
ಶಿವಮೊಗ್ಗ (ಮೇ. 04) ಕೊರೋನಾ ಲಾಕ್ ಡೌನ್ ನಡುವೆಯೂ ಇಂದಿನಿಂದ ಮದ್ಯ ಮಾರಾಟ ಆರಂಭವಾಗಿದ್ದು, ಪರಿಣಾಮವಾಗಿ ಮೊದಲ ಬಲಿಯಾಗಿದೆ. ಕುಡಿದು ಬೈಕ್ ಓಡಿಸುತ್ತಿದ್ದ ಯುವಕನೋರ್ವ ಬ್ಯಾಲೆನ್ಸ್ ತಪ್ಪಿ ಬಿದ್ದು ಮೃತಪಟ್ಟಿದ್ದಾರೆ.
ಮಲವಗೊಪ್ಪದಿಂದ ತೆರಳುತ್ತಿದ್ದ ಯುವಕನ ಬೈಕ್ ಸ್ಕಿಡ್ ಆಗಿದೆ. ಬಿದ್ದ ಯುವಕನ ತಲೆಗೆ ಪೆಟ್ಟಾಗಿದ್ದು ತೀವ್ರ ರಕ್ತಸ್ರಾವದಿಂದ ಮೃತಪಟ್ಟಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಪೋಲಿಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಒಳ್ಳೆಯದಲ್ಲ ಕುಡಿತ, ದುರಂತ ಕಾದಿದೆ ಖಚಿತ, ಯಾಕೆ?
ಲಾಕ್ ಡೌನ್ ಸಡಿಲಿಕೆ ಮಾಡಿದ್ದ ರಾಜ್ಯ ಸರ್ಕಾರ ಮದ್ಯ ಮಾರಾಟಕ್ಕೆ ಅವಕಾಶ ನೀಡಿದೆ. ಇಡೀ ರಾಜ್ಯದಲ್ಲಿ ಬೆಳಗ್ಗೆಯಿಂದ ಮದ್ಯಪ್ರಿಯರದ್ದೇ ಸುದ್ದಿ. ಸರತಿ ಸಾಲಿನಲ್ಲಿ ನಿಂತರು, ಎಣ್ಣೆ ಕುಡಿದು ತೂರಾಡಿದರು. ಮಣಿಪಾಲದಲ್ಲಿ ಎಣ್ಣೆ ಖರೀದಿಗೆ ಯುವತಿಯರ ದಂಡು ಹೀಗೆ ಸಾಳು ಸಾಲು ಸುದ್ದಿ.
ಇದೆಲ್ಲದರ ನಡುವೆ ಶಿವಮೊಗ್ಗದಲ್ಲಿ ಅಪಘಾತವೂ ಆಗಿದ್ದು ಕುಡಿದು ಬೈಕ್ ಚಾಲನೆ ಮಾಡಿದ ಪರಿಣಾಮ ಯುವಕ ಪ್ರಾಣ ಕಳೆದುಕೊಂಡಿದ್ದಾನೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ