'ಪತ್ನಿ ವಿನಿಮಯ' ಬೇಡಿಕೆ ನಿರಾಕರಿಸಿದ್ದಕ್ಕಾಗಿ ಪತಿಯಿಂದ ಲೈಂಗಿಕ ಕಿರಕುಳ: ಅತ್ತೆ ಮಾವಂದಿರ ಸಾಥ್‌

Published : Oct 15, 2022, 06:03 PM IST
'ಪತ್ನಿ ವಿನಿಮಯ' ಬೇಡಿಕೆ ನಿರಾಕರಿಸಿದ್ದಕ್ಕಾಗಿ ಪತಿಯಿಂದ ಲೈಂಗಿಕ ಕಿರಕುಳ: ಅತ್ತೆ ಮಾವಂದಿರ ಸಾಥ್‌

ಸಾರಾಂಶ

Crime News: 'ಪತ್ನಿ ವಿನಿಮಯ'ದ ಬೇಡಿಕೆಯನ್ನು ನಿರಾಕರಿಸಿದ್ದಕ್ಕಾಗಿ ಪತ್ನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. 

ಮಧ್ಯಪ್ರದೇಶ (ಅ. 15):  'ಪತ್ನಿ ವಿನಿಮಯ'ದ ಬೇಡಿಕೆಯನ್ನು ನಿರಾಕರಿಸಿದ್ದಕ್ಕಾಗಿ ಪತ್ನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.  ಮಹಿಳೆ ತನ್ನ ಪತಿಯೊಂದಿಗೆ ಬಿಕಾನೇರ್‌ಗೆ ಹೋದಾಗ ಈ ಘಟನೆ ನಡೆದಿದೆ. ಈ ಸಂಬಂಧ ಸಂತ್ರಸ್ತ ಮಹಿಳೆ ಪೊಲೀಸರಿಗೆ ದೂರು ನೀಡಿದ್ದಾಳೆ. ತನ್ನ ಪತಿ ಮಾದಕ ವ್ಯಸನಿಯಾಗಿರುವುದು ಮತ್ತು ಇತರ ಮಹಿಳೆಯರೊಂದಿಗೆ ಸಂಬಂಧ ಹೊಂದಿದ್ದನ್ನು ತಿಳಿದು ಆಘಾತಕ್ಕೊಳಗಾಗಿದ್ದೇನೆ ಎಂದು ಮಹಿಳೆ ತನ್ನ ದೂರಿನಲ್ಲಿ ತಿಳಿಸಿದ್ದಾಳೆ.

ತನಗೆ ಬಿಕಾನೇರ್‌ನಲ್ಲಿ ಮನೆ ಇದೆ ಎಂದು ಮಹಿಳೆಯ ಕುಟುಂಬಕ್ಕೆ ತಿಳಿಸಿರುವ ಪತಿ ಆಕೆಯನ್ನು ಅಲ್ಲಿಗೆ ಕರೆದುಕೊಂಡು ಹೋಗಿದ್ದಾನೆ.  ಅಲ್ಲಿ ಆಕೆಯನ್ನು ತಾನು ಮ್ಯಾನೇಜರ್‌ ಆಗಿ ಕೆಲಸ ಮಾಡುತ್ತಿದ್ದ 5-ಸ್ಟಾರ್ ಹೋಟೆಲ್‌ನ ಕೊಠಡಿಯೊಂದರಲ್ಲಿ ಇರಿಸಿ ಚಿತ್ರಹಿಂಸೆ ನೀಡಿದ್ದಾನೆ. ಒಂದು ವಾರದ ಬಳಿಕ ಆರೋಪಿ ಪತಿ ಹೆಂಡತಿಯನ್ನು ವಿನಿಮಯ ಮಾಡಿಕೊಳ್ಳುವ ಬೇಡಿಕೆಯನ್ನು ಇಟ್ಟಿದ್ದಾನೆ. ಆದರೆ ಸಂತ್ರಸ್ತ ಮಹಿಳೆ ನಿರಾಕರಿಸಿದ ನಂತರ ಲೈಂಗಿಕ ಕಿರುಕುಳ ನೀಡಲು ಪ್ರಾರಂಭಿಸಿದ್ದಾನೆ. 

ಆರೋಪಿ ಪತಿ ಮಹಿಳೆಯನ್ನು 15 ದಿನಗಳ ಕಾಲ ಹೋಟೆಲ್ ಕೊಠಡಿಯಲ್ಲಿ ಇರಿಸಿದ್ದು, ಆಕೆಯ ಪೋಷಕರಿಂದ 50 ಲಕ್ಷ ರೂ ಡಿಮ್ಯಾಂಡ್‌ ಮಾಡಿದ್ದಾನೆ. ತನ್ನ ಗಂಡನ ಕೆಟ್ಟ ಹವ್ಯಾಸಗಳ ಬಗ್ಗೆ ಮತ್ತು ದುಷ್ಕೃತ್ಯಗಳ ಬಗ್ಗೆ ತನ್ನ ಅತ್ತೆ ಮಾವಂದಿರಿಗೆ ತಿಳಿಸಿದಾಗ, ಅವರು ಕೂಡ ಇದು 5-ಸ್ಟಾರ್ ಸಂಸ್ಕೃತಿ ಮತ್ತು ಎನ್ನುವ ಮೂಲಕ ಮಗನನ್ನುಬೆಂಬಲಿಸಿದರು ಎಂದು ಮಹಿಳೆ ತನ್ನ ದೂರಿನಲ್ಲಿ ಬಹಿರಂಗಪಡಿಸಿದ್ದಾರೆ.

ಲವರ್‌ಗಾಗಿ ಪ್ರಿಯತಮೆ ಆತ್ಮಹತ್ಯೆ: ಮಗಳ ಸಾವಿಗೆ ಕಾರಣನಾದ ಯುವಕನನ್ನು ಕೊಂದ ಯುವತಿ ಮನೆಯವರು..!

ಬಳಿಕ ಮಹಿಳೆ ತನಗಾದ ಕಷ್ಟವನ್ನು ತನ್ನ ಪೋಷಕರ ಬಳಿ ಹೇಳಿಕೊಂಡಿದ್ದಾಳೆ. “ನನ್ನ ಚಿಕ್ಕಪ್ಪ ನನ್ನನ್ನು ನನ್ನ ಪೋಷಕರ ಮನೆಗೆ ಕರೆತಂದರು. ನನ್ನ ಆರೋಗ್ಯ ಸ್ಥಿತಿ ಹದಗೆಟ್ಟಿತ್ತು ಮತ್ತು ಅಕ್ಟೋಬರ್ 3, 2022 ರಂದು ನನ್ನನ್ನು ಖಾಸಗಿ ಆಸ್ಪತ್ರೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಯಿತು, ”ಎಂದು ಮಹಿಳೆ ಪೊಲೀಸರಿಗೆ ತಿಳಿಸಿದ್ದಾರೆ. ಪೊಲೀಸರು ಆರೋಪಿ ಪತಿ ವಿರುದ್ಧ ಐಪಿಸಿ ಸೆಕ್ಷನ್ 377, 498(ಎ), 323, 506, 34 ಅನ್ವಯ ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ಮುಂದುವರೆದಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಚಿಕ್ಕಮಗಳೂರು ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹಂತಕರನ್ನು ಸುಮ್ಮನೆ ಬಿಡಲ್ಲ: ಸಿಎಂ ಡಿಸಿಎಂ
ಮಧುಗಿರಿ: ಕದ್ದ ಎಟಿಎಂ ಭಾರ ಇದೆ ಎಂದು ರಸ್ತೆಯಲ್ಲೇ ಬಿಟ್ಟು ಹೋದರು