ವಿಚ್ಛೇದಿತ ಮಹಿಳೆಗೆ ಮದುವೆಯಾಗೋದಾಗಿ ನಂಬಿಸಿ ಲಕ್ಷ ಲಕ್ಷ ಹಣ ದೋಚಿದ ನಕಲಿ ಪೊಲೀಸ್‌!

Published : Jul 22, 2024, 08:44 AM ISTUpdated : Jul 22, 2024, 12:22 PM IST
ವಿಚ್ಛೇದಿತ ಮಹಿಳೆಗೆ ಮದುವೆಯಾಗೋದಾಗಿ ನಂಬಿಸಿ ಲಕ್ಷ ಲಕ್ಷ ಹಣ ದೋಚಿದ ನಕಲಿ ಪೊಲೀಸ್‌!

ಸಾರಾಂಶ

ವಿಚ್ಛೇದಿತ ಮಹಿಳೆಗೆ ಮದುವೆಯಾಗುವುದಾಗಿ ನಂಬಿಸಿ ನಕಲಿ ಪೊಲೀಸ್‌ ಓರ್ವ ಲಕ್ಷಾಂತರ ರು. ವಂಚಿಸಿರುವ ಘಟನೆ ಬೆಂಗಳೂರು ಉತ್ತರ ಸಮೀಪದ ಸೋಲದೇವನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಚಿಕ್ಕಬಾಣಾವಾರ ವ್ಯಾಪ್ತಿಯ ಗಣಪತಿನಗರದ ನಿವಾಸಿ ವಿಶ್ವನಾಥ ಅಲಿಯಾಸ್​ ವಿಷ್ಣುಗೌಡ ಆರೋಪಿ.

ಪೀಣ್ಯ ದಾಸರಹಳ್ಳಿ (ಜು.22) ವಿಚ್ಛೇದಿತ ಮಹಿಳೆಗೆ ಮದುವೆಯಾಗುವುದಾಗಿ ನಂಬಿಸಿ ನಕಲಿ ಪೊಲೀಸ್‌ ಓರ್ವ ಲಕ್ಷಾಂತರ ರು. ವಂಚಿಸಿರುವ ಘಟನೆ ಬೆಂಗಳೂರು ಉತ್ತರ ಸಮೀಪದ ಸೋಲದೇವನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಚಿಕ್ಕಬಾಣಾವಾರ ವ್ಯಾಪ್ತಿಯ ಗಣಪತಿನಗರದ ನಿವಾಸಿ ವಿಶ್ವನಾಥ ಅಲಿಯಾಸ್​ ವಿಷ್ಣುಗೌಡ ಆರೋಪಿ.

ಆರೋಪಿಯು ಮದುವೆ ಆಗುವುದಾಗಿ ಮಹಿಳೆಗೆ ವಂಚಿಸಿ, ಲವ್, ಸೆಕ್ಸ್, ದೋಖಾ ಮಾಡಿ 40 ವರ್ಷದ ಮಹಿಳೆಯ ಬಳಿ 41 ಲಕ್ಷ ರು. ಹಣ ಮತ್ತು 5 ಲಕ್ಷ ರು. ಮೌಲ್ಯದ ಎಲ್‌ಐಸಿ ಬಾಂಡನ್ನು ಕಿತ್ತುಕೊಂಡು ಮೋಸ ಮಾಡಿದ್ದಾನೆ.

ಕಾರು ತರಬೇತಿ ವೇಳೆ ಯುವತಿ ಎದುರೇ ಹಸ್ತಮೈಥುನ ಮಾಡಿಕೊಂಡ ಕಾಮುಕ ತರಬೇತುದಾರ!

ಏನಿದು ಘಟನೆ?:

11 ವರ್ಷದ ಹಿಂದೆ ಮಹಿಳೆಗೆ ವಿಚ್ಛೇದನವಾಗಿದ್ದೂ ಬಳಿಕ ಇಬ್ಬರಿಗೂ ಪರಿಚಯವಾಗಿದೆ. ವಿಶ್ವನಾಥ ಅಲಿಯಾಸ್​ ವಿಷ್ಣುಗೌಡ(vishnugowda) ಪೊಲೀಸ್​ ವಸ್ತ್ರದಲ್ಲಿರುವ ಫೋಟೋ ಹಾಗೂ ಗನ್​ ಇರುವುದನ್ನು ನೋಡಿರುವ ಮಹಿಳೆ ಪೊಲೀಸ್​ ಹುದ್ದೆಯಲ್ಲಿರಬಹುದು ಎಂದು ನಂಬಿದ್ದಾರೆ. ವಿಷ್ಣುಗೌಡ ನಾನು ಪೋಲೀಸ್ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತೇನೆಂದು ಹೇಳಿ ಮಹಿಳೆಗೆ ನಂಬಿಸಿ ವಂಚಿಸಿದ್ದಾನೆ. ಆದರೆ ಆತ ನಕಲಿ ಪೊಲೀಸ್​ ಎಂಬುದು ನಂತರ ಗೊತ್ತಾಗಿದೆ.

ಮದುವೆಯಾಗಿ ಒಂದು ವರ್ಷಕ್ಕೆ ಅವಳು ಬೇಡವಾದಳು..ಇಡೀ ಕುಟುಂಬವನ್ನೇ ಕೊಂದು ಶವವನ್ನು ಎಸೆದರು!

ಮಹಿಳೆ ತಂಗಿಗೆ ಖಾಸಗಿ ಅಂಗ ತೋರಿಸಿ ವಿಕೃತಿ:

ಮನೆಗೆ ನುಗ್ಗಿ ಮಹಿಳೆಯ ತಂದೆ ತಾಯಿ ಮೇಲೆ ಹಲ್ಲೆ ಮಾಡಿದ್ದು, ಮಹಿಳೆಯ ತಂಗಿ ಮುಂದೆ ಪ್ಯಾಂಟ್ ಬಿಚ್ಚಿ ಖಾಸಗಿ ಅಂಗ ತೋರಿಸಿ ವಿಕೃತಿ ಮೇರೆದಿದ್ದಾನೆ. ಮಹಿಳೆಯ ಹತ್ತಿರ ಬಲವಂತವಾಗಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಚಿಕ್ಕಬಾಣಾವರ ಖಾತೆಯ ಚೆಕ್‌ಗಳಿಗೆ ಬಲವಂತವಾಗಿ ಸಹಿ ಮಾಡಿಸಿಕೊಂಡಿದ್ದಾನೆ.ಕೆಲವು ತಿಂಗಳುಗಳ ಹಿಂದೆ ಗಾಡಿ ನಿಲ್ಲಿಸುವ ವಿಚಾರಕ್ಕೆ ಪಕ್ಕದ ಮನೆಯ ಮಹಿಳೆಯ ಜೊತೆಗೆ ಹಾಗೂ ಅವರ ಕುಟುಂಬದ ಜೊತೆಗೆ ಜಗಳವನ್ನು ಕೂಡ ಮಾಡಿದ್ದಾನೆ. ಆ ಮಹಿಳೆಗೆ ಮನಸ್ಸೋ ಇಚ್ಚೆ ಹಲ್ಲೆ ಮಾಡಿದ್ದಾನೆ ಈ ಘಟನೆಯೂ ಸೋಲದೇವನಹಳ್ಳಿ ಪೋಲೀಸ್ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿದೆ. ಈ ಸಂಬಂಧ ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ BNS 2023 115(2), 316(2), 318(4), 324(4), 351(2), 352, 76, 79 ರೀತ್ಯಾ ಪ್ರಕರಣ ದಾಖಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಪ್ರೆಗ್ನೆಂಟ್ ಮಾಡಿ ಗರ್ಭಪಾತ ಮಾಡಿಸಿದ, Sorry ಅಮ್ಮಾ ಸಾಯ್ತಿದ್ದೀನಿ: ಯುವತಿ ಆತ್ಮ*ಹತ್ಯೆ
Actor Dileep Case: ಖ್ಯಾತ ನಟಿ ಮೇಲಿನ ಅ*ತ್ಯಾಚಾರ ಆರೋಪ; 8 ವರ್ಷಗಳ ಹೋರಾಟ, ನಟ ದಿಲೀಪ್‌ಗೆ ನಿರಾಳ!