ಬೆಂಗಳೂರು: ಕೆಎಎಸ್‌ ಅಧಿಕಾರಿಯ ಪತ್ನಿ ನೇಣಿಗೆ ಶರಣು

Published : May 12, 2024, 07:06 AM IST
ಬೆಂಗಳೂರು: ಕೆಎಎಸ್‌ ಅಧಿಕಾರಿಯ ಪತ್ನಿ ನೇಣಿಗೆ ಶರಣು

ಸಾರಾಂಶ

ಚೈತ್ರಾ ಆತ್ಮಹತ್ಯೆಗೆ ನಿಖರ ಕಾರಣ ಗೊತ್ತಾಗಿಲ್ಲ. ಮೃತರ ಪತಿ ಶಿವಕುಮಾರ್‌ ಅವರು ಫಾರ್ಮ್‌ ಹೌಸ್‌ಗೆ ತೆರಳಿದ್ದರು. ಹೀಗಾಗಿ ಶುಕ್ರವಾರ ರಾತ್ರಿಯೇ ಅವರು ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆಗಳಿವೆ. ಮನೆಯಲ್ಲಿ ಪತ್ತೆಯಾದ ಡೆತ್‌ನೋಟ್‌ನಲ್ಲಿ ತಮ್ಮ ಸಾವಿಗೆ ಯಾರು ಕಾರಣರಲ್ಲ ಎಂದು ಬರೆದಿದ್ದಾರೆ.   

ಬೆಂಗಳೂರು(ಮೇ.12): ಜೀವನದಲ್ಲಿ ಜಿಗುಪ್ಸೆಗೊಂಡು ಕರ್ನಾಟಕ ಕೈಗಾರಿಕಾ ಅಭಿವೃದ್ಧಿ ಮಂಡಳಿ ಉಪ ವಿಭಾಗಾಧಿಕಾರಿ (ಕೆಐಎಡಿಬಿ) ಶಿವಕುಮಾರ್‌ ಅವರ ಪತ್ನಿ ಚೈತ್ರಾಗೌಡ (40) ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸಂಜಯನಗರ ಸಮೀಪ ಶನಿವಾರ ನಡೆದಿದೆ.

ಆರ್‌ಎಂವಿ ಲೇಔಟ್‌ನ ಅಪಾರ್ಟ್‌ಮೆಂಟ್‌ನಲ್ಲಿ ತಮ್ಮ ಕುಟುಂಬದ ಜತೆ ವಾಸವಾಗಿದ್ದ ಚೈತ್ರಾ ಅವರು, ತಮ್ಮ ಫ್ಲ್ಯಾಟ್‌ನಲ್ಲಿ ಶುಕ್ರವಾರ ರಾತ್ರಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರಿಗೆ ಶನಿವಾರ ಬೆಳಗ್ಗೆ ಅದೇ ಅಪಾರ್ಟ್‌ಮೆಂಟ್‌ನಲ್ಲಿ ನೆಲೆಸಿರುವ ಅವರ ಸೋದರ ಕರೆ ಮಾಡಿದಾಗ ಪ್ರತಿಕ್ರಿಯಿಸಿಲ್ಲ. ಇದರಿಂದ ಆತಂಕಗೊಂಡು ಕೂಡಲೇ ಚೈತ್ರಾ ಫ್ಲ್ಯಾಟ್‌ಗೆ ಅವರ ಸೋದರ ತೆರಳಿದಾಗ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ.

ದಾಬಸ್‌ಪೇಟೆ: ಫೋನ್ ಬಳಸಬೇಡ ಎಂದಿದ್ದಕ್ಕೆ ಯುವತಿ ಆತ್ಮಹತ್ಯೆ

ತೋಟದ ಮನೆಗೆ ತೆರಳಿದ್ದ ಪತಿ:

ಎಂಟು ವರ್ಷಗಳ ಹಿಂದೆ ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಚೈತ್ರಾಗೌಡ ಹಾಗೂ ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಕೆಐಎಸ್‌ ಅಧಿಕಾರಿ ಶಿವಕುಮಾರ್ ವಿವಾಹವಾಗಿದ್ದು, ಈ ದಂಪತಿಗೆ ಐದು ವರ್ಷದ ಹೆಣ್ಣು ಮಗುವಿದೆ. 2006ನೇ ಸಾಲಿನ ಕೆಐಎಸ್ ಅಧಿಕಾರಿ ಆಗಿರುವ ಶಿವಕುಮಾರ್‌, ಪ್ರಸುತ್ತ ಕೆಐಎಡಿಬಿಯಲ್ಲಿ ಉಪ ವಿಭಾಗಾಧಿಕಾರಿಯಾಗಿದ್ದಾರೆ. ಇನ್ನು ಹೈಕೋರ್ಟ್‌ನಲ್ಲಿ ಮೃತ ಚೈತ್ರಾ ವಕೀಲರಾಗಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಕೆಲ ತಿಂಗಳಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಚೈತ್ರಾ ಅವರು, ತಮ್ಮ ಸ್ನೇಹಿತರು ಹಾಗೂ ಸಂಬಂಧಿಕರಿಂದ ಸಹ ಅಂತರ ಕಾಯ್ದುಕೊಂಡಿದ್ದರು. ಸರ್ಕಾರಿ ರಜೆ ಹಿನ್ನೆಲೆಯಲ್ಲಿ ವಿಶ್ರಾಂತಿಗೆ ಕುಣಿಗಲ್ ಸಮೀಪದ ತಮ್ಮ ತೋಟದ ಮನೆಗೆ ಮಗಳ ಜತೆ ಶುಕ್ರವಾರ ಸಂಜೆ ಶಿವಕುಮಾರ್‌ ತೆರಳಿದ್ದರು. ಹಾಗಾಗಿ ರಾತ್ರಿ ಫ್ಲ್ಯಾಟ್‌ನಲ್ಲಿ ಚೈತ್ರಾ ಒಬ್ಬರೇ ಇದ್ದರು. ಆಗ ಫ್ಯಾನಿಗೆ ಸೀರೆ ಬಿಗಿದು ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ತಮ್ಮ ಪತ್ನಿಗೆ ಬೆಳಗ್ಗೆ 10 ಗಂಟೆ ಸುಮಾರಿಗೆ

ಶಿವಕುಮಾರ್ ಕರೆ ಮಾಡಿದಾಗ ಸ್ವೀಕರಿಸಿಲ್ಲ.

ಕೂಡಲೇ ಫ್ಲ್ಯಾಟ್‌ ಹೋಗಿ ಚೈತ್ರಾಳನ್ನು ವಿಚಾರಿಸುವಂತೆ ಬಾಮೈದನಿಗೆ ಅವರು ಸೂಚಿಸಿದ್ದಾರೆ. ಆಗ ಅಕ್ಕನಿಗೆ ತಮ್ಮ ಸಹ ಕರೆ ಮಾಡಿದಾಗಲೂ ಪ್ರತಿಕ್ರಿಯೆ ಬಂದಿಲ್ಲ. ಇದರಿಂದ ಆತಂಕಗೊಂಡು ತಕ್ಷಣವೇ ಸೋದರಿ ಫ್ಲ್ಯಾಟ್‌ಗೆ ಮೃತರ ಸೋದರ ಆಗಮಿಸಿದ್ದರು. ಆಗ ಬಾಗಿಲು ಬಿಡಿದಾಗ ತೆರೆದಿಲ್ಲ. ಕೊನೆಗೆ ಕಿಟಕಿ ತೆರೆದು ಮೃತರ ಸೋದರ ಇಣುಕಿದಾಗ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ ಎಂದು ಪೊಲೀಸರು ವಿವರಿಸಿದ್ದಾರೆ. ಈ ಸಂಬಂಧ ಸಂಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕ್ಷಮಿಸಿ ಬಿಡಿ...!

ಮೃತರ ಫ್ಲ್ಯಾಟ್‌ನಲ್ಲಿ ಮರಣ ಪತ್ರ (ಡೆತ್‌ ನೋಟ್‌) ಪತ್ತೆಯಾಗಿದೆ. ಇದರಲ್ಲಿ ‘ನನ್ನ ಕ್ಷಮಿಸಿ ಬಿಡಿ. ನಾನು ತುಂಬಾ ಡಿಪ್ರೆಷನ್‌ನಿಂದ ಬಳಲುತ್ತಿದ್ದೇನೆ. ಬದುಕು ಸಾಧ್ಯವಾಗುತ್ತಿಲ್ಲ. ನನ್ನ ಪತಿ ಶಿವಕುಮಾರ್ ಒಳ್ಳೆಯವರು. ನನ್ನ ಮಗುವನ್ನು ಚೆನ್ನಾಗಿ ನೋಡಿಕೊಳ್ಳಿ’ ಎಂದು ಮೃತರು ಬರೆದಿದ್ದಾರೆ ಎನ್ನಲಾಗಿದೆ.

ಕಲಬುರಗಿ: ಜಾತಿನಿಂದನೆ ಕೇಸ್ ದಾಖಲಿಸಿದಕ್ಕೆ ಹೆದರಿ ಯುವಕ ಆತ್ಮಹತ್ಯೆ!

ಕುಟುಂಬದವರ ಆಕ್ರಂದನ

ಚೈತ್ರಾ ಸಾವಿನ ಸುದ್ದಿ ತಿಳಿದು ಮನೆಗೆ ಆಗಮಿಸಿದ ಮೃತರ ಕುಟುಂಬದವರು, ಸಂಬಂಧಿಕರು ಹಾಗೂ ಸ್ನೇಹಿತರ ಅಕ್ರಂದನ ಮುಗಿಲು ಮುಟ್ಟಿತು. ಒಳ್ಳೆಯ ಸ್ನೇಹದಿಂದ ಎಲ್ಲಾರೊಂದಿಗೂ ಚೈತ್ರಾ ಬೆರೆಯುತ್ತಿದ್ದರು. ಆಕೆ ಆತ್ಮಹತ್ಯೆ ನಿರ್ಧಾರ ಆಘಾತ ತಂದಿದೆ ಎಂದು ಮೃತರ ಸ್ನೇಹಿತರು ಹೇಳಿದರು.

ಚೈತ್ರಾ ಆತ್ಮಹತ್ಯೆಗೆ ನಿಖರ ಕಾರಣ ಗೊತ್ತಾಗಿಲ್ಲ. ಮೃತರ ಪತಿ ಶಿವಕುಮಾರ್‌ ಅವರು ಫಾರ್ಮ್‌ ಹೌಸ್‌ಗೆ ತೆರಳಿದ್ದರು. ಹೀಗಾಗಿ ಶುಕ್ರವಾರ ರಾತ್ರಿಯೇ ಅವರು ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆಗಳಿವೆ. ಮನೆಯಲ್ಲಿ ಪತ್ತೆಯಾದ ಡೆತ್‌ನೋಟ್‌ನಲ್ಲಿ ತಮ್ಮ ಸಾವಿಗೆ ಯಾರು ಕಾರಣರಲ್ಲ ಎಂದು ಬರೆದಿದ್ದಾರೆ. ಈ ಬಗ್ಗೆ ತನಿಖೆ ನಡೆದಿದೆ ಎಂದು ಬೆಂಗಳೂರು ಉತ್ತರ ವಿಭಾಗ ಡಿಸಿಪಿ ಸೈದುಲು ಅಡಾವತ್ ತಿಳಿಸಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬೆಂಗಳೂರು ವಿಜಯ್ ಗುರೂಜಿ ಗ್ಯಾಂಗ್ ಸಮೇತ ಅರೆಸ್ಟ್; ಟೆಕ್ಕಿಗೆ ಲೈಂಗಿಕ ಶಕ್ತಿ ಹೆಚ್ಚಿಸೋದಾಗಿ ₹40 ಲಕ್ಷ ವಂಚನೆ!
ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ: ಶಿಕ್ಷಕನಿಗೆ ಪೋಷಕರಿಂದ ಧರ್ಮದೇಟು!