ತೀಟೆ ತಿರಿಸಿಕೊಂಡು ವರಸೆ ಬದಲಿಸಿದ: ವಿದ್ಯಾರ್ಥಿನಿ ಜತೆ ಲೆಕ್ಚರರ್​ ಪುತ್ರನ ಕಾಮಪುರಾಣ

Published : Feb 03, 2021, 07:31 PM ISTUpdated : Feb 03, 2021, 07:37 PM IST
ತೀಟೆ ತಿರಿಸಿಕೊಂಡು ವರಸೆ ಬದಲಿಸಿದ: ವಿದ್ಯಾರ್ಥಿನಿ ಜತೆ ಲೆಕ್ಚರರ್​ ಪುತ್ರನ ಕಾಮಪುರಾಣ

ಸಾರಾಂಶ

ತಾನು ಓದುತ್ತಿದ್ದ ಕಾಲೇಜಿನ ಲೆಕ್ಚರರ್​ರೊಬ್ಬರ ಮಗನ ಪ್ರೀತಿಯ ಬಲೆಗೆ ಬಿದ್ದ ವಿದ್ಯಾರ್ಥಿನಿ, ಇದೀಗ ನ್ಯಾಯಕ್ಕಾಗಿ ಪೊಲೀಸ್​ ಠಾಣೆ ಮೆಟ್ಟಿಲೇರಿದ್ದಾಳೆ.

ಬೆಂಗಳೂರು, (ಫೆ.03): ಇದು ಕಾಲೇಜಿನ ಲೆಕ್ಚರರ್​ರೊಬ್ಬರ ಮಗನ ಕಾಮಪುರಾಣ ಸುದ್ದಿ. ತನ್ನ ಲೆಕ್ಚರರ್​ನನ್ನು ನೋಡೋಕೆ ಮನೆ ಬಂದ ವಿದ್ಯಾರ್ಥಿಯನ್ನೇ ಮಗ ಕ್ಯಾಚ್ ಹಾಕಿದ್ದಾನೆ.

ಅಲ್ಲದೇ ಬಣ್ಣ-ಬಣ್ಣದ ಮಾತುಗಳಿಂದ ತನ್ನ ತಾಯಿಯ ವಿದ್ಯಾರ್ಥಿಯನ್ನು ಪ್ರೇಮಪಾಶಕ್ಕೆ ಬೀಳಿಸಿಕೊಂಡು ಮಾಡಬಾರದನೆಲ್ಲ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ.

ಹೌದು...ಬೆಂಗಳೂರಿನ ಕಾಲೇಜ್‌ವೊಂದರ ಲೆಕ್ಚರರ್​ರೊಬ್ಬರ ಮಗ ಚಂದನ್‌ ಎನ್ನುವಾತ ಮದ್ವೆಯಾಗುವುದಾಗಿ ನಂಬಿಸಿ ತನ್ನ ಕಾಮದ ತೀಟೆ ತೀರಿಸಿಕೊಂಡು ಇದೀಗ ಹೊಸ ವರಸೆ ಬದಲಿಸಿದ್ದಾನೆ.

ಗಂಡ ಇದ್ರೂ ಮತ್ತೊಬ್ಬನ ಸಂಗ: ರೆಡ್‌ಹ್ಯಾಂಡ್‌ ಆಗಿ ಸಿಕ್ಕಿಬಿದ್ದ ಪತ್ನಿ-ಪ್ರಿಯಕರನ ಲೈಫೇ ಕ್ಲೋಸ್‌..! 

ಈ ಹಿನ್ನೆಲೆಯಲ್ಲಿ ಯುವತಿ  ನ್ಯಾಯಕ್ಕಾಗಿ ವಿದ್ಯಾರಣ್ಯಪುರ ಪೊಲೀಸ್​ ಠಾಣೆಗೆ ದೂರು ನೀಡಿದ್ದು, ಇದರ ಮೇರೆಗೆ ಲೆಕ್ಟರರ್ ಪತ್ರ ಚಂದನ್ ಎನ್ನುವಾತನನ್ನು ಪೊಲೀಸ್ ಬಂಧಿಸಿ ವಿಚಾರಣೆ ನಡೆಸಿದ್ದಾರೆ.

ವಿದ್ಯಾರ್ಥಿನಿಯ ಆರೋಪ
ಚಂದನ್​ ತಾಯಿ ಬೆಂಗಳೂರಿನ ಕಾಲೇಜೊಂದರ ಲೆಕ್ಚರರ್. ಆ ಯುವತಿಯೂ ಅದೇ ಕಾಲೇಜಿನ ವಿದ್ಯಾರ್ಥಿನಿ. ಲೆಕ್ಚರರ್​ನನ್ನು ನೋಡೋಕೆ ಎಂದು ವಿದ್ಯಾರ್ಥಿನಿ ಮನೆಗೆ ಬಂದ ವೇಳೆ ಚಂದನ್​ ಪರಿಚಯವಾಗಿತ್ತು. 2018ರಲ್ಲಿ ಇವರಿಬ್ಬರ ನಡುವೆ ಸಲುಗೆ ಬೆಳೆದು ಪ್ರೀತಿಗೆ ತಿರುಗಿತ್ತು. 

ಬಳಿಕ ಸ್ನೇಹ ಪ್ರೇಮಕ್ಕೆ ತಿರುಗಿತ್ತು. ಅಲ್ಲದೇ  ಮದುವೆಯಾಗುವುದಾಗಿ ನಂಬಿಸಿದ್ದ ಚಂದನ್​, ಯುವತಿ ಜತೆ ಮೂವರು ವರ್ಷಗಳಿಂದ ಬಲವಂತವಾಗಿ ಲೈಂಗಿಕ ಸಂಪರ್ಕ ಹೊಂದಿದ್ದ. ಎರಡು ಬಾರಿ ಗರ್ಭಿಣಿಯಾದರೂ ಬಲವಂತವಾಗಿ ಅಬಾರ್ಷನ್​ ಮಾಡಿಸಿದ್ದಾನೆ. ಅಲ್ಲದೆ ಮದುವೆಗಾಗಿ 5-6ರಿಂದ ಲಕ್ಷ ಹಣವನ್ನೂ ಪಡೆದಿದ್ದ. ಇದೀಗ ಮದುವೆ ಆಗಲ್ಲ ಎಂದು ವಂಚಿಸಿದ್ದಾನೆ ಎಂದು ಸಂತ್ರಸ್ತೆ ಯುವತಿ ದೂರಿನಲ್ಲಿ ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರಿಯಲ್ ಎಸ್ಟೇಟ್ ಉದ್ಯಮಿಯ ಬರ್ಬರ ಹತ್ಯೆ: ಮಗ ಓದುತ್ತಿದ್ದ ಶಾಲೆಯ ಮುಂದೆಯೇ ಕೃತ್ಯ
ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?