Bengaluru Fridge Murder: ಮಹಾಲಕ್ಷ್ಮಿಯನ್ನು 30 ಪೀಸ್‌ ಮಾಡಿ ತಮ್ಮನಿಗೆ ಕರೆ ಮಾಡಿದ್ದ ಹಂತಕ..!

Published : Sep 24, 2024, 06:37 AM ISTUpdated : Sep 24, 2024, 06:40 AM IST
Bengaluru Fridge Murder: ಮಹಾಲಕ್ಷ್ಮಿಯನ್ನು 30 ಪೀಸ್‌ ಮಾಡಿ ತಮ್ಮನಿಗೆ ಕರೆ ಮಾಡಿದ್ದ ಹಂತಕ..!

ಸಾರಾಂಶ

ವೈಯಾಲಿಕಾವಲ್‌ನಲ್ಲಿ ನಡೆದಿದ್ದ ಮಹಾಲಕ್ಷ್ಮಿ ಹತ್ಯೆಯನ್ನು ಒಡಿಶಾ ಮೂಲದ ವ್ಯಕ್ತಿಯ ಎಸಗಿರುವುದು ಖಚಿತವಾಗಿದ್ದು, ಕೃತ್ಯ ಎಸಗಿದ ಬಳಿಕ ನಗರ ತೊರೆದು ತನ್ನೂರಿಗೆ ಆತ ಪರಾರಿಯಾಗಿದ್ದಾನೆ. ತಾಂತ್ರಿಕ ಮಾಹಿತಿ ಆಧರಿಸಿ ನಗರದಲ್ಲೇ ಇದ್ದ ಆರೋಪಿಯ ಸೋದರನನ್ನು ಪತ್ತೆ ಹಚ್ಚಿ ವಿಚಾರಣೆ ನಡೆಸಲಾಗಿದೆ. 

ಬೆಂಗಳೂರು(ಸೆ.24):  ಅಕ್ರಮ ಸಂಬಂಧ ಹಿನ್ನೆಲೆಯಲ್ಲಿ ಮಹಾಲಕ್ಷ್ಮಿಯನ್ನು ತುಂಡು ತುಂಡಾಗಿ ಕತ್ತರಿಸಿ ಹತ್ಯೆಗೈದ ಬಳಿಕ ತನ್ನ ಸೋದರನಿಗೆ ಕರೆ ಮಾಡಿ ತಿಳಿಸಿ ಮೃತಳ ಸ್ನೇಹಿತ ಪರಾರಿಯಾಗಿದ್ದಾನೆ ಎಂಬ ಸಂಗತಿ ಪೊಲೀಸರ ತನಿಖೆಯಲ್ಲಿ ಪತ್ತೆಯಾಗಿದೆ. 

ವೈಯಾಲಿಕಾವಲ್‌ನಲ್ಲಿ ನಡೆದಿದ್ದ ಮಹಾಲಕ್ಷ್ಮಿ ಹತ್ಯೆಯನ್ನು ಒಡಿಶಾ ಮೂಲದ ವ್ಯಕ್ತಿಯ ಎಸಗಿರುವುದು ಖಚಿತವಾಗಿದ್ದು, ಕೃತ್ಯ ಎಸಗಿದ ಬಳಿಕ ನಗರ ತೊರೆದು ತನ್ನೂರಿಗೆ ಆತ ಪರಾರಿಯಾಗಿದ್ದಾನೆ. ತಾಂತ್ರಿಕ ಮಾಹಿತಿ ಆಧರಿಸಿ ನಗರದಲ್ಲೇ ಇದ್ದ ಆರೋಪಿಯ ಸೋದರನನ್ನು ಪತ್ತೆ ಹಚ್ಚಿ ವಿಚಾರಣೆ ನಡೆಸಲಾಗಿದೆ ಎಂದು ಮೂಲಗಳು 'ಕನ್ನಡಪ್ರಭ'ಕ್ಕೆ ತಿಳಿಸಿವೆ. 

ಭಯಾನಕ ಹತ್ಯೆಗೆ ಬೆಚ್ಚಿದ ಬೆಂಗಳೂರು: ನೇಪಾಳದ ಮಹಾಲಕ್ಷ್ಮೀ ಇಲ್ಲಿ ಭೀಕರವಾಗಿ ಕೊಲೆಯಾಗಿದ್ದೇಕೆ..?

ಮೃತ ಮಹಾಲಕ್ಷ್ಮಿ ಕೆಲಸ ಮಾಡುತ್ತಿದ್ದ ಮಾಲ್ ನಲ್ಲೇ ಆರೋಪಿ ಕೂಡ ಸ್ಕೋರ್ ಮ್ಯಾನೇಜರ್ ಆಗಿದ್ದ ಎನ್ನಲಾಗಿದೆ. 9 ತಿಂಗಳ ಹಿಂದೆ ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತಿ ತೊರೆದು ನಗರಕ್ಕೆ ಬಂದು ಲಕ್ಷ್ಮಿ ನೆಲೆಸಿದ್ದಳು. ಮಹಾಲಕ್ಷ್ಮಿ ಆ ವೇಳೆ ಮಾರಾಟ ಮಳಿಗೆಯಲ್ಲಿ ಕೆಲಸಕ್ಕೆ ಸೇರಿದ್ದ ಆಕೆಗೆ ಆರೋಪಿಯ ಪರಿಚಯವಾಗಿದೆ. ಕಾಲಕ್ರಮೇಣ ಇಬ್ಬರ ನಡುವಿನ ಸ್ನೇಹ ಅಕ್ರಮ ಸಂಬಂಧಕ್ಕೆ ತಿರುಗಿದೆ. ಇತ್ತೀಚಿಗೆ ಈ ಜೋಡಿ ಮಧ್ಯೆ ಮನಸ್ತಾಪ ಮೂಡಿತ್ತು ಎಂದು ತಿಳಿದು ಬಂದಿದೆ. ಇತ್ತೀಚೆಗೆ ಬೇರೊಬ್ಬನ ಜೊತೆ ಮಹಾಲಕ್ಷ್ಮಿ ಸಲುಗೆ ಬೆಳೆದಿತ್ತು. ಈ ವಿಚಾರ ತಿಳಿದು ಕೋಪಗೊಂಡಿದ್ದ ಆರೋಪಿ, ಪರ ಸಂಗ ಬಿಡುವಂತೆ ಮಹಾಲಕ್ಷ್ಮಿಗೆ ತಾಕೀತುಮಾಡಿದ್ದ.ಇದೇವಿಷಯವಾಗಿಮಹಾಲಕ್ಷ್ಮಿ, ಜತೆ ಆರೋಪಿಗೆ ಮತ್ತೆ ಜಗಳವಾಗಿರಬಹುದು. ಆಗ ಮಾತುಕತೆ ಬೆಳೆದು ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಕೊಲೆಯಲ್ಲಿ ಅಂತ್ಯವಾಗಿದೆ. 

ತನ್ನ ಗೆಳತಿಯನ್ನು ಭೀಕರವಾಗಿ ಕೊಂದು ಬಳಿಕ ಹಿಡಿತಾಕ್ಕೆ ಪರಾರಿಯಾಗಲು ಆರೋಪಿ ಯೋಜಿಸಿದ್ದ ಅಂದು ರಾತ್ರಿ ತನ್ನ ಸೋದರನಿಗೆ ಕರೆ ಮಾಡಿದ ಆರೋಪಿ, ಮಹಾಲಕ್ಷ್ಮಿಯನ್ನು ಕೊಲೆ ಮಾಡಿದ್ದೇನೆ. ನನ್ನನ್ನು ಪೊಲೀಸರು ಬಂಧಿಸುತ್ತಾರೆ. ಹಾಗಾಗಿ ನಾನು ಬೆಂಗಳೂರು ತೊರೆದು ಹೋಗುತ್ತಿದ್ದೇನೆ. ನೀನು ಹೊರಟುಬಿಡು ಎಂದು ಹೇಳಿದ್ದೆ. ಆದರೆ ತನ್ನ ಅಣ್ಣನ ಮಾತು ನಂಬಿ ಆರೋಪಿಸೋದರ ನಗರ ತೊರೆದಿರಲಿಲ್ಲ ಎಂದು ಮೂಲಗಳು ವಿವರಿಸಿವೆ. 

ಪ.ಬಂಗಾಳದಲ್ಲಿ ಮೊಬೈಲ್ ಸ್ವಿಚ್ ಆಫ್ 

ಹತ್ಯೆ ಪ್ರಕರಣದ ತನಿಖೆಗಿಳಿದ ಪೊಲೀಸರು. ಮೃತಳ ಮೊಬೈಲ್‌ ಕರೆ (ಸಿಡಿಆರ್)ಗಳನ್ನು ಪರಿಶೀಲಿಸಿದಾಗ ಆರೋಪಿ ಸೇರಿ ಮೂವರ ಜತೆ ಹೆಚ್ಚಿನ ಸಂಭಾಷಣೆ ನಡೆಸಿರುವುದು ಗೊತ್ತಾಯಿತು. ಈ ಸಿಡಿಆರ್‌ಆಧರಿಸಿ ಮಹಾಲಕ್ಷ್ಮಿ ಜತೆ ನಿಕಟ ಸಂಪರ್ಕದಲ್ಲಿದ್ದವರ ಪತ್ತೆ ಹಚ್ಚಲಾಯಿತು. ಆದರೆ ಮೂವರ ಪೈಕಿ ಇಬ್ಬರು ಮಾತ್ರ ಸಿಕ್ಕಿದ್ದರು. ಆದರೆ ಮತ್ತೊಬ್ಬ ಪತ್ತೆಯಾಗಲಿಲ್ಲ ಆಗ ಆತನ ಮೊಬೈಲ್ ಕರೆಗಳ ವಿವರ ಸಂಗ್ರಹಿಸಿದಾಗ ಪಶ್ಚಿಮ ಬಂಗಾಳದಲ್ಲಿ ಕೊನೆ ಬಾರಿ ಲೋಕೇಷನ್ ಸಿಕ್ಕಿತು. ನಂತರ ಆರೋಪಿ ಮೊಬೈಲ್ ಸ್ವಿಚ್ಡ್‌ ಆಫ್‌ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

Bengaluru Fridge Murder: ಸೂಟ್‌ಕೇಸ್‌ನಲ್ಲಿ ಡೆಡ್‌ ಬಾಡಿ ಸಾಗಿಸಲು ಪ್ಲ್ಯಾನ್‌ ಮಾಡಿದ್ದ ಹಂತಕ!

ವರದಿ ಕೇಳಿದ ಮಹಿಳಾ ಆಯೋಗ 

ಬೆಂಗಳೂರು: ವೈಯಾಲಿಕಾವಲ್ ಮಹಾಲಕ್ಷ್ಮಿ ಬರ್ಭರ ಹತ್ಯೆ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಂಡು ವರದಿ ನೀಡುವಂತೆ ಮಹಿಳಾ ಆಯೋಗವು ನಗರ ಉಪಪೊಲೀಸ್‌ ಆಯುಕ್ತರಿಗೆ ಪತ್ರ ಬರೆದಿದೆ. ದುಷ್ಕರ್ಮಿಗಳು ಮಹಾಲಕ್ಷ್ಮಿ ಯನ್ನು ತುಂಡು ತುಂಡಾಗಿ ಕತ್ತರಿಸಿ ಫ್ರಿಡ್ಜ್‌ನಲ್ಲಿ ಇಟ್ಟು ಪರಾರಿಯಾಗಿ ದ್ದಾರೆ. ಮೂರ್ನಾಲ್ಕು ದಿನಗಳ ಬಳಿಕ ದುರ್ವಾಸನೆ ಬಂದಾಗಲೇ ಪ್ರಕರಣ ಬೆಳಕಿಗೆ ಬಂದಿದೆ. ಪೊಲೀಸ್‌ ಇಲಾಖೆ ತನಿಖೆಯನ್ನು ನಿಯಮಾನುಸಾರ ಕೈಗೊಂಡು ಇದಕ್ಕೆ ಕಾರಣಿಕೃತ ರಾದವನ್ನು ಪತ್ತೆ ಮಾಡಿ ವರದಿ ನೀಡಿ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ವಿಶೇಷ ತಂಡಗಳ ಕಾರ್ಯಾಚರಣೆ 

ಬೆಂಗಳೂರಿನ ವೈಯಾಲಿಕಾವಲ್ ಮಹಾಲಕ್ಷ್ಮಿ ಬರ್ಧರ ಹತ್ಯೆ ಪ್ರಕರಣ ಸಂಬಂಧ ಆರೋಪಿಯ ಸೋದರನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಅಲ್ಲದೆ ಒಡಿಶಾ ರಾಜ್ಯದ ಹಳ್ಳಿಯಲ್ಲಿ ನೆಲೆಸಿರುವ ಆರೋಪಿಯ ಪೋಷಕರನ್ನು ಸಂಪರ್ಕಿಸಲಾಗಿದೆ. ಆದರೆ ಕೃತ್ಯ ಎಸಗಿದ ನಂತರ ಆರೋಪಿ ಊರಿಗೆ ಹೋಗದೆ ಬೇರೆಡೆ ತಲೆಮರೆಸಿ ಕೊಂಡಿದ್ದಾನೆ. ಹೀಗಾಗಿ ಆರೋಪಿ ಪತ್ತೆಗೆ ಒಡಿಶಾ ಹಾಗೂ ಪಶ್ಚಿಮ ಬಂಗಾಳ ರಾಜ್ಯಗಳಲ್ಲಿ ವಿಶೇಷ ಪೊಲೀಸರ ತಂಡಗಳು ಹುಡುಕಾಟ ನಡೆಸುತ್ತಿದೆ ಎಂದು ಮೂಲಗಳು ತಿಳಿಸಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಪ್ರೆಗ್ನೆಂಟ್ ಮಾಡಿ ಗರ್ಭಪಾತ ಮಾಡಿಸಿದ, Sorry ಅಮ್ಮಾ ಸಾಯ್ತಿದ್ದೀನಿ: ಯುವತಿ ಆತ್ಮ*ಹತ್ಯೆ
Actor Dileep Case: ಖ್ಯಾತ ನಟಿ ಮೇಲಿನ ಅ*ತ್ಯಾಚಾರ ಆರೋಪ; 8 ವರ್ಷಗಳ ಹೋರಾಟ, ನಟ ದಿಲೀಪ್‌ಗೆ ನಿರಾಳ!