
ರಾಯಚೂರು(ಏ.23): ಒಂದೇ ಸೀರೆಗೆ ನೇಣು ಹಾಕಿಕೊಂಡು ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಯಚೂರು(Raichur) ಜಿಲ್ಲೆಯ ಸಿಂಧನೂರು(Sindhanur) ತಾಲೂಕಿನ ಆರ್.ಎಚ್. ಕ್ಯಾಂಪ್ - 3ರಲ್ಲಿ ಇಂದು(ಶನಿವಾರ) ನಡೆದಿದೆ. ಲವ್ ಸರ್ಕಾರ್( 24) ಮತ್ತು ಕರೀನಾ(19) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಗಳಾಗಿದ್ದಾರೆ.
ಲವ್ ಸರ್ಕಾರ್ ಇಬ್ಬರು ಯುವತಿಯರನ್ನ ಪ್ರೀತಿಸಿದ್ದನು(Love). ಹೀಗಾಗಿ ಕರೀನಾಗೆ ಕೈಕೊಟ್ಟು ಬೇರೆಯೊಬ್ಬಳ ಜೊತೆಗೆ ಮದುವೆ(Marriage) ಆಗಿದ್ದ ಲವ್ ಸರ್ಕಾರ್. ಲವ್ ಸರ್ಕಾರ್ ಬೇರೆ ಯುವತಿ ಜೊತೆಗೆ ವಿವಾಹವಾಗಿದ್ದಕ್ಕೆ ಕರೀನಾ ತೀವ್ರವಾಗಿ ಮನನೊಂದಿದ್ದಳು ಅಂತ ಹೇಳಲಾಗುತ್ತಿದೆ.
ಸುಳ್ಯದಲ್ಲಿ ಚಲಿಸುತ್ತಿರುವ ಲಾರಿ ಅಡಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಯುವಕ: ವಿಡಿಯೋ
ಇತ್ತ ಕರೀನಾಳನ್ನೂ ಬಿಟ್ಟು ಇರಲು ಆಗದೇ ಲವ್ ಸರ್ಕಾರ್, ಕರೀನಾ ಜತೆ ಆತ್ಮಹತ್ಯೆಗೆ(Suicide) ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ. ಈ ಸಂಬಂಧ ಸಿಂಧನೂರು ಗ್ರಾಮೀಣ ಪೊಲೀಸ್(Police) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ