ಸಿಬ್ಬಂದಿ ನಡುವೆ ವಾಗ್ವಾದ, ಕೈಬೆರಳು ಕಚ್ಚಿ ತುಂಡರಿಸಿದ ಭೂಪ!

Published : Sep 13, 2020, 04:48 PM IST
ಸಿಬ್ಬಂದಿ ನಡುವೆ ವಾಗ್ವಾದ, ಕೈಬೆರಳು ಕಚ್ಚಿ ತುಂಡರಿಸಿದ ಭೂಪ!

ಸಾರಾಂಶ

ಸಿಬ್ಬಂದಿ ನಡುವೆ ಜಗಳ/ ಕೈ ಬೆರಳು ಕಟ್ ಆಗಿ ಕಾರಿನಲ್ಲಿ ಬಿತ್ತು/ ಕೆಲಸದ ನಿಮಿತ್ತ ಮಾತನಾಡುತ್ತಿದ್ದ ಇನ್ಶೂರೆನ್ಸ್ ಕಂಪನಿ ಸಿಬ್ಬಂದಿ/ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಘಟನೆ

ನವದೆಹಲಿ(ಸೆ. 13) ಕಚೇರಿ ಮತ್ತು ಮನೆಯಲ್ಲಿ ನಡೆಯುವ ವಾಗ್ವಾದಗಳು ಒಮ್ಮೊಮ್ಮೆ ವಿಕೋಪದ ಹಂತಕ್ಕೆ ತಿರುಗಿ ಬಿಡುತ್ತವೆ. ಈ ಘಟನೆ ಸಹ ಅಂಥದ್ದೆ.

ಇನ್ಶೂರೆನ್ಸ್ ಕಂಪನಿಯ ಉದ್ಯೋಗಿಗಳ ನಡುವೆ ಉಂಟಾದ ವಾಗ್ವಾದ ವಿಕೋಪಕ್ಕೆ ತಿರುಗಿದೆ. ಪರಿಣಾಮ ಒಬ್ಬ ಸಿಬ್ಬಂದಿ ಇನ್ನೊಬ್ಬರ ಕೈ ಬೆರಳನ್ನೇ ಕಚ್ಚಿ ತುಂಡರಿಸಿದ್ದಾನೆ.

ದೆಹಲಿಯ ಮಯೂರ್ ವಿಹಾರ್ ದಲ್ಲಿ ಘಟನೆ ನಡೆದಿದೆ. ಹೇಮಂತ್ ಸಿದ್ಧಾರ್ಥ್ ಎಂಬಾತ ಮೋಹಿತ್ ಎಂಬುವರ ಬೆರಳು ಕಚ್ಚಿ ತುಂಡರಿಸಿದ್ದಾನೆ.

ಕಾಂಡೋಮ್ ಬಳಸು ಎಂದಿದ್ದಕ್ಕೆ ಕೊಲೆ ಮಾಡಿದ!

ಅಕ್ಷರಧಾಮದ ಬಳಿ ಭೇಟಿಯಾದ ಇಬ್ಬರು ಕೆಲಸದ ನಿಮಿತ್ತ ಗುರುವಾರ ಕರೋಲ್ ಭಾಘ್ ಕಡೆ ಪ್ರಯಾಣ ಬೆಳೆಸಿದ್ದರು.  ಅಲ್ಲಿಂದ ಮೋಹಿತ್ ಮನೆಗೆ ಬರುವನಿದ್ದ, ಆದರೆ ಈ ವೇಳೆ ಹೇಮಂತ್ ಕೆಲಸದಲ್ಲಿ ಸಹಾಯ ಮಾಡಲು ಕೇಳಿಕೊಂಡಿದ್ದಾನೆ.  ಕಾರಿನಲ್ಲಿಯೇ ಇಬ್ಬರ ನಡುವೆ ಜಗಳ ಶುರುವಾಗಿದೆ. ಮೋಹಿತ್  ತನ್ನ ಮುಖ ಮುಚ್ಚಿಕೊಳ್ಳಲು ಮುಂದಾದಾಗ ಆತ ಕೈಬೆರಳನ್ನೇ ಕಚ್ಚಿ ತುಂಡರಿಸಿದ್ದಾನೆ. 

ಹೇಗೋ ಕಾರಿನಿಂದ ತಪ್ಪಿಸಿಕೊಂಡ ಮೋಹಿತ್ ಅಲ್ಲಿಂದ ಪೊಲೀಸ್ ಸ್ಟೇಶನ್ ಗೆ ಬಂದು ದೂರು ನೀಡಿದ್ದಾನೆ. ಗಾಯಗೊಂಡ ಆತನನ್ನು ಆಸ್ಪತ್ರೆಗೆ ಸೇರಿಸಲಾಗಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಚಿಕ್ಕಮಗಳೂರು ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹಂತಕರನ್ನು ಸುಮ್ಮನೆ ಬಿಡಲ್ಲ: ಸಿಎಂ ಡಿಸಿಎಂ
ಮಧುಗಿರಿ: ಕದ್ದ ಎಟಿಎಂ ಭಾರ ಇದೆ ಎಂದು ರಸ್ತೆಯಲ್ಲೇ ಬಿಟ್ಟು ಹೋದರು