
ಬೆಂಗಳೂರು(ಜು.28): ಪ್ರೇಮಿಗಳಿಬ್ಬರು ನಡುರಸ್ತೆಯಲ್ಲೇ ಹೊಡೆದಾಡಿಕೊಂಡ ಘಟನೆ ಮೂಡಲಪಾಳ್ಯದ ಸೋಮೇಶ್ವರ ಎನ್ಕೈವ್ ಮುಂದೆ ನಿನ್ನೆ(ಗುರುವಾರ) ನಡೆದಿದೆ. ಸೌಮ್ಯ(ಹೆಸರು ಬದಲಾಯಿಸಲಾಗಿದೆ) ಹಾಗೂ ಸಂತೋಷ್ ನಡುವೆ ಗಲಾಟೆ ನಡೆದಿದೆ.
ನಿನ್ನೆ ರಾತ್ರಿ ವೇಳೆ ಈ ಜೋಡಿ ನಡುರಸ್ತೆಯಲ್ಲೇ ಕಿರಿಕ್ ಮಾಡಿಕೊಂಡಿದೆ. ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಒಬ್ಬರಿಗೊಬ್ಬರು ಬಡಿದಾಡಿಕೊಂಡಿದ್ದಾರೆ. ಸೌಮ್ಯ ಹಾಗೂ ಸಂತೋಷ್ ಇಬ್ಬರು ಪ್ರೀತಿಸುತ್ತಿದ್ದರು ಅಂತ ಹೇಳಲಾಗುತ್ತಿದೆ.
ಮಂಡ್ಯದ ಗಂಡು- ಬೆಂಗಳೂರು ಹುಡುಗಿ ಫೇಸ್ಬುಕ್ ಲವ್: ತನು-ಮನ-ಧನ ಅರ್ಪಿಸಿದ ಹುಡುಗಿ ಸತ್ತೇ ಹೋದ್ಲು.!
ಇಬ್ಬರೂ ಕೆಲ ವರ್ಷಗಳ ಕಾಲ ಪಾರ್ಕ್, ಪಾರ್ಟಿ, ಸಿನಿಮಾ ಅಂತ ಸುತ್ತಾಡಿದ್ದಾರೆ. ಬಳಿಕ ಸಂತೋಷ್ ಸೌಮ್ಯಳನ್ನು ಅವೈಡ್ ಮಾಡೋದಕ್ಕೆ ಸ್ಟಾರ್ಟ್ ಮಾಡಿದ್ದನಂತೆ. ಈ ಬಗ್ಗೆ ಮಾತನಾಡಲು ಬಂದಾಗ ಇಬ್ಬರ ನಡುವೆ ಗಲಾಟೆ ನಡೆದಿದೆ. ಪ್ರಿಯಕರ ಸಂತೋಷ್ ಸೌಮ್ಯ ಮೇಲೆ ಹಲ್ಲೆ ಮಾಡಿದ್ರೇ, ಆತನ ಮೇಲೆ ಪ್ರಿಯತಮೆ ಸೌಮ್ಯ ಹಲ್ಲೆ ಮಾಡಿದ್ದಾರೆ.
ಇಬ್ಬರು ಹೊಡೆದಾಡಿಕೊಳ್ಳುವ ದೃಶ್ಯವನ್ನ ಸ್ಥಳೀಯರು ಸೆರೆ ಹಿಡಿದಿದ್ದಾರೆ. ಈ ಸಂಬಂಧ ಗೋವಿಂದರಾಜ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ