ಮದುವೆಯಾಗುವಂತೆ ಪೀಡಿಸುತ್ತಿದ್ದ ಮಂಗಳಮುಖಿ ಕೊಲೆ ಮಾಡಿದ್ದ ಮೂವರ ಬಂಧನ

Published : Apr 29, 2025, 07:42 AM ISTUpdated : Apr 29, 2025, 08:33 AM IST
ಮದುವೆಯಾಗುವಂತೆ ಪೀಡಿಸುತ್ತಿದ್ದ ಮಂಗಳಮುಖಿ ಕೊಲೆ ಮಾಡಿದ್ದ ಮೂವರ ಬಂಧನ

ಸಾರಾಂಶ

ಇತ್ತೀಚೆಗೆ ನಡೆದಿದ್ದ ಮಂಗಳಮುಖಿ ತನುಶ್ರೀ (45) ಕೊಂದಿದ್ದ ಪ್ರಕರಣ ಸಂಬಂಧ ಆಕೆಯ ಸ್ನೇಹಿತ ಸೇರಿ ಮೂವರನ್ನು ಕೆ.ಆರ್‌.ಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು (ಏ.29): ಇತ್ತೀಚೆಗೆ ನಡೆದಿದ್ದ ಮಂಗಳಮುಖಿ ತನುಶ್ರೀ (45) ಕೊಂದಿದ್ದ ಪ್ರಕರಣ ಸಂಬಂಧ ಆಕೆಯ ಸ್ನೇಹಿತ ಸೇರಿ ಮೂವರನ್ನು ಕೆ.ಆರ್‌.ಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಕೆ.ಆರ್.ಪುರ ಸೀಗೇಹಳ್ಳಿ ನಿವಾಸಿ ಜಗದೀಶ್ (29), ಪ್ರಭಾಕರ್ (34) ಮತ್ತು ಸುಶಾಂತ್ (32) ಬಂಧಿತರು. ಆರೋಪಿಗಳು ಏ.17ರಂದು ಮಾರಕಾಸ್ತ್ರದಿಂದ ಮಂಗಳಮುಖಿ ತನುಶ್ರೀ ಕತ್ತು ಕೊಯ್ದು ಕೊಲೆ ಮಾಡಿ ಪರಾರಿಯಾಗಿದ್ದರು. ಈ ಸಂಬಂಧ ನೀಡಲಾದ ದೂರಿನ ಮೇರೆಗೆ ಪ್ರಕರಣ ದಾಖಲಿಸಿ ಕಾರ್ಯಾಚರಣೆ ಕೈಗೊಂಡು ಮೂವರನ್ನು ಬಂಧಿಸಲಾಗಿದೆ.

ಪ್ರಕರಣದ ವಿವರ: ಕೋಟ್ಯಾಧಿಪತಿ ಮಂಗಳಮುಖಿ ತನುಶ್ರೀ ಹತ್ಯೆ ಪ್ರಕರಣಕ್ಕೆ ರೋಚಕ ತಿರುವು

ಮೂವರು ಆರೋಪಿಗಳ ಪೈಕಿ ಜಗದೀಶ್‌ ವಿವಾಹಿತನಾಗಿದ್ದು, ಒಂದು ಮಗು ಇದೆ. ಕ್ಯಾಬ್‌ ಚಾಲಕನಾಗಿದ್ದ ಈತನಿಗೆ ಒಂದು ವರ್ಷದ ಹಿಂದೆ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದ ತನುಶ್ರೀ ಪರಿಚಯವಾಗಿತ್ತು. ಸಾಮಾಜಿಕ ಕಾರ್ಯಗಳ ಸಂಬಂಧ ಇಬ್ಬರು ಒಟ್ಟಿಗೆ ಬೇರೆ ಊರುಗಳಿಗೆ ಪ್ರಯಾಣಿಸುತ್ತಿದ್ದರು. ಇಬ್ಬರ ನಡುವೆ ಆತ್ಮೀಯತೆ ಬೆಳೆದಿದ್ದರಿಂದ ಜಗದೀಶ್‌ ಹೆಚ್ಚು ತನುಶ್ರೀ ಮನೆಯಲ್ಲೇ ಇರುತ್ತಿದ್ದ. ಈ ವೇಳೆ ಜಗದೀಶ್‌ ಮೇಲೆ ಹೆಚ್ಚು ವ್ಯಾಮೋಹ ಬೆಳೆಸಿಕೊಂಡಿದ್ದ ತನುಶ್ರೀ, ಮದುವೆಯಾಗುವಂತೆ ಆಗಾಗ ಒತ್ತಾಯಿಸಿದ್ದಳು. ಇದಕ್ಕೆ ಜಗದೀಶ್‌ ನಿರಾಕರಿಸಿದ್ದ. ಹೀಗೆ ತನುಶ್ರೀ ಮದುವೆಯಾಗುವಂತೆ ಬೆದರಿಕೆ ಹಾಕುತ್ತಿದ್ದರಿಂದ ಕೋಪಗೊಂಡ ಜಗದೀಶ್‌, ಸ್ನೇಹಿತರಾದ ಪ್ರಭಾಕರ್‌ ಮತ್ತು ಸುಶಾಂತ್‌ ಸಾಥ್‌ ಪಡೆದು ತನುಶ್ರೀ ಕೊಲೆಗೆ ಸಂಚು ರೂಪಿಸಿದ್ದನು.

ಪಾರ್ಟಿ ಮಾಡಿ ಬಳಿಕ ಕೊಲೆ:

ಏ.17ರ ರಾತ್ರಿ ಜಗದೀಶ್‌ ತನ್ನಿಬ್ಬರು ಸ್ನೇಹಿತರನ್ನು ತನುಶ್ರೀ ಮನೆಗೆ ಕರೆಸಿಕೊಂಡಿದ್ದ. ಬಳಿಕ ನಾಲ್ವರು ಕಂಠಪೂರ್ತಿ ಮದ್ಯ ಸೇವಿಸಿ ಪಾರ್ಟಿ ಮಾಡಿದ್ದಾರೆ. ಬಳಿಕ ಮೂವರು ಸೇರಿ ತನುಶ್ರೀ ಕತ್ತು ಕೊಯ್ದು, ದೇಹದ ಇತರೆ ಭಾಗಗಳಿಗೆ ಇರಿದು ಕೊಲೆ ಮಾಡಿ ಮನೆಗೆ ಬೀಗ ಹಾಕಿಕೊಂಡು ಪರಾರಿಯಾಗಿದ್ದರು ಎಂದು ತನಿಖೆಯಿಂದ ತಿಳಿದು ಬಂದಿದೆ.

ಇದನ್ನೂ ಓದಿ: ಕೋಟ್ಯಧೀಶೆ ಮಂಗಳಮುಖಿ ಹತ್ಯೆ; ಪತಿ ಮೇಲೆ ಅನುಮಾನ!

ತಿರುಪತಿಯಲ್ಲಿ ಮುಡಿ:

ತನುಶ್ರೀ ಕೊಲೆ ಬಳಿಕ ಮೂವರು ಆರೋಪಿಗಳು ತಿರುಪತಿಗೆ ಹೋಗಿ ತಿರುಪತಿ ತಿಮ್ಮಪ್ಪನ ದರ್ಶನ ಮಾಡಿ ಮುಡಿಕೊಟ್ಟಿದ್ದರು. ಬಳಿಕ ಶಿಡ್ಲಘಟ್ಟದ ಪರಿಚಿತರ ಮನೆಯಲ್ಲಿ ತಲೆಮರೆಸಿಕೊಂಡಿದ್ದರು. ತನುಶ್ರೀ ಕೊಲೆ ಪ್ರಕರಣ ಬೆಳಕಿಗೆ ಬಂದ ನಂತರ ಪೊಲೀಸರು ಏಕಾಏಕಿ ನಾಪತ್ತೆಯಾಗಿದ್ದ ಜಗದೀಶ್‌ ಬಗ್ಗೆ ಅನುಮಾನಗೊಂಡು ಹುಡುಕಾಟ ನಡೆಸುತ್ತಿದ್ದರು. ಶಿಡ್ಲಘಟ್ಟದಲ್ಲಿ ಆರೋಪಿಗಳು ತಲೆಮರೆಸಿಕೊಂಡಿರುವ ಬಗ್ಗೆ ಮಾಹಿತಿ ಸಂಗ್ರಹಿಸಿದ ಪೊಲೀಸರು ಬಳಿಕ ಅಲ್ಲಿಗೆ ತೆರಳಿ ಮೂವರನ್ನೂ ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರಿಯಲ್ ಎಸ್ಟೇಟ್ ಉದ್ಯಮಿಯ ಬರ್ಬರ ಹತ್ಯೆ: ಮಗ ಓದುತ್ತಿದ್ದ ಶಾಲೆಯ ಮುಂದೆಯೇ ಕೃತ್ಯ
ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?