ಸೂಕ್ತ ದಾಖಲೆ ಇಲ್ಲದೇ ಸಾಗಿಸುತ್ತಿದ್ದ ₹4.21ಕೋಟಿ ಮೌಲ್ಯದ ಚಿನ್ನಾಭರಣ ವಶಕ್ಕೆ

Published : Mar 26, 2024, 08:37 PM IST
ಸೂಕ್ತ ದಾಖಲೆ ಇಲ್ಲದೇ ಸಾಗಿಸುತ್ತಿದ್ದ ₹4.21ಕೋಟಿ ಮೌಲ್ಯದ ಚಿನ್ನಾಭರಣ ವಶಕ್ಕೆ

ಸಾರಾಂಶ

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಎಂ ಸಿ ಹಳ್ಳಿ ಚೆಕ್ ಪೋಸ್ಟ್ ನಲ್ಲಿ ಸೂಕ್ತ ದಾಖಲೆಗಳು ಇಲ್ಲದೆ ಸಾಗಿಸುತ್ತಿದ್ದ 4.21 ಕೋಟಿ ರೂ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.

ಚಿಕ್ಕಮಗಳೂರು (ಮಾ.26) : ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಎಂ ಸಿ ಹಳ್ಳಿ ಚೆಕ್ ಪೋಸ್ಟ್ ನಲ್ಲಿ ಸೂಕ್ತ ದಾಖಲೆಗಳು ಇಲ್ಲದೆ ಸಾಗಿಸುತ್ತಿದ್ದ 4.21 ಕೋಟಿ ರೂ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.

ಬೆಂಗಳೂರಿನ ಬಿವಿಸಿ ಸಾರಿಗೆ ಸಂಸ್ಥೆಯ ಮಹೇಂದ್ರ ವಾಹನವನ್ನು ಎಂ.ಸಿ.ಹಳ್ಳಿ ಚೆಕ್‌ಪೊಸ್ಟ್ ಬಳಿ ತಡೆದು ಶೋಧಿಸಿದಾಗ ಭಾರಿ ಪ್ರಮಾಣದ ಚಿನ್ನಾಭರಣ ಪತ್ತೆಯಾಗಿವೆ. ನಾಲ್ಕು ಕೋಟಿ ರೂ ಬೆಳೆಯ 6 ಕೆ.ಜಿ 586 ಗ್ರಾಂ ತೂಕದ ಚಿನ್ನದ ಆಭರಣ, 2,47 ಲಕ್ಷ ರೂ ಬೆಲೆ ಬಾಳುವ ಒಂದು ಕೆ.ಜಿ 873 ಗ್ರಾಂ ತೂಕದ ಬೆಳ್ಳಿಯ ಆಭರಣಗಳು ದೊರಕಿವೆ.17.47ಲಕ್ಷ ರೂಪಾಯಿ ಬೆಲೆಯ ಒಂದು ಕೆ.ಜಿ 77 ಗ್ರಾಂ ತೂಕದ ವಜ್ರದ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ. 

 

ಲೋಕಸಭಾ ಚುನಾವಣೆ 2024: ಕರ್ನಾಟಕದಲ್ಲಿ 5.85 ಕೋಟಿ ನಗದು ಜಪ್ತಿ

ಪ್ರಕರಣ ಸಂಬಂಧ ತುಮಕೂರು ಜಿಲ್ಲೆ, ಮಧುಗಿರಿ ತಾಲೂಕಿನ ವ್ಯವಸ್ಥಾಪಕ ಗೋಪಾಲ್ ಎಂಬಾತನನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ.

ನಾಡ ಬಂದೂಕು ವಶ:  

ಅಕ್ರಮವಾಗಿ ಪರವಾನಗಿ ಇಲ್ಲದೆ ನಾಡ ಬಂದೂಕು ಇಟ್ಟುಕೊಂಡಿದ್ದ ವ್ಯಕ್ತಿಯನ್ನು ಬಂಧಿಸಿರುವ ಘಟನೆ ಮೂಡಿಗೆರೆ ತಾಲ್ಲೂಕಿನ ಬಣಕಲ್ ಹೋಬಳಿಯಲ್ಲಿ ನಡೆದಿದೆ. ಬಣಕಲ್ ಹೋಬಳಿಯ ಬಸನಿ ಹೆಗ್ಗುಡ್ಲು ಗ್ರಾಮದ ಲೋಕೇಶ್  ಯಾವುದೇ ಪರವಾನಗಿ ಇಲ್ಲದೇ ಮನೆಯಲ್ಲಿ ಅಕ್ರಮವಾಗಿ ನಾಡ ಬಂದೂಕು ಮತ್ತು ಚರೆಯನ್ನು ಇಟ್ಟುಕೊಂಡಿದ್ದ ಎನ್ನಲಾಗಿದೆ. 

ಬೀದರ್‌: ಔರಾದ್ ಬಳಿ ಪೊಲೀಸರ ಭರ್ಜರಿ ಕಾರ್ಯಾಚರಣೆ, 15.50 ಕೋಟಿ ಮೌಲ್ಯದ ಗಾಂಜಾ ವಶ

ಖಚಿತ ಮಾಹಿತಿ ಪಡೆದ ಬಣಕಲ್ ಪೊಲೀಸರು ದಾಳಿ ನಡೆಸಿ ಒಂಟಿ ನಳಿಕೆಯ ನಾಡ ಬಂದೂಕು ಹಾಗೂ 12 ಚರೆಯನ್ನು ವಶಪಡಿಸಿಕೊಂಡು ಭಾರತೀಯ ಶಸ್ತ್ರಾಸ್ತ್ರ ಕಾಯ್ದೆ ಅಡಿಯಲ್ಲಿ  ಪ್ರಕರಣ ದಾಖಲಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬೆಂಗಳೂರಿನ ಬಾಡಿಗೆ ಮನೆಯಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ
ಬೆಂಗಳೂರು ಅಪಾರ್ಟ್‌ಮೆಂಟ್‌ನ 16 ಕುಟುಂಬಗಳಿಗೆ ರೌಡಿಸಂ ದರ್ಶನ; ಮಾಟ-ಮಂತ್ರ ಮಾಡಿಸಿ ಕಿರುಕುಳ!