ಜನತಾ ಕರ್ಫ್ಯೂವನ್ನೇ ದಂಧೆ ಮಾಡಿಕೊಂಡ ವೈನ್‌ ಶಾಪ್‌ಗಳು!

Published : May 02, 2021, 09:00 PM ISTUpdated : May 02, 2021, 09:02 PM IST
ಜನತಾ ಕರ್ಫ್ಯೂವನ್ನೇ ದಂಧೆ ಮಾಡಿಕೊಂಡ ವೈನ್‌ ಶಾಪ್‌ಗಳು!

ಸಾರಾಂಶ

ಜನತಾ ಕರ್ಫ್ಯೂ ಬೆನ್ನಲೆ ದಂಧೆಗಿಳದ ಲಿಕ್ಕರ್ ಶಾಪ್ ಗಳು/ ನಿಯಮ ಉಲ್ಲಂಘಿಸಿ ಲಿಕ್ಕರ್ ಮಾರಾಟಕ್ಕೆ ಮುಂದಾಗಿದ್ದ ಕ್ಯಾಷಿಯರ್ಸ್/ ಉತ್ತರ ವಿಭಾಗದ ಪೊಲೀಸರಿಂದ ಎರಡು ಲಿಕ್ಕರ್ ಶಾಪ್ ಗಳ ವಿರುದ್ಧ ದೂರು/ ಸೋಲದೇವನಹಳ್ಳಿ ಇನ್ಸ್ಪೆಕ್ಟರ್ ಹರಿವರ್ಧನ್ ರಿಂದ ದಾಳಿ

ಬೆಂಗಳೂರು(ಮೇ 02) ಕೊರೋನಾ ನಿಯಂತ್ರಣಕ್ಕೆ ಬರಲಿ, ಏರುತ್ತಿರುವ ಕೇಸ್ ಕಡಿಮೆಯಾಗಲಿ ಎಂದು ಸರ್ಕಾರ ಜನತಾ ಕರ್ಫ್ಯೂ ಅಳವಡಿಕೆ ಮಾಡಿದೆ. ಆದರೆ ಇದೇ ಅವಕಾಶ ಬಳಕೆ ಮಾಡಿಕೊಂಡು ಕೆಲವರು ದಂಧೆಗೆ  ಇಳಿದಿದ್ದಾರೆ.

ಜನತಾ ಕರ್ಫ್ಯೂ ಬೆನ್ನಲ್ಲೆ  ಲಿಕ್ಕರ್ ಶಾಪ್ ಗಳು ದಂಧೆಗಿಳಿದಿವೆ. ನಿಯಮ ಉಲ್ಲಂಘಿಸಿ ಲಿಕ್ಕರ್ ಮಾರಾಟಕ್ಕೆ ಮುಂದಾಗಿದ್ದ ಕ್ಯಾಷಿಯರ್ಸ್  ಮೇಲೆ ದಾಳಿ ಮಾಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.  ಉತ್ತರ ವಿಭಾಗದ ಪೊಲೀಸರಿಂದ ಎರಡು ಲಿಕ್ಕರ್ ಶಾಪ್ ಗಳ ವಿರುದ್ಧ ದೂರು ದಾಖಲಿಸಲಾಗಿದೆ.

ಕರ್ನಾಟದಲ್ಲಿ ಇಳಿಯದ ಕೊರೋನಾ ಅಬ್ಬರ; ಮುಂದೇನು?

ಸೋಲದೇವನಹಳ್ಳಿ ಇನ್ಸ್ಪೆಕ್ಟರ್ ಹರಿವರ್ಧನ್  ಮಾಹಿತಿ ಆಧರಿಸಿ ದಾಳಿ ಮಾಡಿದ್ದಾರೆ. ಗಂಗಮ್ಮಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿಯೂ ದೂರು ದಾಖಲಾಗಿದೆ. ಜನತಾ ಕರ್ಫ್ಯೂ ನಿಯಮ ಉಲ್ಲಂಘಿಸಿ ಲಿಕ್ಕರ್ ಮಾರಾಟ ಮಾಡುತ್ತಿದ್ದ ಆರೋಪಿಗಳ ಮೇಲೆ ದಾಳಿ ಮಾಡಲಾಗಿದೆ. ಲಿಕ್ಕರ್ ಶಾಪ್ ಮಾಲೀಕರ ವಿರುದ್ದ ದೂರು ದಾಖಲಿಸಿಕೊಂಡು ಲಿಕ್ಕರ್ ಶಾಪ್ ಸೀಲ್ ಡೌನ್ ಮಾಡಲಾಗಿದೆ. 

ಅಗತ್ಯ ವಸ್ತುಗಳ ಖರೀದಿಗೆ ಸರ್ಕಾರ ಬೆಳಗಿನ ಅವಧಿಯಲ್ಲಿ ಅವಕಾಶ ಮಾಡಿಕೊಟ್ಟಿದೆ. ರಾತ್ರಿ ಎಂಟು  ಗಂಟೆ ವರೆಗೆ ಹಾಲು ಲಭ್ಯವಿರುತ್ತದೆ ಎಂದು ತಿಳಿಸಲಾಗಿದೆ. ಕೊರೋನಾ ಎಚ್ಚರಿಕೆಯನ್ನು ಪಾಲಿಸುವುದು ನಮ್ಮೆಲ್ಲರ ಜವಾಬ್ದಾರಿ .

"

 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಅಪರೂಪದ ಕೋತಿ ಪ್ರಭೇದ ಬ್ಯಾಗ್‌ನಲ್ಲಿಟ್ಟು ವಿದೇಶದಿಂದ ಅಕ್ರಮ ಸಾಗಾಟ, ಬೆಂಗಳೂರು ಏರ್ಪೋರ್ಟ್‌ನಲ್ಲಿ ಸಿಕ್ಕಿಬಿದ್ದ ಪ್ರಯಾಣಿಕ!
ಕ್ಯಾಸ್ಟ್ರೋಲ್ ಬ್ರಾಂಡ್‌ನ ನಕಲಿ ಎಂಜಿನ್ ಆಯಿಲ್ ಉತ್ಪಾದನೆ ಮಾಡುತ್ತಿದ್ದ ಘಟಕದ ಮೇಲೆ ದಾಳಿ