
ಕೊಲ್ಲಂ(ಜೂ. 21) ಇತ್ತೀಚೆಗಷ್ಟೆ ಮದುವೆಯಾಗಿದ್ದ 24 ವರ್ಷದ ಮಹಿಳೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಗಂಡ ಮತ್ತು ಆತನ ಕುಟುಂಬದವರು ವರದಕ್ಷಿಣೆ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಿ ಕಠಿಣ ನಿರ್ಧಾರ ತೆಗೆದುಕೊಂಡಿದ್ದಾಳೆ.
ಗಂಡನ ಮನೆಯವರು ಚಿತ್ರಹಿಂಸೆ ನೀಡುತ್ತಿದ್ದಾರೆ ಎಂದು ತನ್ನ ಸಂಬಂಧಿಕರಿಗೆ ಆತ್ಮಹತ್ಯೆ ಮಾಡಿಕೊಳ್ಳುವ ಹಿಂದಿನ ದಿನ ವಾಟ್ಸಪ್ ಸಂದೇಶ ಕಳುಹಿಸಿದ್ದರು. ಮೈಮೇಲೆ ಗಾಯಗಳಾಗಿರುವ ಪೋಟೋವನ್ನು ಕಳುಹಿಸಿದ್ದರು.
ಅತ್ತೆ ಕೊಂಕು ಮಾತಿಗೆ ಬೇಸತ್ತು ಸೀಮೆಎಣ್ಣೆ ಸುರಿದುಕೊಂಡಳು
ಗಂಡನ ಕುಟುಂಬದ ಕಿರುಕುಳ ತಾಳಲಾರದೆ ವಿಸ್ಮಯ ನಾಯರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೇರಳ ರಾಜ್ಯದ ಸರ್ಕಾರಿ ನೌಕರಿಯಲ್ಲಿರುವ ಗಂಡ ಕಿರಣ್ ಕುಮಾರ್ ಮನೆಯ ಬಾತ್ ರೂಂನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿದ್ದ ಪತ್ನಿ ಶವ ಕಂಡಿದ್ದಾರೆ.
ಯುವತಿಯ ಕುಟುಂಬದವರು ಆಕೆ ಕಳುಹಿಸಿದ ವಾಟ್ಸಪ್ ಸಂದೇಶಗಳನ್ನು ಮಾಧ್ಯಮದವರಿಗೆ ನೀಡಿದ್ದು ಗಂಡ ಪ್ರಮುಖ ಆರೋಪಿಯಾಗಿದ್ದಾನೆ. ಕೇರಳ ಮಹಿಳಾ ಆಯೋಗ ಸಹ ದೂರು ದಾಖಲಿಸಿದ್ದು ರಾಜ್ಯದ ಆರ್ ಟಿಒ ದಲ್ಲಿ ಕೆಲಸ ಮಾಡುತ್ತಿದ್ದ ಗಂಡ ಕಿರಣ್ ಕುಮಾರ್ ನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ