
ಬೆಂಗಳೂರು, [ಮಾ.02]: ಕಿಡ್ನಾಪ್ ಆಗಿದ್ದ 3 ವರ್ಷದ ಮಗುವನ್ನು ಕೇವಲ 48 ಗಂಟೆಗಳಲ್ಲಿ ಬೆಂಗಳೂರಿನ ವಿದ್ಯಾರಣ್ಯಪುರ ಪೊಲೀಸರು ಪತ್ತೆ ಮಾಡಿದ್ದಾರೆ.
ಅರ್ಜುನ್ ಅಪಹರಣವಾಗಿದ್ದ ಮಗು. ನಾಗರಾಜ ಹಾಗೂ ಲಕ್ಷ್ಮೀ ದಂಪತಿಯ ಮಗು ಫೆಬ್ರವರಿ 29 ರಂದು ಮನೆಯ ಮುಂದೆ ಅಟವಾಡುತ್ತಿದ್ದ ಸಂದರ್ಭದಲ್ಲಿ ಅಪರಣವಾಗಿತ್ತು. ಬೆಂಗಳೂರಿನ ಸಿಂಗಾಪುರದ ಹೊಸಬಾಳು ನಗರದಲ್ಲಿ ನಡೆದ ಘಟನೆ ನಡೆದಿತ್ತು.
ವಿಶ್ವಾಸ ಕಳೆದುಕೊಂಡಿತಾ ಜೆಡಿಎಸ್, ಸದ್ದು ಮಾಡುತ್ತಿದೆ ದೀಪಿಕಾ ಡ್ರೆಸ್; ಮಾ.2ರ ಟಾಪ್ 10 ಸುದ್ದಿ!
ತಕ್ಷಣ ಮಗು ತಾಯಿ ಲಕ್ಷ್ಮಿ ವಿದ್ಯಾರಣ್ಯಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಕೂಡಲೇ ಕಿಡ್ನಾಪರ್ಸ್ ಪತ್ತೆಗೆ ಬಲೆ ಬೀಸಿದ್ದ ಪೋಲಿಸರು ಕೇವಲ 48 ಗಂಟೆಯಲ್ಲಿ ಮಗುವನ್ನು ತಾಯಿಯ ಮಡಿಲಿಗೆ ಸೇರಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಸೋಮವಾರ ಬೆಳಗ್ಗೆ ಮಲ್ಲೇಶ್ವರದಲ್ಲಿ ರಸ್ತೆಬದಿ ಅಳುತ್ತಿದ್ದ ಬಾಲಕನನ್ನು ನೋಡಿದ ವ್ಯಕ್ತಿಯೊಬ್ಬರು ತನ್ನ ಮನೆಗೆ ಕರೆದೊಯ್ದು ಆರೈಕೆ ಮಾಡಿದ್ದರು. ಜತೆಗೆ ಮಲ್ಲೇಶ್ವರ ಠಾಣೆಗೂ ಮಾಹಿತಿ ನೀಡಿದ್ದರು. ವಿದ್ಯಾರಣ್ಯಪುರ ಸಿಬ್ಬಂದಿ ತಕ್ಷಣ ತೆರಳಿ ನೋಡಿದಾಗ ಕಾಣೆಯಾಗಿದ್ದ ಬಾಲಕ ಎಂಬುದು ಖಚಿತವಾಗಿ ಕರೆದೊಯ್ದು ಪಾಲಕರ ಮಡಿಲಿಗೆ ಸೇರಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ