
ಬೆಂಗಳೂರು (ಮಾ.28): ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ವಿಚಿತ್ರ ಪ್ರಕರಣವೊಂದು ದಾಖಲಾಗಿದೆ. ಸ್ನೇಹಿತರಿಬ್ಬರ ಹುಡುಗಾಟದಲ್ಲಿ ಘೋರ ಘಟನೆ ನಡೆದು ಓರ್ವ ಸಾವನ್ನಪ್ಪಿದ್ದಾನೆ. ಗುದದ್ವಾರಕ್ಕೆ ಗಾಳಿ ಹಿಡಿದ ಪರಿಣಾಮ ಓರ್ವ ಸ್ನೇಹಿತ ಸಾವು ಕಂಡಿದ್ದು, ಯೋಗಿಶ್ (28) ಮೃತ ಯುವಕನಾಗಿದ್ದಾನೆ.
ಯುಗಾದಿ ಹಬ್ಬದ ಮಾಂಸದ ಚೀಟಿ ಹಾಕಿದ್ದೀರಾ? ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
ಮಾ25ರಂದು ಬೈಕ್ ಸರ್ವೀಸ್ ಮಾಡಲು ಸಿಎನ್ ಎಸ್ ಬೈಕ್ ಸರ್ವೀಸ್ ಸೆಂಟರ್ ಗೆ ಮುರಳಿ ಎಂಬಾತ ಹೋಗಿದ್ದ ಇದೇ ವೇಳೆ ಅದೇ ಸೆಂಟರ್ ಗೆ ಯೋಗಿಶ್ ಕೂಡ ಬಂದಿದ್ದ. ಇಬ್ಬರೂ ಈ ವೇಳೆ ಏರ್ ಪ್ಲೇಜರ್ ಪೈಪ್ ನಿಂದ ಆಟ ಆಡಲು ಮುಂದಾಗಿದ್ದರು. ಮೊದಲಿಗೆ ಯೋಗಿಶ್ ನ ಮುಖ ಹಾಗೂ ಹೊಟ್ಟೆಗೆ ಮುರಳಿ ಗಾಳಿ ಬಿಟ್ಟಿದ್ದ. ಇದಾದ ಬಳಿಕ ಯೋಗಿಶ್ ಗುದದ್ವಾರಕ್ಕೆ ಮುರಳಿ ಗಾಳಿ ಬಟ್ಟಿದ್ದ. ಇದು ಎಡವಟ್ಟಿಗೆ ಕಾರಣವಾಯ್ತು.
ಬೆಂಗಳೂರು: ಸಿಕ್ಸ್ ಪ್ಯಾಕ್ ಗೆಳೆಯನ 'ಮೈನಾ' ಲವ್ ಸ್ಟೋರಿ; ವಿಶೇಷ ಚೇತನ ಹುಡುಗಿಗೆ 56 ಲಕ್ಷ ರೂ. ಪಂಗನಾಮ
ಯೋಗಿಶ್ ಗುದದ್ವಾರಕ್ಕೆ ಗಾಳಿ ಬಿಟ್ಟ ಕಾರಣ ಹೊಟ್ಟೆ ಉತಾ ಬಂದು ಕರಳು ಬ್ಲಾಸ್ಟ್ ಆಗಿದೆ. ತಕ್ಷಣ ಯೋಗಿಶ್ ನನ್ನ ಸ್ನೇಹಿತ ಮುರಳಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದ ಆದರೆ ಚಿಕಿತ್ಸೆ ಫಲಕಾರಿಯಾಗದೇ ಯೋಗಿಶ್ ಮೃತಪಟ್ಟಿದ್ದಾನೆ. ಘಟನೆ ಸಂಬಂಧ ಸಂಪಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸೆಕ್ಷನ್ 304 ಅಡಿ ಕೇಸ್ ದಾಖಲಿಸಿಕೊಂಡು ಸಂಪಿಗೇಹಳ್ಳಿ ಪೊಲೀಸರು ಸ್ನೇಹಿತ ಮುರಳಿಯನ್ನು ಬಂಧಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ