊಬ್ಬರ ಕೆಲಸ ಮಾಡಿಕೊಡಲು ಹಣದ ಬೇಡಿಕೆ ಇಟ್ಟಿದ್ದ ತಾಲೂಕಿನ ಅದರಗುಂಚಿ ಗ್ರಾಪಂ ಪಿಡಿಒನನ್ನು ಲೋಕಾಯುಕ್ತ ಅಧಿಕಾರಿಗಳು ಸೋಮವಾರ ತಮ್ಮ ಖೆಡ್ಡಾಕ್ಕೆ ಕೆಡವಿದ್ದಾರೆ.
Hassan: ತುತ್ತು ಅನ್ನ ಬೇಡಿ ಬಂದ 18 ಜನರನ್ನು ಜೀತಕಿಟ್ಟು ಉಪವಾಸದಿಂದ ಕೂಡಿ ಹಾಕಿದ
ಅದರಗುಂಚಿ ಗ್ರಾಪಂ ಪಿಡಿಒ ಮಕ್ತುಂಸಾಬ ಕರಡಿಗುಡ್ಡದ ಎಂಬುವರೇ ಲೋಕಾಯುಕ್ತ ಬಲೆ ಬಿದ್ದವರು. ಗ್ರಾಮದಲ್ಲಿ ಇ-ಸ್ವತ್ತು ಮಾಡಿಕೊಡಲು ಹಣದ ಬೇಡಿಕೆ ಇಟ್ಟಿದ್ದ ಹಿನ್ನೆಲೆಯಲ್ಲಿ ಗ್ರಾಮಸ್ಥರೊಬ್ಬರು ಲೋಕಾಯುಕ್ತ ಮೊರೆ ಹೋಗಿದ್ದರು. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ಪಿಡಿಒನನ್ನು ಬಲೆಗೆ ಕೆಡವಿದ್ದಾರೆ.
Harish Halli Death Case: ಸಾಮಾಜಿಕ ಕಾರ್ಯಕರ್ತ ಹರೀಶ್ ಹಳ್ಳಿ ಸಾವಲ್ಲ ವ್ಯವಸ್ಥಿತ ಕೊಲೆ
ಗ್ರಾಪಂನಲ್ಲಿಯೇ ಪಿಡಿಒ ಕರಡಿಗುಡ್ಡದ ಅವರನ್ನು ಸುದೀರ್ಘ ವಿಚಾರಣೆಗೆ ಒಳಪಡಿಸಿದರು. ರಾತ್ರಿಯವರೆಗೂ ವಿಚಾರಣೆಗೆ ಒಳಪಡಿಸಿದರಲ್ಲದೇ ಗ್ರಾಪಂದಲ್ಲಿನ ಇ-ಸ್ವತ್ತು ಕಡತಗಳನ್ನು ಮತ್ತು ಇತರೆ ಮಾಹಿತಿ ಕಲೆ ಹಾಕಿದರು. ಈ ವೇಳೆ ಗ್ರಾಪಂ ಬಳಿ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಜಮೆಯಾಗಿದ್ದರಿಂದ ಕೆಲ ಹೊತ್ತು ಗೊಂದಲ ವಾತಾವರಣ ಸಹ ನಿರ್ಮಾಣಗೊಂಡಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ