ದಂಡ ಕಟ್ಟಲಾಗದೆ ಪೊಲೀಸ್ ಠಾಣೆಯಿಂದ ತಪ್ಪಿಸಿಕೊಂಡಿದ್ದ ಚಾಲಕ ಶವವಾಗಿ ಪತ್ತೆ!

Published : Jul 01, 2023, 10:34 AM ISTUpdated : Jul 01, 2023, 10:41 AM IST
ದಂಡ ಕಟ್ಟಲಾಗದೆ ಪೊಲೀಸ್ ಠಾಣೆಯಿಂದ ತಪ್ಪಿಸಿಕೊಂಡಿದ್ದ ಚಾಲಕ ಶವವಾಗಿ ಪತ್ತೆ!

ಸಾರಾಂಶ

ಪೊಲೀಸ್ ಠಾಣೆಯಿಂದ ನಾಪತ್ತೆಯಾಗಿದ್ದ ವ್ಯಕ್ತಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಹೊಳಲ್ಕೆರೆ ಪಟ್ಟಣದಲ್ಲಿ ನಡೆದಿದೆ.

ಚಿತ್ರದುರ್ಗ (ಜು.1) : ಪೊಲೀಸ್ ಠಾಣೆಯಿಂದ ನಾಪತ್ತೆಯಾಗಿದ್ದ ವ್ಯಕ್ತಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಹೊಳಲ್ಕೆರೆ ಪಟ್ಟಣದಲ್ಲಿ ನಡೆದಿದೆ.

ಲಾರಿ ಚಾಲಕ ಬಸವಂತಕುಮಾರ್ (37) ಮೃತ ವ್ಯಕ್ತಿ. ದಾವಣಗೆರೆ ಜಿಲ್ಲೆಯ ಜಗಳೂರು ತಾ. ಕಟ್ಟಿಗೆಹಳ್ಳಿ ನಿವಾಸಿಯಾಗಿರುವ ಬಸವಂತಕುಮಾರ ಲಾರಿ ಚಾಲಕನಾಗಿ ಕೆಲಸ ಮಾಡುತ್ತಿದ್ದ.  ಜೂನ್ 5 ರಂದು ಸಂಚಾರಿ ನಿಯಮ ಉಲ್ಲಂಘನೆ ಹಿನ್ನೆಲೆ ಸಂಚಾರಿ ಪೊಲೀಸರು ಲಾರಿ ತಡೆಹಿಡಿದು ಲಾರಿ ಸಮೇತ ಚಾಲಕನನ್ನು ಹೊಳಲ್ಕೆರೆ ಪೊಲಿಸ್ ಠಾಣೆಗೆ ಕರೆತಂದಿದ್ದ ಪೊಲೀಸರು.

ಆದರೆ ದಂಡ ಕಟ್ಟಲು ಹಣವಿಲ್ಲದೆ ಪೊಲೀಸ್ ಠಾಣೆಯಿಂದ ನಾಪತ್ತೆಯಾಗಿದ್ದ. ಚಾಲಕನ ಪತ್ತೆಗಾಗಿ ಎಸ್ಪಿ ಕಚೇರಿ ಬಳಿ ಪ್ರತಿಭಟನೆ ನಡೆಸಿದ್ದ ಮೃತನ ಪೋಷಕರು. ಪತ್ತೆ ಹಚ್ಚುವ ಪ್ರಯತ್ನ ನಡೆಸಿದರೂ ಸುಳಿವು ಸಿಕ್ಕಿರಲಿಲ್ಲ. ಆದರೆ ನಿನ್ನೆ ಸಂಜೆ ಬಸವಂತ ಕುಮಾರ್ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆ.

ಹೊಳಲ್ಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಪ್ರಕರಣ.

ದಂಡ ಕಟ್ಟಲಾಗದೇ ಪೊಲೀಸ್‌ ಠಾಣೆ ಮುಂದಿದ್ದ ಲಾರಿ ಚಾಲಕ 8 ದಿನದಿಂದ ನಾಪತ್ತೆ: ಪೊಲೀಸರ ಮೇಲೆ ಅನುಮಾನ 

ಕೆರೆಯಲ್ಲಿ ಬಿದ್ದು ವ್ಯಕ್ತಿ ಸಾವು

ಕಡೂರು: ಪಟ್ಟಣದ ಛತ್ರದ ಬೀದಿಯ ನಿವಾಸಿ ಉಪೇಂದ್ರನಾಥ್‌ ಅವರ ಪುತ್ರ ಎಂ.ಯು.ಅಕ್ಷಯ್‌(28) ತಾಲೂಕಿನ ಅಯ್ಯನಕೆರೆಯಲ್ಲಿ ಬಿದ್ದು ಸಾವನ್ನಪ್ಪಿದ್ದು ಈ ಸಂಬಂಧ ಸಖರಾಯಪಟ್ಟಣ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ಕಡೂರು ಪಟ್ಟಣದಲ್ಲಿ ಅಕ್ಷಯ್‌ ಸ್ವಂತ ಬಿಸಿನೆಸ್‌ ಮಾಡುತ್ತಿದ್ದು ವ್ಯವಹಾರದಲ್ಲಿ ನಷ್ಟವಾಗಿದೆ ಎಂದು ನಮ್ಮ ಬಳಿ ಹೇಳಿಕೊಂಡಿದ್ದ ಹಾಗೂ ಬೇಸರಿಸಿಕೊಂಡಿದ್ದನು. ನಾವು ಅವನಿಗೆ ಸಮಾಧಾನ ಹೇಳಿದ್ದೆವು. ಕಳೆದ ಜೂ. 28 ರಂದು ಸಂಜೆ ಸುಮಾರು 7.30ರಲ್ಲಿ ಮನೆಯಿಂದ ಯಾರಿಗೂ ಹೇಳದೆ ಅವನ ಹತ್ತಿರ ಇದ್ದ ಸ್ಕೂಟಿಯಲ್ಲಿ ಹೋಗಿದ್ದು ವಾಪಸ್‌ ಮನೆಗೆ ಬಂದಿರುವುದಿಲ್ಲ.

ಭೀಮಾ ನದಿಗೆ ಬಟ್ಟೆ ತೊಳೆಯಲು ಹೋದ ತಾಯಿ-ಮಗು ಸಾವು!

ನಾವುಗಳು ನಮ್ಮ ಸಂಬಂಧಿಕರ, ಅತನ ಸ್ನೇಹಿತರ ಮನೆ ಮತ್ತು ಎಲ್ಲಾ ಕಡೆ ಹುಡುಕಿದರೂ ಸಿಕ್ಕಿರಲಿಲ್ಲ. ಆದರೆ ಶುಕ್ರವಾರ ಮಧ್ಯಾಹ್ನ ಸಖರಾಯಪಟ್ಟಣ ಪೊಲೀಸ್‌ ಠಾಣೆಯಿಂದ ನಮಗೆ ದೂರವಾಣಿ ಕರೆ ಮಾಡಿಅಯ್ಯನಕೆರೆ ಹಿನ್ನೀರಿನಲ್ಲಿ ಒಂದು ಶವ ದೊರೆತಿರುವ ಬಗ್ಗೆ ಮಾಹಿತಿ ನೀಡಿದಾಗ ನಾವು ಹೋಗಿ ಶವವನ್ನು ನಮ್ಮ ಮಗ ಅಕ್ಷಯ್‌ ಎಂದು ಗುರುತಿಸಿದ್ದೇವೆ ಎಂದು ಉಪೇಂದ್ರನಾಥ್‌ ಸಖರಾಯಪಟ್ಟಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ದೂರಿನ ಅನ್ವಯ ಕೇಸು ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಕಡೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಶವ ಪರೀಕ್ಷೆ ನಡೆದು ನಂತರ ಅವರ ಕುಟುಂಬಕ್ಕೆ ನೀಡಲಾಗಿದೆ ಎಂದು ಪೊಲೀಸರು ತಿಳಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಭದ್ರಾವತಿ: ಜೈ ಭೀಮ್ ನಗರದಲ್ಲಿ ಪ್ರೇಮಿಗಳ ವಿಚಾರಕ್ಕೆ ರಕ್ತಪಾತ: ಇಬ್ಬರು ದುರ್ಮರಣ!
ಕಾರವಾರ: ಉಂಡ‌ ಮನೆಗೆ ದ್ರೋಹ; ಮನೆ ಕೆಲಸದವನಿಂದಲೇ ಲಕ್ಷಾಂತರ ರೂಪಾಯಿ ಕದ್ದವನ ಬಂಧನ