
ಯಾದಗಿರಿ, (ಜ.19): ಪ್ರೇಮಿಗಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಾದಗಿರಿ ಜಿಲ್ಲೆಯ ವಡಿಗೇರಾ ತಾಲೂಕಿನ ಗುಂಡಗುರ್ತಿ ಗ್ರಾಮದಲ್ಲಿ ನಡೆದಿದೆ.
ಶರಣಬಸವ(23) ಮತ್ತು ಶೇಖಮ್ಮ(19) ಆತ್ಮಹತ್ಯೆಗೆ ಶರಣಾಗಿದ್ದು, ತಮ್ಮ ಪ್ರೀತಿಗೆ ಮನೆಯವರು ಸಮ್ಮತಿ ಸೂಚಿಸದ ಹಿನ್ನೆಲೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಮೈಸೂರು; ಗರ್ಲ್ ಫ್ರೆಂಡ್ ಜತೆ ಮಾತಾಡುತ್ತಿದ್ದಾಗಲೇ ಹಿಂದಿಂದ ಏಟು ಬಿದ್ದಿತ್ತು!
ಶರಣಬಸವ ಹಾಗು ಶೇಖಮ್ಮ ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಆದ್ರೆ, ಕುಟುಂಬದವರು ಮದುವೆಗೆ ಒಪ್ಪದಿರುವುದನ್ನೇ ಕಾರಣವಾಗಿಟ್ಟುಕೊಂಡು ಮನೆಯಲ್ಲಿರುವ ಪೈಪ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಘಟನಾ ಸ್ಥಳಕ್ಕೆ ಶಹಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಬಗ್ಗೆ ಶಹಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ