ಕೊಡಗು: ಹಳೇ ದ್ವೇಷ, , ಲಾರಿ ಹತ್ತಿಸಿ ಉದ್ಯಮಿಯ ಕೊಲೆ ಯತ್ನ!

Published : Oct 22, 2025, 08:58 AM IST
Lorry rams car in Somwarpet

ಸಾರಾಂಶ

ಕೊಡಗು ಜಿಲ್ಲೆಯಲ್ಲಿ ಹಳೆ ದ್ವೇಷದ ಹಿನ್ನೆಲೆಯಲ್ಲಿ ಉದ್ಯಮಿ ತೇಜಕುಮಾರ್ ಅವರ ಕಾರಿಗೆ ಲಾರಿ ಗುದ್ದಿಸಿ ಕೊಲೆಗೆ ಯತ್ನಿಸಲಾಗಿದೆ. ಈ ಘಟನೆಯಲ್ಲಿ ಕಾರು ಸಂಪೂರ್ಣ ಜಖಂಗೊಂಡಿದ್ದು, ಆರೋಪಿಗಳು ಲಾರಿ ಬಿಟ್ಟು ಪರಾರಿಯಾಗಿದ್ದಾರೆ. ಶನಿವಾರಸಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಕೊಡಗು (ಅ.22): ಹಳೆ ದ್ವೇಷ ಹಿನ್ನೆಲೆ ಉದ್ಯಮಿ ಪ್ರಯಾಣಿಸುತ್ತಿದ್ದ ಕಾರಿಗೆ ಲಾರಿ ಗುದ್ದಿಸಿ ಕೊಲೆಗೆ ಯತ್ನಿಸಿದ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ದೊಡ್ಡಕುಂದ ಗ್ರಾಮದ ಬಳಿ ನಿನ್ನೆ ರಾತ್ರಿ ನಡೆದಿದೆ.

ತೇಜಕುಮಾರ್ ಕೊಲೆಯತ್ನದಿಂದ ಬಚಾವ್ ಆಗಿರುವ ಉದ್ಯಮಿ. ತೇಜಕುಮಾರ್ ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ಇಬ್ಬರು ಕಿಡಿಗೇಡಿಗಳು ಲಾರಿಯನ್ನು ಉದ್ದೇಶಪೂರ್ವಕವಾಗಿ ಗುದ್ದಿಸಿ ಕೊಲೆಗೆ ಯತ್ನಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಕಾರು ಸಂಪೂರ್ಣ ಜಖಂ:

ರಾತ್ರಿ ವೇಳೆ ತೇಜಕುಮಾರ್ ಅವರ ಕಾರಿನ ಮೇಲೆ ಲಾರಿಯನ್ನು ಗುದ್ದಿಸಲಾಗಿದ್ದು, ಈ ಘಟನೆಯಲ್ಲಿ ಕಾರು ಸಂಪೂರ್ಣ ಜಖಂಗೊಂಡಿದೆ. ಒಂದು ಬಾರಿ ಗುದ್ದಿದ ಬಳಿಕ ಮತ್ತೆ ಎರಡನೇ ಬಾರಿ ಲಾರಿಯನ್ನು ಗುದ್ದಿಸುವ ಯತ್ನದಲ್ಲಿ ಕಿಡಿಗೇಡಿಗಳು ಸಮೀಪದ ಬೈಕೊಂದಕ್ಕೂ ಗುದ್ದಿದ್ದಾರೆ. ಈ ವೇಳೆ ಲಾರಿ ರಸ್ತೆ ಪಕ್ಕದ ಗುಂಡಿಗೆ ಇಳಿದ ಕಾರಣ, ಆರೋಪಿಗಳು ವಾಹನವನ್ನು ಬಿಟ್ಟು ಪರಾರಿಯಾಗಿದ್ದಾರೆ.

ಹಳೇ ದ್ವೇಷವೇ ಕಾರಣಾಯ್ತಾ?

ಈ ಘಟನೆಗೆ ಹಳೇ ದ್ವೇಷವೇ ಕಾರಣ ಎಂದು ಶಂಕಿಸಲಾಗಿದ್ದು, ಒಂದು ತಿಂಗಳ ಹಿಂದೆಯೂ ತೇಜಕುಮಾರ್ ಮೇಲೆ ಇದೇ ವ್ಯಕ್ತಿಗಳಿಂದ ಹಲ್ಲೆ ನಡೆದಿತ್ತು ಎಂದು ತಿಳಿದುಬಂದಿದೆ. ಆಗ ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸದ್ಯ ಶನಿವಾರಸಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ಆರಂಭಿಸಿದ್ದಾರೆ. ಆರೋಪಿಗಳ ಪತ್ತೆಗೆ ಶೋಧ ಕಾರ್ಯ ಮುಂದುವರಿದಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕೆಂಗೇರಿ ಮೆಟ್ರೋ ನಿಲ್ದಾಣದಲ್ಲಿ ಟ್ರ್ಯಾಕ್‌ಗೆ ಹಾರಿ ವ್ಯಕ್ತಿ ಆತ್ಮ೧ಹತ್ಯೆ; ನೇರಳೆ ಮಾರ್ಗದಲ್ಲಿ ರೈಲು ಸಂಚಾರಕ್ಕೆ ವ್ಯತ್ಯಯ!
ರೇಣುಕಾಸ್ವಾಮಿ ತಂದೆ-ತಾಯಿಗೆ ಸಮನ್ಸ್, ದರ್ಶನ್‌ಗೆ ಜೈಲಲ್ಲೊಂದು ಶಾಕ್, ಕೋರ್ಟ್‌ನಲ್ಲೊಂದು ಆಘಾತ!