
ಹೊನ್ನಾಳಿ(ಜೂ.09): ಕೋವಿಡ್-19 ಸಂಬಂಧ ಲಾಕ್ಡೌನ್ ಹಿನ್ನೆಲೆಯಲ್ಲಿ ಮದ್ಯ ಮಾರಾಟ ನಿಷೇಧಿಸಿದ್ದ ವೇಳೆ ತಾಲೂಕಿನ ಬೆನಕನಹಳ್ಳಿ ಸಮೀಪದ ಮದ್ಯದಂಗಡಿ ಬೀಗ ಒಡೆದು ಕಳವು ನಡೆಸಿದ್ದ 6 ಆರೋಪಿಗಳನ್ನು ಹೊನ್ನಾಳಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಸಿಪಿಐ ದೇವರಾಜ್ ತಿಳಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಎಸ್ಪಿ ಹನುಮಂತರಾಯ ಹಾಗೂ ಚನ್ನಗಿರಿ ವಲಯದ ಡಿವೈಎಸ್ಪಿ ಪ್ರಶಾಂತ್ ಮುನ್ನೋಳಿ ಅವರ ಮಾರ್ಗದರ್ಶನದಲ್ಲಿ ತನಿಖೆ ಕೈಗೊಂಡಿದ್ದ ಹೊನ್ನಾಳಿ ಪೊಲೀಸರ ತಂಡ, ಕುಳಗಟ್ಟೆ ಸಮೀಪ ಶುಕ್ರವಾರ 6 ಜನ ಆರೋಪಿಗಳನ್ನು ಬಂಧಿಸಿ ಹಾಗೂ 2 ಬೈಕ್ಗಳನ್ನು ವಶಕ್ಕೆ ಪಡೆದಿರುವುದಾಗಿ ಹೇಳಿದ್ದಾರೆ.
ಬಂಧಿತ ಆರೋಪಿಗಳು ಚನ್ನಗಿರಿ ತಾಲೂಕಿನ ನಿವಾಸಿಗಳು. ರಮೇಶ್, ಮರಿಯಪ್ಪ ಅಲಿಯಾಸ್ ಮಾರಿ, ಎಚ್.ಗೋಪಿ, ತಮ್ಮಯ್ಯ, ಶಶಿಕುಮಾರ್ ಹಾಗೂ ಒಬ್ಬ ಕಾನೂನು ಸಂಘರ್ಷಕ್ಕೊಳಗಾದ ಬಾಲಕ ಸೇರಿ ಒಟ್ಟು ಆರು ಜನ ಆರೋಪಿಗಳನ್ನು ಬಂಧಿಸಲಾಗಿದೆ. ಜೊತೆಗೆ 2 ಬೈಕ್ ಹಾಗೂ ಕೃತ್ಯಕ್ಕೆ ಬಳಸಿದ ಕಬ್ಬಿಣ ರಾಡ್, ಆ್ಯಕ್ಸೆಲ್ ಬ್ಲೇಡ್ ಹಾಗೂ 9 ಸಾವಿರ ರುಪಾಯಿ ನಗದು ವಶಕ್ಕೆ ಪಡೆಯಲಾಗಿದೆ. ಹೊಳೆಹೊನ್ನೂರು ಠಾಣಾ ವ್ಯಾಪ್ತಿಯ ಒಂದು ಮದ್ಯದಂಗಡಿಯಲ್ಲಿ ಕೂಡ ಕಳವು ನಡೆಸಿದ್ದಾಗಿ ವಿಚಾರಣೆ ವೇಳೆ ಆರೋಪಿಗಳು ಹೇಳಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಕದಿಯಲು ಬಂದವ ಕೊಲೆಯಾಗಿ ಹೋದ; ಶ್ರೀರಾಮ್ ಪುರ ಪ್ರಕರಣಕ್ಕೆ ಹೊಸ ಟ್ವಿಸ್ಟ್
ತನಿಖೆ ಕೈಗೊಂಡಿದ್ದ ಹೊನ್ನಾಳಿ ಪೊಲೀಸ್ ಸಿಪಿಐ ದೇವರಾಜ್, ಪಿಎಸ್ಐ ತಿಪ್ಪೇಸಾಮಿ, ಸಿಬ್ಬಂದಿ ಫೈರೋಜ್ ಖಾನ್, ವೆಂಕಟರಮಣ, ಎಚ್.ಹರೀಶ್, ಎಸ್.ದೊಡ್ಡಬಸಪ್ಪ, ಬಸವರಾಜ್ ಜಂಬೂರ್, ಚೇತನ್ಕುಮಾರ್, ರಾಘವೇಂದ್ರ, ಉಮೇಶ್, ಶಾಂತಕುಮಾರ್ ತಂಡದ ಕಾರ್ಯವನ್ನು ಜಿಲ್ಲಾ ಎಸ್ಪಿ ಹನುಮಂತರಾಯ ಪ್ರಶಂಶಿಸಿದ್ದಾರೆ. ಅಲ್ಲದೇ, ನಗದು ಬಹುಮಾನ ಘೋಷಿಸಿದ್ದಾರೆ ಎಂದು ಸಿಪಿಐ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ