ಕೆಂಪೇಗೌಡ ಏರ್‌ಪೋರ್ಟ್: ಸೊಂಟದಲ್ಲಿ ಮರೆಮಾಚಿ 2.8 ಕೆಜಿ ಚಿನ್ನ ಸಾಗಾಟ ಯತ್ನ, ಇಬ್ಬರು ವಶಕ್ಕೆ

Published : Sep 10, 2023, 01:42 PM ISTUpdated : Sep 10, 2023, 01:44 PM IST
ಕೆಂಪೇಗೌಡ ಏರ್‌ಪೋರ್ಟ್: ಸೊಂಟದಲ್ಲಿ ಮರೆಮಾಚಿ 2.8 ಕೆಜಿ ಚಿನ್ನ ಸಾಗಾಟ ಯತ್ನ, ಇಬ್ಬರು ವಶಕ್ಕೆ

ಸಾರಾಂಶ

ದುಬೈನಿಂದ ಬೆಂಗಳೂರಿಗೆ ಬಂದಿಳಿದ ಪ್ರಯಾಣಿಕರಿಬ್ಬರು ಸೊಂಟದ ಭಾಗದಲ್ಲಿ ಚಿನ್ನವನ್ನು ಬಚ್ಚಿಟ್ಟುಕೊಂಡು ಅಕ್ರಮ ಸಾಗಾಟಕ್ಕೆ ಯತ್ನಿಸಿ ಸಿಕ್ಕಿ ಬಿದ್ದ ಘಟನೆ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.

ದೇವನಹಳ್ಳಿ (ಸೆ.10): ದುಬೈನಿಂದ ಬೆಂಗಳೂರಿಗೆ ಬಂದಿಳಿದ ಪ್ರಯಾಣಿಕರಿಬ್ಬರು ಸೊಂಟದ ಭಾಗದಲ್ಲಿ ಚಿನ್ನವನ್ನು ಬಚ್ಚಿಟ್ಟುಕೊಂಡು ಅಕ್ರಮ ಸಾಗಾಟಕ್ಕೆ ಯತ್ನಿಸಿ ಸಿಕ್ಕಿ ಬಿದ್ದ ಘಟನೆ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.

ದುಬೈ ನಿಂದ ಬೆಂಗಳೂರಿಗೆ EK- 564 ವಿಮಾನದಲ್ಲಿ ಆಗಮಿಸಿದ ಇಬ್ಬರು ಪ್ರಯಾಣಿಕರು. ಅನುಮಾನಾಸ್ಪದವಾಗಿ ಕಂಡುಬಂದ ಹಿನ್ನೆಲೆ ಬೆಂಗಳೂರು ಏರ್ಪೋರ್ಟ್ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಅಕ್ರಮವಾಗಿ ಸಾಗಿಸಲೆತ್ನಿಸಿದ ಚಿನ್ನ ಭಾರೀ ಪ್ರಮಾಣದ ಚಿನ್ನ ಪತ್ತೆಯಾಗಿದೆ. 

ಬ್ಯಾಂಕಾಕ್‌ನಿಂದ ಹಾವು, ಕೋತಿ ಕಳ್ಳ ಸಾಗಣೆ: ಏರ್‌ಪೋರ್ಟ್‌ನಲ್ಲಿ ವಶಕ್ಕೆ

ಇಬ್ಬರು ಪ್ರಯಾಣಿಕರ ದೈಹಿಕ ತಪಾಸಣೆ ನಡೆಸಿದಾಗ ಸೊಂಟದ ಭಾಗಕ್ಕೆ  ಸುಮಾರು 2.8 ಕೆಜಿ ಚಿನ್ನವನ್ನು ಕಟ್ಟಿಕೊಂಡು ಮರೆಮಾಚಿರುವುದು ಪತ್ತೆ. ತಕ್ಷಣ ಕಸ್ಟಮ್ಸ್ ಅಧಿಕಾರಿಗಳು ಚಿನ್ನ ವಶಪಡಿಸಿಕೊಂಡಿದ್ದಾರೆ. ಸದ್ಯ ಇಬ್ಬರು ಪ್ರಯಾಣಿಕರನ್ನು ವಶಕ್ಕೆ ಪಡೆದು ಹೆಚ್ಚಿನ ತನಿಖೆಯನ್ನು ಮುಂದುವರಿಸಿದ್ದಾರೆ.

ಮಂಗಳೂರು: ಕಸ್ಟಮ್ಸ್ ವಶಕ್ಕೆ ಪಡೆದ ರಕ್ತಚಂದನ 28 ಕೋಟಿಗೆ ಹರಾಜು!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬಾಲಿವುಡ್ ನಿರ್ದೇಶಕ ವಿಕ್ರಂ ಭಟ್, ಪತ್ನಿ ಶ್ವೇತಾಂಬರಿ ಭಟ್ ಬಂಧನ; ಅಂತಿಂಥ ವಂಚನೆ ಕೇಸಲ್ಲ ಇದು ಅಂತೀರಾ?!
ಕೊಪ್ಪಳ: ಹಸೆಮಣೆ ಏರಬೇಕಿದ್ದ ಜೋಡಿ ಮಸಣಕ್ಕೆ - ಪ್ರಿ-ವೆಡ್ಡಿಂಗ್ ಶೂಟಿಂಗ್ ಮುಗಿಸಿ ವಾಪಸಾಗುವಾಗ ಭೀಕರ ದುರಂತ!