ನೋಯ್ಡಾ: ಹಸಿವಾದಾಗ ಬಹುತೇಕರಿಗೆ ತಡೆದುಕೊಳ್ಳಲಾಗದವುದಿಲ್ಲ. ಹಸಿವು ಹೆಚ್ಚುತ್ತಾ ಹೋದಂತೆ ಇದ್ದಬದ್ದ ತಾಳ್ಮೆಯೆಲ್ಲಾ ಕೆಟ್ಟು ಹೋಗುತ್ತದೆ. ಹೀಗೆ ತಾಳ್ಮೆ ಕೆಟ್ಟು ಸಿಟ್ಟಿನ ಕೈಗೆ ಬುದ್ದಿಕೊಟ್ಟ ಪರಿಣಾಮ ಈಗ ಮೂವರು ಯುವಕರು ಕಂಬಿ ಎಣಿಸುತ್ತಿದ್ದಾರೆ. ಆರ್ಡರ್ ಮಾಡಿದ ಬಿರಿಯಾನಿ ಪೂರೈಸಲು ವಿಳಂಬ ಮಾಡಿದರು ಎಂದು ಹೊಟೇಲ್ ಕ್ಯಾಶಿಯರ್ ಮೇಲೆ ವ್ಯಕ್ತಿಯೊಬ್ಬ ಹಿಗ್ಗಾಮುಗ್ಗಾ ಥಳಿಸಿದ್ದಾನೆ. ಉತ್ತರಪ್ರದೇಶದ ಗ್ರೇಟರ್ ನೋಯ್ಡಾದ (Greater Noida) ಹೊಟೇಲೊಂದರಲ್ಲಿ ಈ ಘಟನೆ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಈ ಹಲ್ಲೆಯ ದೃಶ್ಯ ಸ್ಥಳೀಯ ಸಿಸಿ ಕ್ಯಾಮರಾದಲ್ಲಿ ಸೆರೆ ಆಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ದೃಶ್ಯಾವಳಿಯನ್ನು ಆಧರಿಸಿ ಪೊಲೀಸರು ಕ್ರಮಕ್ಕೆ ಮುಂದಾಗಿದ್ದಾರೆ. ಈ ಸಂಬಂಧ ರೆಸ್ಟೋರೆಂಟ್ ಸಿಬ್ಬಂದಿ ಪೊಲೀಸರಿಗೆ ದೂರು ನೀಡಿದ್ದಾರೆ.
ಬುಧವಾರ ರಾತ್ರಿ 10.30ರ ಸುಮಾರಿಗೆ ಮೂವರು ಯುವಕರು ರಾತ್ರಿಯ ಊಟಕ್ಕಾಗಿ ನಗರದ ರೆಸ್ಟೋರೆಂಟ್ ಒಂದಕ್ಕೆ ಆಗಮಿಸಿದ್ದರು. ಆದರೆ ತುಂಬಾ ಹೊತ್ತಾದರೂ ರೆಸ್ಟೋರೆಂಟ್ ಸಿಬ್ಬಂದಿ ಬಿರಿಯಾನಿ ಪೂರೈಕೆ ಮಾಡದ ಹಿನ್ನೆಲೆಯಲ್ಲಿ ಅವರು ಕ್ಯಾಷಿಯರ್ಗೆ ಹೊಡೆದಿದ್ದಾಗಿ ಹೇಳಿದ್ದಾರೆ. ಗ್ರೇಟರ್ ನೋಯ್ಡಾದ ಅನ್ಸಲ್ ಪ್ಲಾಜಾ ಮಾಲ್ನಲ್ಲಿರುವ (Ansal Plaza mall) ಝೌಕ್ ರೆಸ್ಟೋರೆಂಟ್ನಲ್ಲಿ (Zauk restaurant) ಈ ಆಘಾತಕಾರಿ ಘಟನೆ ನಡೆದಿದೆ. ಬಂಧಿತರನ್ನು ಮನೋಜ್ (Manoj), ರವೇಶ್ (Rravesh), ಕ್ರಿಶ್ (Kris) ಎಂದು ಗುರುತಿಸಲಾಗಿದ್ದು, ಅವರೆಲ್ಲರೂ ದಾದ್ರಿ ನಿವಾಸಿಗಳಾಗಿದ್ದಾರೆ.
ವಿಡಿಯೋದಲ್ಲಿ ಕಾಣಿಸುವಂತೆ ರೆಸ್ಟೋರೆಂಟ್ ಒಳಗೆ ಟೇಬಲ್ ಮೇಲೆ ಮೂವರು ಕುಳಿತಿದ್ದು, ಮೂವರಲ್ಲಿ ಒಬ್ಬ ಇದ್ದಕ್ಕಿದ್ದಂತೆ ಎದ್ದು ಹೋಗಿ ರೆಸ್ಟೋರೆಂಟ್ನ ಕ್ಯಾಶ್ ಕೌಂಟರ್ನಲ್ಲಿ ಕುಳಿತಿದ್ದ ಸಿಬ್ಬಂದಿಯನ್ನು ಹಿಗ್ಗಾಮುಗ್ಗಾ ಥಳಿಸಿದ್ದಾನೆ. ಕ್ಯಾಷಿಯರ್ ಕತ್ತು ಪಟ್ಟಿಗೆ ಕೈ ಹಾಕಿ ಹಿಡಿದುಕೊಂಡು ಅಲ್ಲಿಂದ ಎಳೆದುಕೊಂಡು ಬಂದು ಆತನಿಗೆ ಸರಿಯಾಗಿ ಥಳಿಸಿದ್ದಾನೆ.
ಬುಧವಾರ ರಾತ್ರಿ ಈ ಮೂವರು ಆರೋಪಿಗಳು ಊಟಕ್ಕೆಂದು ರೆಸ್ಟೋರೆಂಟ್ಗೆ ತೆರಳಿ ಚಿಕನ್ ಬಿರಿಯಾನಿ (chicken biryani) ಆರ್ಡರ್ ಮಾಡಿದ್ದರು. ಆದರೆ ಸ್ವಲ್ಪ ಸಮಯದ ನಂತರ, ಅಲ್ತಾಫ್ ಎಂಬ ಮಾಣಿ ಬಿರಿಯಾನಿ ಮುಗಿದಿದೆ ಎಂದು ಹೇಳಿದ್ದಾನೆ. ಮೊದಲೇ ಹಸಿದಿದ್ದು, ಬಿರಿಯಾನಿ ಇಲ್ಲ ಎನ್ನುತ್ತಿದ್ದಂತೆ ಇವರ ಪಿತ್ತ ನೆತ್ತಿಗೇರಿದ್ದು, ಹೊಟೇಲ್ ಸಿಬ್ಬಂದಿಯ ಕಾಲರ್ ಪಟ್ಟಿ ಹಿಡಿದಿದ್ದಾನೆ ಎಂದು ನೋಯ್ಡಾ ಎಸಿಪಿ ಮಹೇಂದ್ರ ದೇವ್ ಹೇಳಿಕೆ ಉಲ್ಲೇಖಿಸಿ ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ಘಟನೆಗೆ ಸಂಬಂಧಿಸಿದಂತೆ ನಾಲೆಜ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ (Knowledge Park police station) ಐಪಿಸಿ ಸೆಕ್ಷನ್ 323 (ಸ್ವಯಂಪ್ರೇರಿತವಾಗಿ ನೋವುಂಟು ಮಾಡಿದ್ದಕ್ಕಾಗಿ ಶಿಕ್ಷೆ) ಮತ್ತು 147 (ಗಲಭೆಗೆ ಶಿಕ್ಷೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಬಿರಿಯಾನಿಯಲ್ಲಿ ಪಾಲು ಕೇಳಿದ್ದಕ್ಕೆ ಬೆಂಕಿ ಹಚ್ಚಿದ ಪತಿ: ಪತ್ನಿ ಜತೆ ಗಂಡನೂ ಬಲಿ..!
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ