ಮದುವೆ ಮಾಡಲು ವಿಳಂಬ ಮಾಡಿದ್ದಕ್ಕೆ ಈ ಪ್ರೇಮಿಗಳು ಹೀಗಾ ಮಾಡೋದು..?

Published : Feb 16, 2021, 04:01 PM IST
ಮದುವೆ ಮಾಡಲು ವಿಳಂಬ ಮಾಡಿದ್ದಕ್ಕೆ ಈ ಪ್ರೇಮಿಗಳು ಹೀಗಾ ಮಾಡೋದು..?

ಸಾರಾಂಶ

ಪ್ರೀತಿಗೆ ವಿರೋಧವಿದ್ದರೆ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ. ಆದ್ರೆ ಇಲ್ಲಿ  ಇವರಿಬ್ಬರ ಪ್ರೀತಿಗೆ ಯಾರು ವಿರೋಧಿಸಿರಲಿಲ್ಲ. ಆದರೂ ಪ್ರೀಮಿಗಳು ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಂತೆ ಇವರ ಶವ ಪತ್ತೆಯಾಗಿದೆ.

ಕಲಬುರಗಿ, (ಫೆ.16): ಪ್ರೇಮಿಗಳ ದಿನಕ್ಕೆ ಮೂರು ದಿನ ಮುಂಚೆ ಅಂದ್ರೆ ಫೆಬ್ರವರಿ 11ರಂದು ನಾಪತ್ತೆಯಾಗಿದ್ದ ಪ್ರೇಮಿಗಳು ಕೊಳೆತ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. 

ಕಲಬುರಗಿ ಜಿಲ್ಲೆಯ ಯಡ್ರಾಮಿ ಹೊರವಲಯದಲ್ಲಿ ಶವ ಪತ್ತೆಯಾಗಿದೆ.  ಪರಶುರಾಮ ಪೂಜಾರಿ(23), ಭಾಗ್ಯಶ್ರೀ(19) ಮೃತ ಪ್ರೇಮಿಗಳು. 

ಪ್ರೀತಿಸಿದ ಹುಡುಗಿಯ ದುರಂತ ಸಾವು : ಇತ್ತ ಪ್ರಿಯಕರನೂ ನೇಣಿಗೆ ಶರಣು

ಪೂಜಾರಿ ಮತ್ತು ಭಾಗ್ಯಶ್ರೀ ಯಡ್ರಾಮಿ ತಾಲೂಕಿನ ಮಾನಶಿವನಗಿ ಗ್ರಾಮದ ನಿವಾಸಿಗಳು. ಇವರಿಬ್ಬರೂ ಒಬ್ಬರನೊಬ್ಬರು ಪ್ರೀತಿಸುತ್ತಿದ್ದು ಮದುವೆ ಮಾಡುವುದಕ್ಕೆ 2 ಕುಟುಂಬಗಳು ಒಪ್ಪಿಕೊಂಡಿದ್ದವು. 

ಆದ್ರೆ ಮದುವೆ ಮಾಡಲು ವಿಳಂಬವಾಗುತ್ತಿದ್ದ ಹಿನ್ನೆಲೆಯಲ್ಲಿ ಇಬ್ಬರೂ ಮನೆಯಿಂದ ನಾಪತ್ತೆಯಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. 

 ಒಂದೇ ಮರಕ್ಕೆ ಇಬ್ಬರೂ ನೇಣು ಬಿಗಿದುಕೊಂಡಿರುವ ಸ್ಥಿತಿಯಲ್ಲಿ ದೇಹ ಪತ್ತೆಯಾಗಿದೆ. ಯಡ್ರಾಮಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಬಾಲಿವುಡ್ ನಿರ್ದೇಶಕ ವಿಕ್ರಂ ಭಟ್, ಪತ್ನಿ ಶ್ವೇತಾಂಬರಿ ಭಟ್ ಬಂಧನ; ಅಂತಿಂಥ ವಂಚನೆ ಕೇಸಲ್ಲ ಇದು ಅಂತೀರಾ?!
ಕೊಪ್ಪಳ: ಹಸೆಮಣೆ ಏರಬೇಕಿದ್ದ ಜೋಡಿ ಮಸಣಕ್ಕೆ - ಪ್ರಿ-ವೆಡ್ಡಿಂಗ್ ಶೂಟಿಂಗ್ ಮುಗಿಸಿ ವಾಪಸಾಗುವಾಗ ಭೀಕರ ದುರಂತ!