
ರಾಯಚೂರು (ಮಾ.22): ಕುಡಿಯುವ ನೀರಿನ ವಿಚಾರಕ್ಕಾಗಿ ಲೇಡೀಸ್ ಹಾಸ್ಟೆಲ್ ನಲ್ಲಿ ರ್ಯಾಗಿಂಗ್ ನಡೆದಿದ್ದು, ಜೂನಿಯರ್ ವಿದ್ಯಾರ್ಥಿನಿ ಒಬ್ಬಳನ್ನು ಕೂಡಿ ಹಾಕಿ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ.
ರಾಯಚೂರು ಜಿಲ್ಲೆ ಮಾನ್ವಿ ಸರಕಾರಿ ಮೆಟ್ರಿಕ್ ನಂತರ ಬಾಲಕಿಯರ ಹಾಸ್ಟೆಲ್ ನಲ್ಲಿ ಘಟನೆ ನಡೆದಿದ್ದು ಬಿ.ಎಡ್ ವಿಭಾಗದ ನಾಲ್ವರು ಸೀನಿಯರರ್ಸ್ ವಿರುದ್ಧ ಹಲ್ಲೆ ಆರೋಪ ಕೇಳಿ ಬಂದಿದೆ.
ಸುದೀರ್ಘ ವಿಚಾರಣೆ ಬಳಿಕ 5,8,9, ನೇ ತರಗತಿಗಳ ಬೋರ್ಡ್ ಎಕ್ಸಾಂ ನಡೆಸಲು ಹೈಕೋರ್ಟ್ ಒಪ್ಪಿಗೆ
ಪಿಯುಸಿ ವಿದ್ಯಾರ್ಥಿನಿ ಮಂಜುಳಾ ಎಂಬಾಕೆಯನ್ನು ರೂಮ್ ನಲ್ಲಿ ಕೂಡಿ ಹಾಕಿ ಹಲ್ಲೆ ಮಾಡಲಾಗಿದ್ದು, ಕುಡಿಯುವ ನೀರು ತುಂಬಿದ್ದ ಬಕೆಟ್ ನಲ್ಲಿ ಸೀನಿಯರರ್ಸ್ ಜಗ್ ಹಾಕಿದ್ದರು. ಜಗ್ ಹಾಕಬೇಡಿ ಎಂದು ಸೀನಿಯರರ್ಸ್ ಬಳಿ ಹೇಳಿದ್ದ ಮಂಜುಳಾ. ಇದರಿಂದ ಸೀನಿಯರ್ನನ್ನೇ ಪ್ರಶ್ನೆ ಮಾಡುತ್ತಿದ್ದೀಯಾ ಎಂದು ಮಂಜುಳಾ ವಿರುದ್ಧ ಐದು ಜನರಿಂದಲೇ ಹಲ್ಲೆ ನಡೆದಿದೆ.
ಕೆಪಿಎಸ್ಸಿಯಿಂದ ಮುಂದುವರೆದ ವಿಳಂಬ ನೀತಿ, ಪರೀಕ್ಷೆ ಆಗಿ 2 ತಿಂಗಳಾದರೂ ಬಾರದ ಫಲಿತಾಂಶ!
ಶರಣಮ್ಮ, ದೇವಮ್ಮ, ಮಂಜುಳಾ, ಶಿಲ್ಪಾ ತಂಡದಿಂದ ವಿದ್ಯಾರ್ಥಿನಿ ಮಂಜುಳಾ ಮೇಲೆ ಹಲ್ಲೆ ನಡೆದಿದ್ದು, ಸದ್ಯ ಗಾಯಾಳು ವಿದ್ಯಾರ್ಥಿನಿಯನ್ನು ಮಾನ್ವಿ ಸರಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮಾನ್ವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪ್ರಕರಣ ದಾಖಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ