
ಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ ಗಡಿಯ ಚೋರ್ಲಾ ಘಾಟಲ್ಲಿ ನಡೆದಿದ್ದ 2 ಕಂಟೇನರ್ಗಳಲ್ಲಿದ್ದ ₹400 ಕೋಟಿ ಮೌಲ್ಯದ ರದ್ದಾದ ಹಳೇ ನೋಟು ದರೋಡೆ ಕೇಸಿನ ಪ್ರಮುಖ ಆರೋಪಿ ಕಿಶೋರ್ ಸಾಳ್ವೆ ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಘೋಟಿ ಠಾಣೆಗೆ ಶರಣಾಗಿದ್ದಾನೆ. ಬಳಿಕ ಆತನನ್ನು ಬಂಧಿಸಲಾಗಿದೆ.
ಇದರಿಂದ ಈ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರ ಸಂಖ್ಯೆ ಎಂಟಕ್ಕೆ ಏರಿದೆ. ಮಹಾರಾಷ್ಟ್ರ ಸರ್ಕಾರ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡವನ್ನು ರಚಿಸಿದೆ.
ಪ್ರಕರಣ ಸಂಬಂಧ ಉದ್ಯಮಿ, ದೂರುದಾರ ಸಂದೀಪ್ ದತ್ತಾ ಪಾಟೀಲ್ ಅಪಕರಣ ಮತ್ತು ಹಣ ದರೋಡೆ ಸಂಬಂಧ ಎಲ್ಲಾ ಆಯಾಮಗಳಲ್ಲಿಯೂ ಎಸ್ಐಟಿ ತನಿಖೆ ನಡೆಸುತ್ತಿದೆ. ಇತ್ತೀಚೆಗೆ ವೈರಲ್ ಆದ ಆಡಿಯೋ ಸಂಬಂಧವೂ ಪರಿಶೀಲನೆ ನಡೆಸಲಾಗುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ