Bengaluru: 6 ವರ್ಷದ ಪ್ರೀತಿಗೆ ಬ್ರೇಕ್ ಬಿದ್ದಿದ್ದಕ್ಕೆ ಪ್ರಿಯತಮ ಆತ್ಮಹತ್ಯೆ

Published : Jan 19, 2023, 12:19 PM ISTUpdated : Jan 19, 2023, 01:01 PM IST
Bengaluru: 6 ವರ್ಷದ ಪ್ರೀತಿಗೆ ಬ್ರೇಕ್ ಬಿದ್ದಿದ್ದಕ್ಕೆ ಪ್ರಿಯತಮ ಆತ್ಮಹತ್ಯೆ

ಸಾರಾಂಶ

ಆರು ವರ್ಷದ ಪ್ರೀತಿಗೆ ಬ್ರೇಕ್ ಬಿದ್ದಿದ್ದಕ್ಕೆ ಪ್ರಿಯತಮ ಆತ್ಮಹತ್ಯೆ ಘಟನೆ ಬೆಂಗಳೂರಿನ ಉಲ್ಲಾಳ ಉಪನಗರದಲ್ಲಿ ನಡೆದಿದೆ. ರೋಹಿತ್ (25) ಮೃತ ಯುವಕ. ಕೊರಿಯರ್ ಕಂಪನಿ ಒಂದರಲ್ಲಿ ಕೆಲಸ ಮಾಡ್ತಿದ್ದ ರೋಹಿತ್, ಕಳೆದ ಆರು ವರ್ಷಗಳಿಂದ ಯುವತಿಯನ್ನ ಲವ್ ಮಾಡ್ತಿದ್ದ.

ಬೆಂಗಳೂರು (ಜ.19): ಆರು ವರ್ಷದ ಪ್ರೀತಿಗೆ ಬ್ರೇಕ್ ಬಿದ್ದಿದ್ದಕ್ಕೆ ಪ್ರಿಯತಮ ಆತ್ಮಹತ್ಯೆ ಘಟನೆ ಬೆಂಗಳೂರಿನ ಉಲ್ಲಾಳ ಉಪನಗರದಲ್ಲಿ ನಡೆದಿದೆ. ರೋಹಿತ್ (25) ಮೃತ ಯುವಕ. ಕೊರಿಯರ್ ಕಂಪನಿ ಒಂದರಲ್ಲಿ ಕೆಲಸ ಮಾಡ್ತಿದ್ದ ರೋಹಿತ್, ಕಳೆದ ಆರು ವರ್ಷಗಳಿಂದ ಯುವತಿಯನ್ನ ಲವ್ ಮಾಡ್ತಿದ್ದ. ಆದರೆ ಕೊನೆ ಬಾರಿ ಭೇಟಿಯಾದಾಗ ಇಬ್ಬರ ನಡುವೆ ಜಗಳವಾಗಿದ್ದು, ಈ ವೇಳೆ ಇನ್ನು ಪ್ರೀತಿ ಬೇಡ ನಾವು ಬ್ರೇಕಪ್ ಮಾಡಿಕೊಳ್ಳುವ ಎಂದು ಗಲಾಟೆ ಮಾಡಿಕೊಂಡಿದ್ದಾರೆ. ಇದರಿಂದ ಮನನೊಂದು ಮನೆಯಲ್ಲಿ ನೇಣುಬಿಗಿದುಕೊಂಡು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನೆ ಸಂಬಂಧ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪತ್ನಿಯಿಂದ ಮಾನಸಿಕ ಕಿರುಕುಳ: ಪತಿ ಆತ್ಮಹತ್ಯೆ: ಪತ್ನಿ, ಪತ್ನಿಯ ಕುಟುಂಬದವರ ಮಾನಸಿಕ ಹಾಗೂ ದೈಹಿಕ ಕಿರುಕುಳದಿಂದ ಬೇಸತ್ತ ಗಂಡನೋರ್ವ ವಿಷ ಕುಡಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೋಲಾರ ತಾಲೂಕಿನ ಕ್ಯಾಲನೂರು ಕ್ರಾಸ್‌ ಬಳಿ ನಡೆದಿದೆ. ತಾಲೂಕಿನ ದಿನ್ನೆಹೊಸಹಳ್ಳಿಯ ಮಂಜುನಾಥ್‌ (35) ವಿಷ ಕುಡಿದು ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿ. ಇದೀಗ ಪತ್ನಿ ಸೌಂದರ್ಯ, ಮಾವ ಮುನಿಸ್ವಾಮಿ, ಅತ್ತೆ ಶ್ಯಾಮಲಮ್ಮ ಹಾಗೂ ಪತ್ನಿಯ ಮಾವ ರಾಜೇಶ್‌ ವಿರುದ್ದ ಮಂಜುನಾಥ್‌ ತಂದೆ ರೆಡ್ಡಪ್ಪ ನೀಡಿದ ದೂರಿನ ಮೇರೆಗೆ ವೇಮಗಲ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂತ್ರಿಗಿರಿ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ, ನಾನು ಬಿಜೆಪಿ ಬಿಡಲ್ಲ: ರಮೇಶ್‌ ಜಾರಕಿಹೊಳಿ

ಕೋಲಾರ ತಾಲೂಕಿನ ದಿನ್ನೆಹೊಸಹಳ್ಳಿಯ ಮಂಜುನಾಥ್‌, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ತಾವರೆಕೆರೆ ಸೌಂದರ್ಯರನ್ನ ಮೂರು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ. ಪತ್ನಿ ಸೌಂದರ್ಯ ತನ್ನ ತಂದೆ, ತಾಯಿ ಹಾಗೂ ಮಾವನ ಮಾತು ಕೇಳಿಕೊಂಡು ಈಗಲೇ ಮಗು ಬೇಡ ಗರ್ಭಪಾತ ಮಾಡಿಸಿಕೊಳ್ಳುತ್ತೇನೆ ಅಂತ ಗಂಡನಿಗೆ ತಿಳಿಸಿದ್ದಾಳೆ. ಆಗ ಗಂಡ ಮಂಜುನಾಥ್‌ ಗರ್ಭಪಾತ ಮಾಡಿಸುವುದು ಬೇಡ ಅಂತ ಪತ್ನಿಗೆ ಬುದ್ದಿವಾದ ಹೇಳಿದ್ದಾನೆ. ಆದರೆ ಪತ್ನಿ ಸೌಂದರ್ಯ ಗಂಡ ಮಂಜುನಾಥ್‌ ನನಗೆ ಕಿರುಕುಳ ನೀಡುತ್ತಿದ್ದಾನೆ ಅಂತ ಸುಳ್ಳು ದಾಖಲಿಸಿ, ಗಂಡನ ಬೆದರಿಕೆ ಹಾಕಿ, ಅನುಮತಿ ಪಡೆಯದೆ ಗರ್ಭಪಾತ ಮಾಡಿಸಿಕೊಂಡು ತವರು ಮನೆ ಸೇರಿಕೊಂಡಿದ್ದಾರೆ.

ಉತ್ತಮ ಕಾರ್ಯಕ್ರಮ ಕೊಡದಿದ್ದರೆ 2028ರಲ್ಲಿ ಜೆಡಿಎಸ್‌ ಪಕ್ಷ ವಿಸರ್ಜನೆ: ಎಚ್‌ಡಿಕೆ

ಇದರಿಂದ ಮನನೊಂದ ಮಂಜುನಾಥ್‌ ಜ.10 ರಂದು ಕೋಲಾರ ತಾಲೂಕಿನ ಕ್ಯಾಲನೂರು ಕ್ರಾಸ್‌ ಬಳಿ ವಿಷ ಕುಡಿದು ಆತ್ಮಹತ್ಯೆಗೆ ಪ್ರಯತ್ನಿಸಿದ್ದಾನೆ. ಕೂಡಲೇ ಮಂಜುನಾಥ್‌ ಕುಟುಂಬದವರು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಕೊಡಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಂಜುನಾಥ್‌ ಜ.17 ರಂದು ಮೃತಪಟ್ಟಿದ್ದಾನೆ. ಪತ್ನಿ ಸೌಂದರ್ಯ, ಮಾವ ಮುನಿಸ್ವಾಮಿ, ಅತ್ತೆ ಶ್ಯಾಮಲಮ್ಮ, ಪತ್ನಿಯ ಮಾವ ರಾಜೇಶ್‌ ಅವರು ಮಂಜುನಾಥ್‌ ಅವರನ್ನ ಕೊಲೆ ಮಾಡಿ ಆತ್ಮಹತ್ಯೆಯ ಕಥೆ ಸೃಷ್ಟಿಸಿದ್ದಾರೆ ಅಂತಾ ಆರೋಪಿಸಿ ಮಂಜುನಾಥ್‌ ತಂದೆ ವೇಮಗಲ್‌ ಪೊಲೀಸ್‌ ಠಾಣೆಯಲ್ಲಿ ನಾಲ್ವರು ವಿರುದ್ದ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ವೇಮಗಲ್‌ ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರಾಮನಗರ: ರಸ್ತೆಗೆ ಕುರಿಗಳು ಅಡ್ಡಿ, ಹಾರ್ನ್ ಮಾಡಿದ್ದಕ್ಕೆ ಬಸ್ ಚಾಲಕನ ಮೇಲೆ ಗ್ರಾಮಸ್ಥರಿಂದ ಹಲ್ಲೆ!
ಬೆಂಗಳೂರು ವಿಜಯ್ ಗುರೂಜಿ ಗ್ಯಾಂಗ್ ಸಮೇತ ಅರೆಸ್ಟ್; ಟೆಕ್ಕಿಗೆ ಲೈಂಗಿಕ ಶಕ್ತಿ ಹೆಚ್ಚಿಸೋದಾಗಿ ₹40 ಲಕ್ಷ ವಂಚನೆ!