ಮೂವರು ಮಕ್ಕಳಿಗೆ ನೇಣು ಬಿಗಿದು ತಂದೆಯೂ ಆತ್ಮಹತ್ಯೆ

Published : Nov 13, 2020, 04:04 PM IST
ಮೂವರು ಮಕ್ಕಳಿಗೆ ನೇಣು ಬಿಗಿದು ತಂದೆಯೂ ಆತ್ಮಹತ್ಯೆ

ಸಾರಾಂಶ

ಮೂವರು ಮಕ್ಕಳಿಗೆ ನೇಣು ಬಿಗಿದ ತಂದೆ ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿರುವ ಹೃದಯವಿದ್ರಾವಕ ಘಟನೆ ಬೆಂಗಳೂರಿನ  ನಡೆದಿದೆ.

ಬೆಂಗಳೂರು, (ನ.13): ಮೂವರು ಮಕ್ಕಳನ್ನು ನೇಣು ಬಿಗಿದು ಬಳಿಕ ತಂದೆಯೂ ಆತ್ಮಹತ್ಯೆಗೆ ಶರಣಾಗಿರುವ ಮನಕಲಕುವ ಘಟನೆ ನಗರದ ಮೈಕೋ ಲೇಔಟ್ ನ ರಮಣಶ್ರೀ ಎನ್ ಕ್ಲೇವ್ ಬಳಿ ಶುಕ್ರವಾರ ನಡೆದಿದೆ.

ಸರಸ್ವತಿ (14), ಹೇಮತಿ (9), ರಾಜ್ ಕುಮಾರ್ (3) ಮೃತ ಮಕ್ಕಳು. 32 ವರ್ಷದ ಜನಕರಾಜ್ ಬಿಸ್ತಾ ಎಂಬುವವರು ತಮ್ಮ ಮೂವರು ಮಕ್ಕಳನ್ನು ನೇಣು ಬಿಗಿದು ಬಳಿಕ ತಾವು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಪ್ರಿ ವೆಡ್ಡಿಂಗ್ ಪೋಟೋ ಶೂಟ್ ದುರಂತಕ್ಕೆ ಇದೆ ಕಾರಣ, ಎಚ್ಚರಿಕೆ ಕೊಟ್ಟ ಅವಘಡ!

ಮೃತ ಜನಕರಾಜ್ ಬಿಸ್ತಾ ಅವರು ರಮಣಶ್ರೀ ಎನ್ ಕ್ಲೇವ್ ನಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕಾರ್ಯನಿರ್ವಹಿಸುತ್ತಿದ್ದರು ಎಂದು ತಿಳಿದು ಬಂದಿದೆ.

2 ತಿಂಗಳ ಹಿಂದಷ್ಟೇ ಜನಕರಾಜ್ ಅವರ ಪತ್ನಿ ನಂದಾದೇವಿ ಆತ್ಮಹತ್ಯೆಗೆ ಶರಣಾಗಿದ್ದರು. ಆದ್ದರಿಂದ ಮಕ್ಕಳನ್ನು ನೋಡಿಕೊಳ್ಳಲಾರದೇ ಜೀವನದಲ್ಲಿ ಜುಗುಪ್ಸೆಗೊಂಡು ಜನಕರಾಜ್ ತಮ್ಮ ಮಕ್ಕಳನ್ನು ನೇಣಿಗೆ ಹಾಕಿ ತಾವು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.

ಸದ್ಯ, ನಾಲ್ವರ ಮೃತದೇಹಗಳನ್ನು ಪೊಲೀಸರು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಮೈಕೋ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಫೇಸ್‌ಬುಕ್‌ ಗೆಳತಿಗಾಗಿ ಮಡಿಕೇರಿಗೆ ಬಂದು ನರಕ ನೋಡಿದ ಮಂಡ್ಯದ ಹೈದ! ಬೆತ್ತಲೆಯಾಗಿ ಓಡೋಡಿ ಬಂದ!
ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?