ಹೆಂಡ್ತಿ ಜೊತೆ ಗಲಾಟೆ, 2 ವರ್ಷದ ಮಗಳನ್ನು ದಾರುಣವಾಗಿ ಕೊಂದ ತಂದೆ!

Published : Mar 26, 2024, 10:59 AM IST
ಹೆಂಡ್ತಿ ಜೊತೆ ಗಲಾಟೆ, 2 ವರ್ಷದ ಮಗಳನ್ನು ದಾರುಣವಾಗಿ ಕೊಂದ ತಂದೆ!

ಸಾರಾಂಶ

2 ವರ್ಷದ ಮಗುವಿನ ಮೇಲೆ ಹಲ್ಲೆ ಮಾಡುವ ವೇಳೆ ಕುಟುಂಬದ ಕೆಲ ಸಂಬಂಧಿಕರು ಕೂಡ ಉಪಸ್ಥಿತರಿದ್ದರು. ಹೆಂಡತಿ ಜೊತೆಗಿನ ಮನಸ್ತಾಪದ ಕಾರಣದಿಂದಾಗಿ ತಂದೇ ಪದೇ ಪದೇ ಮಗುವಿನ ಮೇಲೆ ಹಲ್ಲೆ ಮಾಡುತ್ತಿದ್ದ ಎನ್ನಲಾಗಿದೆ.  

ನವದೆಹಲಿ (ಮಾ.26): ಎರಡು ವರ್ಷದ ಮಗಳನ್ನು ದಾರುಣವಾಗಿ ಕೊಂದ ಆರೋಪದಲ್ಲಿ ಕೇರಳ ಮಲಪ್ಪುರಂನಲ್ಲಿ ಕ್ರೂರಿ ತಂದೆಯನ್ನು ಪೊಲೀಸರು ಬಂದಿದ್ದಾರೆ. ಸೋಮವಾರ ರಾತ್ರಿ ಆರೋಪಿ ಮೊಹಮದ್‌ ಫೈಜ್‌ನಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಗುವಿನ ಮೇಲೆ ಹಲ್ಲೆ ಮಾಡುವ ವೇಳೆ ಆತನ ಕುಟುಂಬದವರು ಕೂಡ ಸ್ಥಳದಲ್ಲೇ ಇದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಹೆಂಡತಿ ಜೊತೆಗಿನ ಮನಸ್ತಾಪದ ಕಾರಣದಿಂದಾಗಿ ತಂದೆ, ಮಗುವಿನ ಮೇಲೆ ಹಲ್ಲೆ ಮಾಡುತ್ತಿದ್ದ ಎನ್ನಲಾಗಿದೆ. ಮರಣೋತ್ತರ ಪರೀಕ್ಷೆ ವರದಿ ಬಂದ ನಂತರವಷ್ಟೇ ಸಾವಿಗೆ ಕಾರಣ ತಿಳಿಯಲಿದೆ ಎಂದು ಪೊಲೀಸರು ತಿಳಿಸಿದ್ದರು. ಮೊಹಮದ್‌ ಫೈಜ್‌ ತನ್ನ ಮಗಳನ್ನು ಹೊಡೆದು ಕೊಂದಿದ್ದಾನೆ ಎಂದು ಮಗುವಿನ ತಾಯಿ ಆರೋಪಿಸಿದ್ದಾರೆ. ಕಳೆದ ದಿನ ಗಂಟಲಲ್ಲಿ ಆಹಾರ ಸಿಕ್ಕಿಕೊಂಡಿದೆ ಎಂದು ಪ್ರಜ್ಞೆ ತಪ್ಪಿದ್ದ ಮಗುವನ್ನು ತಂದೆ ಆಸ್ಪತ್ರೆಗೆ ಕರೆತಂದಿದ್ದರು. ಬಳಿಕ ಮಗುವಿನ ಮೃತದೇಹವನ್ನು ಮಂಜೇರಿ ವೈದ್ಯಕೀಯ ಕಾಲೇಜಿನ ಶವಾಗಾರಕ್ಕೆ ರವಾನಿಸಲಾಗಿತ್ತು.

ಇನ್ನು ಮರಣೋತ್ತರ ಪರೀಕ್ಷೆ ವರದಿಯಲ್ಲಿ ಮಗುವಿನ ಮೇಲೆ ಹಳೆಯ ಗಾಯಗಳೂ ಇದ್ದವು ಎಂದು ಪೊಲೀಸರು ತಿಳಿಸಿದ್ದಾರೆ. ಆಕೆಯ ಮೇಲೆ ಗುದ್ದಿ ಹಲ್ಲೆ ಮಾಡಲಾಗಿದೆ. ಅದಲ್ಲದೆ, ಸಿಗರೇಟ್‌ನಿಂದ ಆಕೆಯನ್ನು ಸುಡಲಾಗಿದೆ. ವಿಪರೀತ ಹಲ್ಲೆಯ ಕಾರಣದಿಂದಾಗಿ ಮಗುವಿನ ತಲೆಯ ಮೇಲೆ ಗಂಭೀರ ಗಾಯಗಳಾಗಿದ್ದವು. ಆಕೆಯ ಪಕ್ಕೆಲುಬುಗಳು ತುಂಡಾಗಿವೆ ಎಂದು ತಳಿಸಲಾಗಿದೆ. ಆಕೆಯ ತಲೆಯ ಮೇಲೆ ರಕ್ತಗಳದ್ದವು. ಹಲ್ಲೆಯ ವೇಳೆ ತಲೆಗೆ ಗಂಭೀರ ಪ್ರಮಾಣದ ಗಾಯವಾಗಿದ್ದು, ಇಂಟರ್ನಲ್‌ ಬ್ಲೀಡಿಂಗ್‌ ಕೂಡ ಆಗಿದೆ. ಇದರಿಂದಾಗಿ ಮಗು ಸಾವು ಕಂಡಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಸಂಬಂಧಿಕರೊಬ್ಬರು ನೀಡಿರುವ ಮಾಹಿತಿಯ ಪ್ರಕಾರ, ಮೊಹಮದ್ ಫೈಜ್‌ ಪ್ರತಿನಿತ್ಯ ಹೆಂಡತಿಗೆ ಕಿರುಕುಳ ನೀಡುತ್ತಿದ್ದ. ಹಾಗೂ ಆತನ ವಿರುದ್ಧ ನೀಡಲಾಗಿರುವ ದೂರನ್ನು ಹಿಂಪಡೆದುಕೊಳ್ಳುವಂತೆ ಪೀಡಿಸುತ್ತಿದ್ದ. ಇನ್ನು ಮಗುವಿನ ಅಜ್ಜಿ ರಮಾಲತ್‌ ಕೂಡ ಈ ಬಗ್ಗೆ ಮಾತನಾಡಿದ್ದು, ಆಹಾರ ಗಂಟಲಲ್ಲಿ ಸಿಕ್ಕಿಹಾಕಿಕೊಂಡು ಮಗು ಸಾವು ಕಂಡಿದೆ ಎಂದು ಫೈಜ್‌ ನನಗೆ ತಿಳಿಸಿದ್ದ ಎಂದಿದ್ದಾರೆ.  ಮಗುವಿನ ಮೇಲೆ ಪದೇ ಪದೇ ಹೀಯಾಳಿಸುತ್ತಿದ್ದ ಹಾಗೂ ಅವಾಚ್ಯ ಶಬ್ದಗಳಿಂದ ಬೈಯುತ್ತಿದ್ದ. ತನ್ನ ಮಗಳ ಎದುರಿನಲ್ಲಿಯೇ ಆತ ಮಗುವನ್ನು ಹೊಡೆದು ಕೊಂದಿದ್ದಾನೆ ಎಂದು ತಿಳಿಸಿದ್ದಾರೆ.

ಮದ್ವೆ ಆಗಿ 8 ವರ್ಷ ಆಯ್ತು ಮಗು ಬೇಡ್ವಾ ಎಂದ ನೆಟ್ಟಿಗರಿಗೆ 'ಇವ್ನು ದೊಡ್ಡವನಾಗ್ಲಿ ಮಗು ಮಾಡ್ಕೋತೀನಿ..' ಎಂದ ನಟಿ!

ಮಗುವನ್ನು ಬೆಡ್ ಮೇಲೆ ಎಸೆದು ಉಸಿರುಗಟ್ಟಿಸಿ ಸಾಯಿಸಲು ಪ್ರಯತ್ನಿಸಿದ್ದಾನೆ ಆಸ್ಪತ್ರೆ ತಲುಪುವಷ್ಟರಲ್ಲಿ ಮಗು ಸಾವನ್ನಪ್ಪಿದೆ ಎಂದು ಸಂಬಂಧಿಕರು ಆರೋಪಿಸಿದ್ದಾರೆ. ಘಟನೆ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಮುಖದ ಮೇಲೆ ಕತ್ತರಿ, ಚಾಕುವಿನ ಪ್ರಯೋಗ ಬೇಡ; ಪಾಸ್ಟಿಕ್‌ ಸರ್ಜರಿ ಬಗ್ಗೆ ಕಾಜೋಲ್ ಹೇಳಿಕೆ ವೈರಲ್!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರಾಮನಗರ: ರಸ್ತೆಗೆ ಕುರಿಗಳು ಅಡ್ಡಿ, ಹಾರ್ನ್ ಮಾಡಿದ್ದಕ್ಕೆ ಬಸ್ ಚಾಲಕನ ಮೇಲೆ ಗ್ರಾಮಸ್ಥರಿಂದ ಹಲ್ಲೆ!
ಬೆಂಗಳೂರು ವಿಜಯ್ ಗುರೂಜಿ ಗ್ಯಾಂಗ್ ಸಮೇತ ಅರೆಸ್ಟ್; ಟೆಕ್ಕಿಗೆ ಲೈಂಗಿಕ ಶಕ್ತಿ ಹೆಚ್ಚಿಸೋದಾಗಿ ₹40 ಲಕ್ಷ ವಂಚನೆ!