
ಕಳೆದ ಕೆಲವು ದಿನಗಳಿಂದ ಜಮ್ಮು ಮತ್ತು ಕಾಶ್ಮೀರ ಉದ್ವಿಗ್ನ ಸ್ಥಿತಿ ತಲುಪಿದೆ. ಪ್ರತಿಬಾರಿಯೂ ಕಲ್ಲು ತೂರಾಟದಂಥ ಘಟನೆಗಳಿಂದ ಸುದ್ದಿ ಮಾಡುತ್ತಿದ್ದ ಜಮ್ಮು -ಕಾಶ್ಮೀರದಲ್ಲಿ ಇದೇ ಮೊದಲ ಬಾರಿಗೆ ಮುಸ್ಲಿಂ ವಿದ್ಯಾರ್ಥಿನಿಯರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಅದೂ ತಮ್ಮ ಹಕ್ಕಿಗಾಗಿ, ತಮ್ಮ ವಿರುದ್ಧ ನಡೆದಿರುವ ಅನ್ಯಾಯಕ್ಕಾಗಿ. ಅಷ್ಟಕ್ಕೂ ಇವರೆಲ್ಲರೂ ಪ್ರತಿಭಟನೆ ಮಾಡುತ್ತಿರುವುದು ಕಾಮುಕ ಶಿಕ್ಷಕನೊಬ್ಬನ ವಿರುದ್ಧ. ಪದವಿಪೂರ್ವ ಕಾಲೇಜಿನಲ್ಲಿನ ಶಿಕ್ಷಕನೊಬ್ಬ ಹೆಣ್ಣುಮಕ್ಕಳ ಮೇಲೆ ನಡೆಸುತ್ತಿರುವ ಲೈಂ*ಗಿಕ ದೌರ್ಜನ್ಯದ ವಿರುದ್ಧ ಈ ಹೆಣ್ಣುಮಕ್ಕಳು ದನಿ ಎತ್ತಿದ್ದಾರೆ. ಆತನಿಗೆ ಶಿಕ್ಷೆ ಕೊಡಿಸುವಂತೆ ಪಟ್ಟು ಹಿಡಿದಿದ್ದಾರೆ. ಇದರಿಂದ ಜಮ್ಮು ಕಾಶ್ಮೀರ ಉದ್ವಿಗ್ನವಾಗಿದೆ.
ಇಲ್ಲಿಯ ಸೋಪೋರ್ನ ಹೈಯರ್ ಸೆಕೆಂಡರಿ ಶಾಲೆಯ ವಿದ್ಯಾರ್ಥಿನಿಯರ ಮೇಲೆ ನಡೆದ ಲೈಂ*ಗಿಕ ಕಿರುಕುಳ ಪ್ರಕರಣ ಇದಾಗಿದೆ. ಇದು ಇಷ್ಟು ತೀವ್ರ ಸ್ವರೂಪ ಪಡೆದುಕೊಳ್ಳಲು ಕಾರಣವೇನೆಂದರೆ, ವಿದ್ಯಾರ್ಥಿನಿಯರು ಈ ಬಗ್ಗೆ ಎಷ್ಟೇ ದೂರಿದರೂ ಪ್ರಯೋಜನ ಆಗಿರಲಿಲ್ಲ. ಕೊನೆಗೆ ಒಬ್ಬಳೇ ಒಬ್ಬಳು ವಿದ್ಯಾರ್ಥಿನಿಯ ಮೇಲೆ ಈ ರೀತಿ ಆಗಿದೆ ಎಂದು ಹೇಳಿ ನುಣುಚಿಕೊಳ್ಳುವ ಪ್ರಯತ್ನ ಮಾಡಲಾಯಿತು. ಆದರೆ ಯಾವಾಗ ಕಾಲೇಜಿನ ಎಲ್ಲಾ ವಿದ್ಯಾರ್ಥಿನಿಯರು ಬೀದಿಗಿಳಿದು ಪ್ರತಿಭಟನೆ ಮಾಡಿದರೋ ಆಗ ಪೊಲೀಸರೇ ಅವರಿಗೆ ತಲೆಬಾಗಬೇಕಾಯ್ತು.
ಸದ್ಯ ಕಾಮುಕ ಶಿಕ್ಷಕನನ್ನು ಅಮಾನತು ಮಾಡಲಾಗಿದೆ. ಕೆಲವು ದಿನಗಳ ಮಟ್ಟಿಗೆ ಈ ಕಾಲೇಜನ್ನು ಮುಚ್ಚಲಾಗಿದೆ. ಘಟನೆಯಲ್ಲಿ ಭಾಗಿಯಾಗಿರುವ ಉಪನ್ಯಾಸಕರ ವಿರುದ್ಧ ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ ಎಂದು ಹೆಚ್ಚುವರಿ ಉಪ ಆಯುಕ್ತ (ಎಡಿಸಿ) ಹೇಳಿದ್ದಾರೆ. ಕಾಶ್ಮೀರದ ಶಾಲಾ ಶಿಕ್ಷಣ ನಿರ್ದೇಶನಾಲಯ (ಡಿಎಸ್ಇಕೆ) ಜಿಎಚ್ಎಸ್ಎಸ್ ಸೋಪೋರ್ನಲ್ಲಿ ಉರ್ದುವಿನ ಹಿರಿಯ ಉಪನ್ಯಾಸಕ ಗುಲಾಮ್ ಹಸನ್ ಮಿರ್ ಅವರನ್ನು ಅಮಾನತುಗೊಳಿಸಲಾಗಿದೆ ಎಂದಿದ್ದಾರೆ.
ಈ ಬಗ್ಗೆ ವಿದ್ಯಾರ್ಥಿನಿಯರು ನ್ಯಾಯಕ್ಕಾಗಿ ಪಟ್ಟು ಹಿಡಿದ ಕಾರಣ, ಪೊಲೀಸರು ಜಂಟಿ ನಿರ್ದೇಶಕರು (ಉತ್ತರ ಕಾಶ್ಮೀರ) ಅವರನ್ನು ತನಿಖಾ ಅಧಿಕಾರಿಯಾಗಿ ನೇಮಿಸಿದ್ದು, 15 ದಿನಗಳಲ್ಲಿ ವರದಿ ನೀಡುವಂತೆ ತಿಳಿಸಿದ್ದಾರೆ. ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸುತ್ತಿದ್ದಂತೆಯೇ ಅದು ಹಿಂಸಾಚಾರಕ್ಕೂ ತಿರುಗಿತು. ಕೆಲವರು ಇದನ್ನೇ ನೆಪ ಮಾಡಿಕೊಂಡು ಅಲ್ಲಿ ಅಶಾಂತಿ ಸೃಷ್ಟಿಸಲು ಮುಂದಾದರು. ಅವರ ವಿರುದ್ಧ ದೂರು ದಾಖಲು ಮಾಡಿಕೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ