ತುಮಕೂರು: ರಾಜಕೀಯ ದ್ವೇಷ, ಕೆರೆಗೆ ವಿಷ ಹಾಕಿ ಲಕ್ಷಾಂತರ ಮೀನುಗಳ ಮಾರಣಹೋಮ

Published : Nov 27, 2022, 11:09 AM IST
ತುಮಕೂರು: ರಾಜಕೀಯ ದ್ವೇಷ, ಕೆರೆಗೆ ವಿಷ ಹಾಕಿ ಲಕ್ಷಾಂತರ ಮೀನುಗಳ ಮಾರಣಹೋಮ

ಸಾರಾಂಶ

ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಹುತ್ರಿದುರ್ಗ ಹೋಬಳಿಯ ವಡೆಘಟ್ಟ ಗ್ರಾಮದಲ್ಲಿ  ನಡೆದ ಘಟನೆ

ತುಮಕೂರು(ನ.27):  ರಾಜಕೀಯ ದ್ವೇಷಕ್ಕೆ ಕೆರೆಗೆ ವಿಷ ಹಾಕಿದ್ದರಿಂದ ಲಕ್ಷಾಂತರ ಮೀನುಗಳು ಸಾವನ್ನಪ್ಪಿದ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಹುತ್ರಿದುರ್ಗ ಹೋಬಳಿಯ ವಡೆಘಟ್ಟ ಗ್ರಾಮದಲ್ಲಿ ನಿನ್ನೆ(ಶನಿವಾರ) ರಾತ್ರಿ ನಡೆದಿದೆ. 

ವಡೆಘಟ್ಟ ಗ್ರಾಮದ ಕೆರೆಗೆ ವಿಷ ಹಾಕಿ ಕಿಡಿಗೇಡಿಗಳು ವಿಕೃತಿ ಮೆರೆದಿದ್ದಾರೆ. ಜೋಡಿ ಹೊಸಹಳ್ಳಿ ಗ್ರಾಮ‌ ಪಂಚಾಯ್ತಿ ಸದಸ್ಯ ಚಂದನ್ ಎಂಬುವರು ಮೀನು ಸಾಕಾಣಿಕೆ ಮಾಡಲು ಕೆರೆಯನ್ನ ಗುತ್ತಿಗೆ ಪಡೆದಿದ್ದರು. ಕಳೆದ ಎರಡು ತಿಂಗಳ ಹಿಂದೆ ಬರೋಬ್ಬರಿ ಐದುವರೆ ಲಕ್ಷ ಮೀನಿನ ಮರಿಗಳನ್ನ ಕೆರೆಗೆ ಬಿಟ್ಟಿದ್ದರು. ಹಗಲು ರಾತ್ರಿ ನಿದ್ದೆಗೆಟ್ಟು ಮೀನುಗಳನ್ನ ಸಾಕಿದ್ರು. ಆದರೆ, ರಾಜಕೀಯ ದ್ವೇಷಕ್ಕೆ ನಿನ್ನೆ ರಾತ್ರಿ ಕಿಡಿಗೇಡಿಗಳು ಕೆರೆಗೆ ವಿಷ ಹಾಕಿ ವಿಕೃತಿ ಮೆರೆದಿದ್ದಾರೆ. 

ಮತಾಂತರ ಆರೋಪ: ವೈದ್ಯೆ ಸೇರಿದಂತೆ ಮೂವರ ವಿರುದ್ಧ ಕೇಸ್‌

ಕೆರೆಗೆ ವಿಷ ಮಿಶ್ರಣವಾದ ಹಿನ್ನೆಲೆಯಲ್ಲಿ ಕೆರೆಯಲ್ಲಿದ್ದ ಲಕ್ಷಾಂತರ ಮೀನುಗಳೆಲ್ಲ ಸಾವನ್ನಪ್ಪಿವೆ. ಇಂದು(ಭಾನುವಾರ)ಬೆಳಗ್ಗೆ ಗ್ರಾಮಸ್ಥರು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಕುಣಿಗಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಥಾಯ್ಲೆಂಡ್‌ನಿಂದ ರಾಜ್ಯಕ್ಕೆ ಹೆಚ್ಚು ಹೈಡ್ರೋ ಗಾಂಜಾ!
ಖ್ಯಾತ ಸ್ಟಾರ್ ನಟನಿಗೆ ಬಿಷ್ಟೋಯ್ ಗ್ಯಾಂಗ್ ಬೆದರಿಕೆ! ಆತಂಕದಲ್ಲಿರುವ ಫ್ಯಾನ್ಸ್, ಏನಾಗ್ತಿದೆ ಅಲ್ಲೀಗ?