Dharmasthala: ಧರ್ಮಸ್ಥಳಕ್ಕೆ ತೆರಳಿದ್ದ ಕೊಪ್ಪಳದ ಶಿಕ್ಷಕ ಶವವಾಗಿ ಪತ್ತೆ!

Published : Jul 22, 2025, 05:53 PM ISTUpdated : Jul 22, 2025, 05:56 PM IST
dharmasthala crime

ಸಾರಾಂಶ

ಕೊಪ್ಪಳ ಜಿಲ್ಲೆಯ ಶಿಕ್ಷಕರೊಬ್ಬರು ಧರ್ಮಸ್ಥಳದಲ್ಲಿ ಮೃತದೇಹವಾಗಿ ಪತ್ತೆಯಾಗಿದ್ದಾರೆ. ಶಾಲೆಯಿಂದ ಕಾಣೆಯಾಗಿದ್ದ ಶಿಕ್ಷಕರ ಸಾವಿನ ಸುತ್ತ ಅನುಮಾನಗಳು ಕಾಡುತ್ತಿವೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಕೊಪ್ಪಳ (ಜುಲೈ.22):ಸಾಲು ಸಾಲು ಕೊಲೆ ಪ್ರಕರಣಗಳಿಂದ ರಾಜ್ಯಾದ್ಯಂತ ಚರ್ಚೆಗೆ ಗ್ರಾಸವಾಗಿರುವ ಧರ್ಮಸ್ಥಳದಲ್ಲಿ ಮತ್ತೊಂದು ಆಘಾತಕಾರಿ ಘಟನೆ ನಡೆದಿದೆ. ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಜುಮಲಾಪೂರ ಗ್ರಾಮದ ಸರಕಾರಿ ಶಾಲೆಯ ಶಿಕ್ಷಕ ಬಸವರಾಜ್ ಪೊಲೀಸ್ ಪಾಟೀಲ್ (35) ಅವರು ಧರ್ಮಸ್ಥಳದಲ್ಲಿ ಕೊಳೆತ ಶವವಾಗಿ ಪತ್ತೆಯಾಗಿದ್ದಾರೆ.

ಬಸವರಾಜ್ ಅವರು ಮಂಗಳವಾರದಿಂದ ಶಾಲೆಯಿಂದ ಕಾಣೆಯಾಗಿದ್ದರು. ಶಾಲೆಯ ಅಡುಗೆ ಕೋಣೆಯ ಕೀ ಸಮೇತ ಅವರು ನಾಪತ್ತೆಯಾಗಿದ್ದರು. ಈ ಘಟನೆ ಶಾಲೆಯ ಆಡಳಿತ ಮಂಡಳಿಯಲ್ಲಿ ಆತಂಕಕ್ಕೆ ಕಾರಣವಾಗಿತ್ತು. ಊರು ಸುತ್ತಮುತ್ತ ಹುಡುಕಾಡಿದರೂ ಪತ್ತೆಯಾಗಿರಲಿಲ್ಲ. ಇದರಿಂದ ಕುಟುಂಬಸ್ಥರು ಆತಂಕಗೊಂಡಿದ್ದರು.

ಕಳೆದ ಸೋಮವಾರ ಕ್ಷೇತ್ರ ಶಿಕ್ಷಣಾಧಿಕಾರಿಗಳು ಶಾಲೆಗೆ ಭೇಟಿ ನೀಡಿದ್ದು, ಅದರ ಮರುದಿನವೇ ಬಸವರಾಜ್ ಕಾಣೆಯಾಗಿದ್ದರು. ಜುಲೈ 20ರಂದು ಧರ್ಮಸ್ಥಳದ ನೇತ್ರಾವತಿ ಸೇತುವೆಯ ಕೆಳಭಾಗದ ಹಳೆಯ ರಸ್ತೆಯಲ್ಲಿ ಬಸವರಾಜ್ ಅವರ ಶವ ಪತ್ತೆಯಾಗಿದೆ. ಪ್ರಾಥಮಿಕ ತನಿಖೆಯಿಂದ ಆತ್ಮ ತ್ಯೆಯ ಶಂಕೆ ವ್ಯಕ್ತವಾಗಿದ್ದು, ಬಸವರಾಜ್ ನದಿಯಲ್ಲಿ ಸ್ನಾನಕ್ಕೆ ತೆರಳಿದ ವೇಳೆ ನೀರಿನಲ್ಲಿ ಕೊಚ್ಚಿಕೊಂಡು ಹೋಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬೆಂಗಳೂರು ಅಪಾರ್ಟ್‌ಮೆಂಟ್‌ನ 16 ಕುಟುಂಬಗಳಿಗೆ ರೌಡಿಸಂ ದರ್ಶನ; ಮಾಟ-ಮಂತ್ರ ಮಾಡಿಸಿ ಕಿರುಕುಳ!
ಕೆಲಸ ಇಲ್ಲದ ಗಂಡನಿಗೆ ಪತ್ನಿ ಶೀಲದ ಮೇಲೆ ಶಂಕೆ: ನಿದ್ರೆಯಲ್ಲಿದ್ದ ಮಗಳ ಕತ್ತು ಸೀಳಿದ ಪತಿ