NEET Result 2022: ನೀಟ್‌ನಲ್ಲಿ ಕಡಿಮೆ ಅಂಕ: ಕರ್ನಾಟಕದಲ್ಲಿ ಇಬ್ಬರು ವಿದ್ಯಾರ್ಥಿಗಳು ಆತ್ಮಹತ್ಯೆ

Published : Sep 09, 2022, 03:30 AM IST
NEET Result 2022: ನೀಟ್‌ನಲ್ಲಿ ಕಡಿಮೆ ಅಂಕ: ಕರ್ನಾಟಕದಲ್ಲಿ ಇಬ್ಬರು ವಿದ್ಯಾರ್ಥಿಗಳು ಆತ್ಮಹತ್ಯೆ

ಸಾರಾಂಶ

ವಿದ್ಯಾರ್ಥಿಗಳಿಬ್ಬರು ಆತ್ಮಹತ್ಯೆಗೆ ಶರಣಾದ ಪ್ರತ್ಯೇಕ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ಮತ್ತು ದಾವಣಗೆರೆ ಜಿಲ್ಲೆಯ ಜಗಳೂರಿನಲ್ಲಿ ಗುರುವಾರ ನಡೆದಿದೆ. 

ಕುಂದಾಪುರ/ಜಗಳೂರು(ಸೆ.09):  ನೀಟ್‌ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದ ಹಿನ್ನೆಲೆಯಲ್ಲಿ ಮನನೊಂದ ವಿದ್ಯಾರ್ಥಿಗಳಿಬ್ಬರು ಆತ್ಮಹತ್ಯೆಗೆ ಶರಣಾದ ಪ್ರತ್ಯೇಕ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ಮತ್ತು ದಾವಣಗೆರೆ ಜಿಲ್ಲೆಯ ಜಗಳೂರಿನಲ್ಲಿ ಗುರುವಾರ ನಡೆದಿದೆ.

ಕುಂದಾಪುರದ ವಡೇರಹೋಬಳಿ ಜೆಎಲ್‌ಬಿ ರಸ್ತೆ ನಿವಾಸಿ ರಘುವೀರ್‌ ಶೆಟ್ಟಿ ಎಂಬವರ ಪುತ್ರ ಸಾಯೀಶ್‌ ಶೆಟ್ಟಿ(18), ಜಗಳೂರು ಪಟ್ಟಣದ ಮುಸ್ಲಿಂ ಕಾಲೋನಿಯ 3ನೇ ಕ್ರಾಸ್‌ ನಿವಾಸಿ ಚೈತ್ರಾ (18) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳು.

ಮಡಿಕೇರಿ ಲಾಡ್ಜ್‌ನಲ್ಲಿ ನೇಣಿಗೆ ಶರಣಾದ ಶಿಕ್ಷಣ ಇಲಾಖೆಯ ಸೂಪರಿಡೆಂಟ್

ನೀಟ್‌ ಪರೀಕ್ಷೆ ಫಲಿತಾಂಶ ಬುಧವಾರ ರಾತ್ರಿಯಷ್ಟೇ ಪ್ರಕಟವಾಗಿತ್ತು. ಶಿವಮೊಗ್ಗದ ಕಾಲೇಜಲ್ಲಿ ಓದುತ್ತಿದ್ದ ಸಾಯೀಶ್‌ ಕಲಿಕೆಯಲ್ಲಿ ಸಾಕಷ್ಟು ಮುಂಚೂಣಿಯಲ್ಲಿದ್ದ. ಆದರೆ, ನಿರೀಕ್ಷೆಯಷ್ಟು ಅಂಕ ಬಂದಿಲ್ಲ. ಹೀಗಾಗಿ ಕುಂದಾಪುರದ ಹೇರಿಕುದ್ರು ಸೇತುವೆ ಮೇಲೆ ಬಂದು ನದಿಗೆ ಹಾರಿದ್ದಾನೆ. ಇನ್ನು ಚೈತ್ರಾ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದ ಕಾರಣಕ್ಕೆ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕ್ಯಾಸ್ಟ್ರೋಲ್ ಬ್ರಾಂಡ್‌ನ ನಕಲಿ ಎಂಜಿನ್ ಆಯಿಲ್ ಉತ್ಪಾದನೆ ಮಾಡುತ್ತಿದ್ದ ಘಟಕದ ಮೇಲೆ ದಾಳಿ
ಕೋಲಾರ: ಅಪ್ಪ- ಅಮ್ಮನ ವಿಚ್ಚೇದನಕ್ಕೆ ಮನನೊಂದು 26 ವರ್ಷದ ಪುತ್ರ ಆತ್ಮ*ಹತ್ಯೆ!