
ಮೂಲ್ಕಿ(ಜೂ.07): ಕೊರೋನಾ ಲಾಕ್ಡೌನ್ನಿಂದ ಕೆಲಸವಿಲ್ಲದೆ ನೊಂದ ಕೂಲಿ ಕಾರ್ಮಿಕರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಕಿನ್ನಿಗೋಳಿ ಸಮೀಪದ ಮೆನ್ನಬೆಟ್ಟು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿದೆ.
ಇಲ್ಲಿನ ಜಲ್ಲಿಗುಡ್ಡೆ ನಿವಾಸಿ ಮೋನಪ್ಪ ದೇವಾಡಿಗ (64) ಕಿನ್ನಿಗೋಳಿ ಪರಿಸರದಲ್ಲಿ ಕೂಲಿ ಮಾಡಿಕೊಂಡು ಜೀವನ ಸಾಗಿಸುತ್ತಿದ್ದು ಲಾಕ್ಡೌನ್ ಬಳಿಕ ಕೆಲಸವಿಲ್ಲದೆ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು. ಶನಿವಾರ ರಾತ್ರಿ 10 ಗಂಟೆ ಬಳಿಕ ಮನೆಯ ಸಮೀಪದ ತೋಟದ ಮಾವಿನಮರಕ್ಕೆ ಪ್ಲಾಸ್ಟಿಕ್ ವಯರ್ನಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಗಂಗಾವತಿ: 2ನೇ ಬಾರಿ ಕೊರೋನಾ, ಮಹಿಳೆ ಆತ್ಮಹತ್ಯೆ
ರಾತ್ರಿಯಿಂದ ಬೆಳಗ್ಗೆವರೆಗೆ ಮನೆಯಲ್ಲಿ ಮೋನಪ್ಪ ದೇವಾಡಿಗ ನಾಪತ್ತೆಯಾಗಿರುವುದರಿಂದ ಆತಂಕಗೊಂಡು ಮನೆಯವರು ಹುಡುಕಾಟ ನಡೆಸಿದಾಗ ತೋಟದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದು ಭಾನುವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ಮೂಲ್ಕಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ