
ರಾಮನಗರ(ಡಿ.10): ರಸ್ತೆಗೆ ಕುರಿಗಳು ಅಡ್ಡಬಂದ ಹಿನ್ನೆಲೆಯಲ್ಲಿ ಹಾರ್ನ್ ಮಾಡಿದಕ್ಕೆ ಕೆಎಸ್ಆರ್ಟಿಸಿ ಬಸ್ ಚಾಲಕರೊಬ್ಬರಿಗೆ ಗ್ರಾಮಸ್ಥರು ಥಳಿಸಿರುವ ಆಘಾತಕಾರಿ ಘಟನೆ ರಾಮನಗರ ತಾಲ್ಲೂಕಿನ ಲಕ್ಷ್ಮೀಪುರ ಗ್ರಾಮದಲ್ಲಿ ಇಂದು ಸಂಜೆ ನಡೆದಿದೆ.
ಇಂದು ಸಂಜೆ ರಾಮನಗರದಿಂದ ಮಾಗಡಿ ಕಡೆಗೆ ಹೊರಟಿದ್ದ ಮಾಗಡಿ ಡಿಪೋಗೆ ಸೇರಿದ ಕೆಎಸ್ಆರ್ಟಿಸಿ ಬಸ್, ಲಕ್ಷ್ಮೀಪುರ ಗ್ರಾಮದ ಬಳಿ ಸಾಗುತ್ತಿದ್ದಾಗ ರಸ್ತೆಯ ಮಧ್ಯೆ ಕುರಿಗಳನ್ನು ಅಟ್ಟಿಕೊಂಡು ಹೋಗುತ್ತಿದ್ದ ರೈತ. ಈ ವೇಳೆ ಬಸ್ ಮುಂದೆ ಸಾಗಲು ದಾರಿ ಮಾಡಿಕೊಡುವಂತೆ ಡ್ರೈವರ್ ಮಂಜುನಾಥ ಹಾರ್ನ್ ಮಾಡಿದ್ದಾನೆ. ಸಾಕಷ್ಟು ಬಾರಿ ಹಾರ್ನ್ ಮಾಡಿದ್ದಾರೆ. ಆದರೆ ಕುರಿಗಳ ಮಾಲೀಕ ಹಾರ್ನ್ಗೆ ಪ್ರತಿಕ್ರಿಯಿಸದೆ ರಸ್ತೆ ಬಿಡಲು ನಿರಾಕರಿಸಿದ್ದಾನೆ. ಪದೇ ಪದೇ ಹಾರ್ನ್ ಮಾಡಿದ್ದಕ್ಕೆ ಕೋಪಗೊಂಡ ಕುರಿಗಳ ಮಾಲೀಕ, ಇತರ ಗ್ರಾಮಸ್ಥರು ಸೇರಿ ಚಾಲಕ ಮಂಜುನಾಥ್ ನನ್ನು ಬಸ್ನಿಂದ ಹೊರಗೆಳೆದು ಗುಂಪು ಸೇರಿ ಹಲ್ಲೆ ನಡೆಸಿದ್ದಾರೆ. ಈ ಘಟನೆ ವಿಡಿಯೋದಲ್ಲಿ ಕೂಡ ದಾಖಲಾಗಿದೆ.
ಗ್ರಾಮಸ್ಥರ ಥಳಿತದಿಂದ ಗಾಯಗೊಂಡ ಚಾಲಕ ಮಂಜುನಾಥ್ ಅವರು, ಕೂಡಲೇ ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಗೆ ತೆರಳಿ ಘಟನೆ ಕುರಿತು ದೂರು ದಾಖಲಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಹಲ್ಲೆ ನಡೆಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ