
ಬೆಂಗಳೂರು (ಫೆ.5): ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ದತ್ತು ಪುತ್ರ, ಪ್ರಧಾನಮಂತ್ರಿಗಳ ಕಾರ್ಯದರ್ಶಿ ಎಂದು ಹೇಳಿಕೊಂಡು ಕರ್ನಾಟಕ ರಾಜ್ಯಪಾಲರ ಲೆಟರ್ಹೆಡ್ನಲ್ಲಿ ರಾಜ್ಯಪಾಲರ ರೀತಿ ಸಹಿ ಮಾಡಿ ವಂಚಿಸುತ್ತಿದ್ದ ಸುಜಯ್ ಅಲಿಯಾಸ್ ಸುಜಯೇಂದ್ರ ವಿರುದ್ಧ ಲೋಕಭವನ ಎಫ್ಐಆರ್ ದಾಖಲಿಸಿದೆ. ಈ ಆರೋಪಿಯು ಹೆಲಿಕಾಪ್ಟರ್ ಮುಂದೆ ತಾನು ನಿಂತಿರುವ ಫೋಟೋಗಳನ್ನು ತೋರಿಸಿ ಏಮಾರಿಸುತ್ತಿದ್ದ.
ಆರೋಪಿಯು ರಾಜ್ಯಪಾಲರ ಆದೇಶವನ್ನು ಅನಧಿಕೃತವಾಗಿ ಬಳಸಿಕೊಂಡು 2025ರ ಜೂನ್ನಲ್ಲಿ ವಿಐಟಿ ವಿಶ್ವವಿದ್ಯಾಲಯದ ಕುಲಪತಿಗಳಿಗೆ ಕುಲಪತಿ ಹುದ್ದೆಯ ನೇಮಕಾತಿ ಪತ್ರವನ್ನು ಹೊರಡಿಸಿದ್ದ. ರಾಜ್ಯಪಾಲರ ಅಧಿಕೃತ ಲೆಟರ್ಹೆಡ್ ಅನ್ನೇ ಬಳಸಿಕೊಂಡು, ರಾಜ್ಯಪಾಲರ ನಕಲಿ ಸಹಿ ಮಾಡಿದ್ದ. ಈ ಸಂಬಂಧ 2026ರ ಜ.5ರಂದು ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗಳು ವಿಧಾನಸೌಧ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಆರೋಪಿಯ ಮನೆ ವಿಜಯನಗರ ವ್ಯಾಪ್ತಿಯಲ್ಲಿ ಇರುವುದರಿಂದ ಈ ಪ್ರಕರಣವನ್ನು ವಿಜಯನಗರ ಠಾಣೆಗೆ ವರ್ಗಾಯಿಸಲಾಗಿದೆ.
ಸುಜಯೇಂದ್ರ ವಿರುದ್ಧ ಈ ರೀತಿಯ ಆರೋಪಗಳು ಕೇಳಿಬರುತ್ತಿರುವುದು ಇದೇ ಮೊದಲೇನಲ್ಲ. ಕೇಂದ್ರ ಸಚಿವ ಅಮಿತ್ ಶಾ ಅವರ ವಿಶೇಷ ಅಧಿಕಾರಿ ಸೋಗಿನಲ್ಲಿ ಪ್ರತಿಷ್ಠಿತ ಮಠದ ಜಮೀನು ಕೊಡಿಸುವುದಾಗಿ ನಂಬಿಸಿ ಐಎಎಸ್ ಅಧಿಕಾರಿಯೊಬ್ಬರ ಸೋದರ ಸಂಬಂಧಿಗೆ 2.7 ಕೋಟಿ ರು. ಏಮಾರಿಸಿದ್ದ. ಜಮ್ಮು-ಕಾಶ್ಮೀರ ಮೂಲದ ವ್ಯಕ್ತಿ ದೂರು ನೀಡಿದ್ದರು. ಅದರ ಆಧಾರದ ಮೇಲೆ ಸುಜಯೇಂದ್ರನನ್ನು ಕೆಲ ತಿಂಗಳ ಹಿಂದೆ ಪೊಲೀಸರು ಬಂಧಿಸಿದ್ದರು.
ಕೇಂದ್ರ ಗೃಹ ಸಚಿವ ಅಮಿತ್ ಶಾ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿ ಹಲವು ರಾಜಕಾರಣಿಗಳು, ಮಠಾಧೀಶರ ಜತೆಗೆ ತೆಗೆಸಿಕೊಂಡಿರುವ ಫೋಟೋಗಳು ಪತ್ತೆಯಾಗಿದ್ದವು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ