
ಬೆಳಗಾವಿ (ನ.16) : ಕೆಪಿಟಿಸಿಎಲ್ ಕಿರಿಯ ಸಹಾಯಕ ನೇಮಕಾತಿ ಪರೀಕ್ಷಾ ಅಕ್ರಮ ಪ್ರಕರಣದಲ್ಲಿ ಪ್ರಕರಣದಲ್ಲಿ ಮತ್ತೆ ನಾಲ್ವರನ್ನು ಗೋಕಾಕ ಶಹರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಎಲೆಕ್ಟ್ರಾನಿಕ್ ಡಿವೈಸ್ ಮಾಡಿಫೈ ಮಾಡಿ ಪರೀಕ್ಷಾರ್ಥಿಗಳಿಗೆ ಸರಬರಾಜು ಮಾಡಿದ್ದ ಓರ್ವ, ಎಲೆಕ್ಟ್ರಾನಿಕ್ ಡಿವೈಸ್ ಬಳಸಿ ಪರೀಕ್ಷೆ ಬರೆದಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.
ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಮಾಡಲೆಂದೇ ವಿಶೇಷವಾಗಿ ಎಲೆಕ್ಟ್ರಾನಿಕ್ ಡಿವೈಸ್ ಮಾಡಿಫೈ ಮಾಡಿ ಪರೀಕ್ಷಾರ್ಥಿಗಳಿಗೆ ಚಿಪ್ ನೀಡಿದ್ದ ಮೂಡಲಗಿಯ ಮಂಜುನಾಥ ರಾಮಪ್ಪ ಮಾಳಿ (23). ಇವನ ಬಳಿ ಡಿವೈಸ್ ಖರೀದಿಸಿದ್ದ ಪರೀಕ್ಷಾರ್ಥಿಗಳಾದ ಅರಭಾಂವಿಯ ಪುಂಡಲಿಕ ಫಕೀರಪ್ಪ ಬನಾಜ (26), ಮೂಡಲಗಿಯ ಮಹಾದೇವ ಹಣಮಂತ ದಾಸನಾಳ ( 26), ಮಾರುತಿ ರಾಮಣ್ಣ ಹೊಲದವರ (27) ನಾಲ್ವರನ್ನು ಬಂಧಿಸಲಾಗಿದೆ. ಕೆಪಿಟಿಸಿಎಲ್ ಕಿರಿಯ ಸಹಾಯಕ ಪರೀಕ್ಷಾ ಅಕ್ರಮದಲ್ಲಿ ಬಂಧಿತರ ಸಂಖ್ಯೆ 33 ಕ್ಕೆ ಏರಿಕೆಯಾಗಿದೆ.
ಕೆಪಿಟಿಸಿಎಲ್ ಕಿರಿಯ ಸಹಾಯಕ ನೇಮಕಾತಿ ಪರೀಕ್ಷೆಯಲ್ಲಿ ಎಲೆಕ್ಟ್ರಾನಿಕ್ ಡಿವೈಸ್, ಮೈಕ್ರೋಚಿಪ್ ಬಳಸಿ ಪರೀಕ್ಷೆ ಬರೆದಿದ್ದ ಮೂವರು ಆರೋಪಿಗಳು. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಆರೋಪಿಗಳ ಬಂಧಿಸಿ ವಿಚಾರಣೆಗೊಳಪಡಿಸಿರುವ ಪೊಲೀಸರು. ಮುಂದಿನ ದಿನಗಳಲ್ಲಿ ಇನ್ನಷ್ಟು ಆರೋಪಿಗಳು ಬೆಳಕಿಗೆ ಬರುವ ಸಾಧ್ಯತೆ.
ಕೆಪಿಟಿಸಿಎಲ್ ಕಿರಿಯ ಸಹಾಯಕ ನೇಮಕಾತಿ ಪರೀಕ್ಷಾ ಅಕ್ರಮ ಹೆಚ್ಚಿನ ಸುದ್ದಿ ಓದಿ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ