
ಬೆಳಗಾವಿ(ಸೆ.17): ಬೆಂಗಳೂರು ಗೋವಿಂದಪುರ ಪೊಲೀಸ್ ಠಾಣೆಯಲ್ಲಿ ಪೇದೆಯಾಗಿರುವ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಮುಗಳಖೋಡ ಗ್ರಾಮದ ಆನಂದ ಪಾಟೀಲ ವಿರುದ್ಧ ನಂಬಿಕೆ ದ್ರೋಹ ಹಾಗೂ ವಂಚನೆ ಮಾಡಿದ ಆರೋಪದ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಕಾರ್ಯದ ನಿಮಿತ್ತವಾಗಿ ಮಹಿಳಾ ಪೇದೆಯೊಂದಿಗೆ ಕರೆ ಮಾಡಿ ಮಾತನಾಡಿದ್ದಾನೆ. ನಂತರದ ದಿನಗಳಲ್ಲಿ ಇವರಿಬ್ಬರ ನಡುವೆ ವಾಟ್ಸಾಪ್ ಮೆಸೇಜ್, ವಿಡಿಯೋ ಕಾಲ್ ಮೂಲಕ ಸಲುಗೆ ಆರಂಭವಾಗಿದೆ. ಬಳಿಕ ಆನಂದ ಪಾಟೀಲ ಮಹಿಳಾ ಪೇದೆಯೊಂದಿಗೆ ಮಾತನಾಡಿ ನಿನ್ನನ್ನು ಪ್ರೀತಿಸುವುದಾಗಿ ತಿಳಿಸಿದ್ದಾನೆ.
ತೆಲಂಗಾಣದಲ್ಲಿ ಭೀಕರ ಅಪಘಾತ: ತಿರುಪತಿ ದರ್ಶನ ಪಡೆದು ಬರುತ್ತಿದ್ದ ಐವರು ಕನ್ನಡಿಗ ಭಕ್ತರು ಸಾವು
ಪೇದೆಯ ಬಣ್ಣದ ಮಾತಿಗೆ ಮರುಳಾದ ಮಹಿಳಾ ಪೇದೆ ಈತನೊಂದಿಗೆ ಎಲ್ಲೆಂದರಲ್ಲಿ ಸುತ್ತಾಡಿದ್ದಾಳೆ. ಮದುವೆಯಾಗುವುದಾಗಿ ದೈಹಿಕ ಸಂಪರ್ಕವನ್ನು ಬೆಳೆಸಿದ್ದಾನೆ. ನಂತರ ಮಹಿಳಾ ಪೇದೆ ಮದುವೆ ವಿಷಯವನ್ನು ಪ್ರಸ್ತಾಪಿಸಿದಾಗ ನಾನು ಕೇವಲ ಸ್ನೇಹಿತ ಎಂದು ಭಾವಿಸಿದ್ದೇನೆ. ಪ್ರೀತಿಸುವುದಾಗಿ ಹೇಳಿಲ್ಲ ಎಂದು ಫೊನ್ನಲ್ಲಿ ತಿಳಿಸಿದ್ದಾನೆ. ಇದರಿಂದಾಗಿ ಮನನೊಂದ ಮಹಿಳಾ ಪೇದೆ ಪೊಲೀಸ್ ಪೇದೆ ಆನಂದ ಪಾಟೀಲ ವಿರುದ್ಧ ಪ್ರಕರಣ ಜೀವನ ಬಿಮಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾಳೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ