ಲಾಡ್ಜ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯ ಡೆತ್‌ ನೋಟ್‌ನಿಂದ ಕಾಣೆಯಾಗಿದ್ದ ಮಹಿಳಾ ಪೇದೆ ಶವ ಪತ್ತೆ

Published : Sep 17, 2022, 10:38 AM IST
ಲಾಡ್ಜ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯ ಡೆತ್‌ ನೋಟ್‌ನಿಂದ ಕಾಣೆಯಾಗಿದ್ದ ಮಹಿಳಾ ಪೇದೆ ಶವ ಪತ್ತೆ

ಸಾರಾಂಶ

ಶಿವಮೊಗ್ಗ ಲಾಡ್ಜ್‌ವೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ವ್ಯಕ್ತಿ ಡೆತ್‌  ನೋಟ್‌ನಿಂದ ಕಾಣೆಯಾಗಿದ್ದ ಮಹಿಳಾ ಪೊಲೀಸ್ ಕಾನ್ಸ್‌ಟೇಬಲ್ ಶವ ಪತ್ತೆಯಾಗಿದೆ. ಏನಿದು ಪ್ರಕರಣ? ಈ ಕೆಳಗಿನಂತಿದೆ ನೋಡಿ ಸಂಪೂರ್ಣ ಮಾಹಿತಿ.  

ಹಾಸನ/ತುಮಕೂರು/ಶಿವಮೊಗ್ಗ. (ಸೆಪ್ಟೆಂಬರ್.17): ಹುಳಿಯಾರು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಹಿಳಾ ಪೊಲೀಸ್ ಕಾನ್ಸ್‌ಟೇಬಲ್ ಸುಧಾ ಅವರ ಮೃತ ದೇಹ ಪತ್ತೆಯಾಗಿದೆ.

ಹಾಸನದ ಅರಸೀಕೆರೆ-ತಿಪಟೂರು ರಾಷ್ಟ್ರೀಯ ಹೆದ್ದಾರಿ 206ರ ಮೈಲನಹಳ್ಳಿ ಗ್ರಾಮದ ಬಳಿ ಸುಧಾ ಶವ ಸಿಕ್ಕಿದೆ. ಇನ್ನು ಈ ಪ್ರಕರಣಕ್ಕೂ ಹಾಗೂ ಶಿವಮೊಗ್ಗದ ಲಾಡ್ಜ್‌ವೊಂದರಲ್ಲಿ ನಿನ್ನೆ(ಸೆ.16) ಮಂಜುನಾಥ್ ಎನ್ನುವ ಆತ್ಮಹತ್ಯೆ ಕೇಸ್‌ಗೂ ಲಿಂಕ್ ಇದೆ. 

ಹೌದು...ಶಿವಮೊಗ್ಗದ ಲಾಡ್ಜ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಮಂಜುನಾಥ್ ಎನ್ನುವಾತ ಮೃತ ಮಹಿಳಾ ಪೇದೆ ಸುಧಾಳ ಚಿಕ್ಕಪ್ಪನ ಮಗ.  ಹಣಕಾಸು ವ್ಯವಹಾರದ ವಿಚಾರವಾಗಿ ಮಂಜುನಾಥ್, ಸುಧಾರನ್ನು ಕಾರಿನಲ್ಲಿ ಕರೆದುಕೊಂಡು ಹೋಗಿ ಕೊಲೆ ಮಾಡಿದ್ದಾನೆ. ಬಳಿಕ ಆತ ಶಿವಮೊಗ್ಗದ ಲಾಡ್ಜ್‌ವೊಂದರಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಕರ್ತವ್ಯನಿರತ ಮಹಿಳಾ ಪೊಲೀಸ್ ಪೇದೆ ನಾಪತ್ತೆ,ಹುಡುಕಿಕೊಡಿ ಎಂಬ ಪೋಸ್ಟ್ ವೈರಲ್

ಸಹೋದರಿಯನ್ನು ಕೊಲೆಮಾಡಿರುವ ಬಗ್ಗೆ ಮಂಜುನಾಥ ಸ್ವತಃ ತಾನೇ ಡೆತ್ ನೋಟ್ ನಲ್ಲಿ ಬರೆದಿಟ್ಟಿದ್ದಾನೆ.  ಡೆತ್ ನೋಟ್ ಮಾಹಿತಿ ಆಧರಿಸಿ ಪೊಲೀಸರು ಸುಧಾರ ಶವ ಪತ್ತೆ ಮಾಡಿದ್ದಾರೆ.  ಸುಧಾ ಶವ ಸಿಕ್ಕ ಸ್ಥಳಕ್ಕೆ ಅರಸೀಕೆರೆ ಗ್ರಾಮಾಂತರ ಹಾಗೂ ತುಮಕೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಹುಳಿಯಾರು ಪೊಲೀಸ್ ಠಾಣೆಯಲ್ಲಿ ಕೊಲೆ ಕೇಸ್ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಮಿಸ್ಸಿಂಗ್ ಕೇಸ್ ದಾಖಲಾಗಿತ್ತು
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರ್ ಪೊಲೀಸ್ ಠಾಣೆಯ ಪೊಲೀಸ್‌ ಕಾನ್ಸ್‌ಟೇಬಲ್‌ ಆಗಿ ಕರ್ತವ್ಯನಿರ್ವಹಿಸುತ್ತಿದ್ದ. ಸುಧಾ (39) ನಾಪತ್ತೆಯಾಗಿದ್ದರು.

ಒಂದೂವರೆ ವರ್ಷದಿಂದ ಹುಳಿಯಾರು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸುಧಾ ಸೆಪ್ಟೆಂವರ್ 13ರಂದು  ಕರ್ತವ್ಯಕ್ಕೆ  ತೆರಳಿದ್ದರು. ಆದ್ರೆ, ಕರ್ತವ್ಯಕ್ಕೆ ಹೋದವರು ಇದುವರೆಗೂ ವಾಪಸ್ ಬರದೇ ನಾಪತ್ತೆಯಾಗಿದ್ದರು. 2 ವರ್ಷದ ಹಿಂದೆ ಸುಧಾ ಅವರ ಪತಿ ಸಾವನ್ನಪ್ಪಿದ್ದು, ಅವರಿಗೆ 14 ವರ್ಷದ ಗಂಡು ಮಗು ಹಾಗೂ 10 ವರ್ಷದ ಹೆಣ್ಣು ಮಗು ಇದೆ.

ಸುಧಾ ಅವರ ಮೊಬೈಲ್ ಸ್ವಿಚ್‌ ಆಫ್ ಆಗಿದೆ.ಈ ಹಿನ್ನೆಲೆಯಲ್ಲಿ ಸುಧಾ ತಾಯಿ ದ್ರಾಕ್ಷಾಯಣಮ್ಮ ಅವರು ಹುಳಿಯಾರು ಪೊಲೀಸ್ ಠಾಣೆಯಲ್ಲಿ ಮಿಸ್ಸಿಂಗ್ ದೂರು ನೀಡಿದ್ದರು. ಇದರ ಆಧಾರ ಮೇಲೆ ಪೇದೆ ಸುಧಾರಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದರು.  ಮತ್ತೊಂದೆಡೆ ಪೊಲೀಸ್ ಕಾನ್ಸ್‌ಟೇಬಲ್ ಕಾಣೆಯಾಗಿದ್ದಾರೆ ಹುಡುಕಿಕೊಡಿ ಎಂಬ ಪೋಸ್ಟ್ ವೈರಲ್ ಆಗಿತ್ತು.

ಆದ್ರೆ, ಇದೀಗ ಮಹಿಳಾ ಪೇದೆ ಸುಧಾಳನ್ನ ಸ್ವತಃ ಸಹೋದರನೇ ಕೊಲೆ ಮಾಡಿ ತಾನು ಆತ್ಮಹತ್ಯೆ ಮಾಡಿಕೊಂಡಿರುವುದು ದುರಂತ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬೆಂಗಳೂರು: ಕ್ಯಾಬ್ ಚಾಲಕನ ಮೇಲೆ ಯುವತಿ ರೇಪ್ ಆರೋಪ, ತನಿಖೆ ವೇಳೆ ಬಿಗ್ ಟ್ವಿಸ್ಟ್!
ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?