
ಚಾಮರಾಜನಗರ(ಜು. 06) ಜಮೀನು ವಿವಾದ ವಿಕೋಪಕ್ಕೆ ತಿರುಗಿದ್ದು ಒಂದು ಕೊಲೆಯಾಗಿದೆ. ಇನ್ನೊಬ್ಬನ ಮೇಲೆ ಮಾರಣಾಂತಿಕ ಹಲ್ಲೆಯಾಗಿದೆ.
ಜಿಪಂ ಉಪಾಧ್ಯಕ್ಷೆ ಶಶಿಕಲಾ ಅವರ ತಂದೆ ಗುರುಸ್ವಾಮಿ(65) ಕೊಲೆಯಾಗಿದ್ದಾರೆ. ಗಾಯಗೊಂಡಿರುವ ಗುರುಸ್ವಾಮಿ ಮಗ ಮಂಜು ಅವರನ್ನು ಮೈಸೂರು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸೆಲ್ಫಿ ಗೀಳಿಗೆ ಬಲಿಯಾದ ಸಹೋದರಿಯರು
ಚಾಮರಾಜನಗರ ತಾಲೂಕು ಕೊತ್ತಲವಾಡಿ ಗ್ರಾಮದಲ್ಲಿ ಘಟನೆ ನಡೆದಿದೆ. ಪಕ್ಕದ ಜಮೀನು ಮಾಲೀಕ ಮಲೆಮಾದಪ್ಪ ಕುಟುಂಬದವರು ಮಚ್ಚಿನಿಂದ ಹಲ್ಲೆ ನಡೆಸಿದ್ದಾರೆ. ಆರೋಪಿಗಳಾದ ಮಲೆಮಾದಪ್ಪ, ಪತ್ನಿ ಮಂಗಳಮ್ಮ, ಮಗ ಮಲ್ಲಿಕಾರ್ಜುನ ಪೊಲೀಸರಿಗೆ ಶರಣಾಗಿದ್ದಾರೆ. ಚಾಮರಾಜನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ